AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

My India My Life Goal: ಒಂದು ಕೋಟಿಗಳಿಗಿಂತಲೂ ಹೆಚ್ಚು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಿದ ‘ಟ್ರೀ ಮ್ಯಾನ್’ ರಾಮಯ್ಯ

ಮಾನವನ ಉಳಿವಿಗಾಗಿ ಪ್ರಕೃತಿ ಎಷ್ಟು ಮುಖ್ಯ ಎಂದು ನಮಗೆಲ್ಲರಿಗೂ ತಿಳಿದಿದೆ. ಇಡೀ ಮಾನವ ಕುಲವೇ ಪ್ರಕೃತಿಯ ಮೇಲೆ ದಬ್ಬಾಳಿಕೆ ಮಾಡುತ್ತಿರುವಾಗ ಕೆಲವೇ ಕೆಲವರು ಆ ಪ್ರಕೃತಿಯನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅಂತಹವರಲ್ಲಿ ಟ್ರೀ ಮ್ಯಾನ್ ರಾಮಯ್ಯ ಅವರು ಕೂಡಾ ಒಬ್ಬರು. ಇವರ ಪರಿಸರ ಸಂರಕ್ಷಣೆಯ ಅಭಿಯಾನ ನಮಗೆಲ್ಲರಿಗೂ ಮಾದರಿ.

My India My Life Goal: ಒಂದು ಕೋಟಿಗಳಿಗಿಂತಲೂ ಹೆಚ್ಚು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಿದ ‘ಟ್ರೀ ಮ್ಯಾನ್’ ರಾಮಯ್ಯ
ಟ್ರೀ ಮ್ಯಾನ್ ರಾಮಯ್ಯ
ಮಾಲಾಶ್ರೀ ಅಂಚನ್​
| Edited By: |

Updated on: Aug 07, 2023 | 6:31 PM

Share

ಸಕಲ ಜೀವರಾಶಿಗಳಿಗೂ ಆಧಾರಸ್ತಂಭ ಪರಿಸರ. ನಾವು ಪರಿಸರವನ್ನು ರಕ್ಷಿಸಿದರೆ ಮಾತ್ರ ನಮ್ಮ ಮುಂದಿನ ಪೀಳಿಗೆಯು ಈ ಭೂಮಿಯ ಮೇಲೆ ಜೀವಿಲು ಸಾಧ್ಯ. ಅದರಲ್ಲೂ ಇಂದಿನ ದಿನಗಳಲ್ಲಿ ಮಾನವನ ಸ್ವಾರ್ಥದಿಂದಾಗಿ ಪರಿಸರವು ವಿನಾಶದತ್ತ ಸಾಗುತ್ತಿದೆ. ನಮ್ಮ ಸ್ವಾರ್ಥದಿಂದಾಗಿ ಪ್ರಕೃತಿಯಲ್ಲಿ ಅದೆಷ್ಟೋ ಜೀವರಾಶಿಗಳು ಅಳಿವಿನಂಚಿನಲ್ಲಿವೆ. ಹಾಗಾಗಿ ಪರಿಸರ ಸಂರಕ್ಷಣೆಗಾಗಿ ದೇಶ ವಿದೇಶಗಳಲ್ಲಿ ಸರ್ಕಾರ, ಸಂಘಟನೆಗಳು ಹಲವಾರು ಅಭಿಯಾನಗಳನ್ನು ಜಾರಿಗೆ ತಂದಿವೆ. ಅದೇ ರೀತಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸರ್ಕಾರವು ಮೈ ಇಂಡಿಯಾ ಮೈ ಲೈಫ್ ಗೋಲ್ ಎಂಬ ಅಭಿಯಾನವನ್ನು ರೂಪಿಸಿದೆ. ಈ ಅಭಿಯಾನದಲ್ಲಿ ಟಿವಿ9 ಕೂಡ ತನ್ನ ಸಹಭಾಗಿತ್ವವನ್ನು ಹೊಂದಿದೆ. ಈ ಮೂಲಕ ನಿಮ್ಮ ಕೈಲಾದಷ್ಟು ಮರಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಅಭಿಯಾನದಲ್ಲಿ ಭಾಗಿಯಾಗಿ ಎಂದು ಕೇಳಿಕೊಳ್ಳುತ್ತೇವೆ.

ನಾವು ಚಿಕ್ಕಂದಿನಿಂದಲೂ ಮಾನವನ ಉಳಿವಿಗಾಗಿ ಪರಿಸರವನ್ನು ರಕ್ಷಿಸಲು ಸಹಾಯ ಮಾಡೋಣ ಎಂಬ ಮಾತುಗಳನ್ನು ಕೇಳುತ್ತಾ ಬರುತ್ತಿದೇವೆ. ಆದರೆ ನಮ್ಮನ್ನು ನಾವು ಪ್ರಶ್ನೆ ಮಾಡಿಕೊಳ್ಳಬೇಕಾಗಿದೆ. ಪರಿಸರ ಸಂರಕ್ಷಣೆಗೆ ನಾವೆಷ್ಟು ಕೊಡುಗೆ ನೀಡಿದ್ದೇವೆ ಎಂದು? ಎಳ್ಳಿನಷ್ಟು ಪರಿಸರ ಸಂರಕ್ಷಣೆಗೆ ಸಹಾಯವಾಗದ ಜನರ ಮಧ್ಯೆ ಇಲ್ಲೊಬ್ಬ ವ್ಯಕ್ತಿ ಒಂದು ಕೋಟಿಗೂ ಹೆಚ್ಚು ಗಿಡಗಳನ್ನು ನೆಟ್ಟು ಪರಿಸರವನ್ನು ರಕ್ಷಿಸುವಂತಹ ಕಾರ್ಯದಲ್ಲಿ ತೊಡಗಿದ್ದಾರೆ. ಅವರು ಬೇರೆ ಯಾರು ಅಲ್ಲ, ಟ್ರೀ ಮ್ಯಾನ್ ಅಂತಾನೇ ಪ್ರಖ್ಯಾತಿ ಹೊಂದಿರುವ ತೆಲಂಗಾಣದ ರಾಮಯ್ಯ. ಪ್ರಸ್ತುತ 86 ವರ್ಷ ವಯಸ್ಸಿನ ರಾಮಯ್ಯ ಇಲ್ಲಿಯವರೆಗೆ ಕೋಟಿಗಟ್ಟಲೆ ಸಸಿಗಳನ್ನು ನೆಟ್ಟು ನಮಗೆಲ್ಲರಿಗೂ ಮಾದರಿಯಾಗಿದ್ದಾರೆ.

ತೆಲಂಗಾಣದ ಖಮ್ಮಂ ಜಿಲ್ಲೆಯ ರೆಡ್ಡಿಪಲ್ಲಿಯ ದಾರಿಪಲ್ಲಿ ರಾಮಯ್ಯ ತಮ್ಮ ಈ ಇಳಿ ವಯಸ್ಸಿನಲ್ಲೂ ಗಿಡಗಳನ್ನು ಸೈಕಲ್ ಮೇಲೆ ಹೊತ್ತು ತಂದು ನೆಡುತ್ತಾರೆ. ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗುವಾಗ ಗಿಡಗಳು ಮತ್ತು ಬೀಜಗಳನ್ನು ತೆಗೆದುಕೊಂಡು ಹೋಗಿ ಖಾಲಿ ಸ್ಥಳಗಳಲ್ಲಿ ಅವುಗಳನ್ನು ಬಿತ್ತುತ್ತಾರೆ. ಅಲ್ಲದೆ ಮರಗಳ ಬೀಜಗಳನ್ನು ಬೇಸಿಗೆಯಲ್ಲಿ ಸಂಗ್ರಹಿಸಿ ಮಳೆಗಾಲದಲ್ಲಿ ಅವುಗಳನ್ನು ಬಿತ್ತುತ್ತಾರೆ. ಪರಿಸರ ಪ್ರೇಮಿ ರಾಮಯ್ಯನವರ ದಿನಚರಿ ಶುರುವಾಗುವುದು ಸಸಿಗಳನ್ನು ನೆಡುವ ಮೂಲಕ. ಸಸಿಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳಿಗೆ ಪ್ರತಿನಿತ್ಯ ನೀರು ಹಾಕುತ್ತಾ ಅವುಗಳನ್ನು ಪೋಷಿಸುತ್ತಾರೆ. ಯಾರೇ ಕಾಣಿಸಿಕೊಂಡರೂ ಸಸಿ ನೆಟ್ಟರೆ ಮಾತ್ರ ಮಾನವನ ಉಳಿವು, ಇಲ್ಲದಿದ್ದರೆ ಭವಿಷ್ಯ ಕತ್ತಲು.. ಹಾಗಾಗಿ ಸಸಿಗಳನ್ನು ನೆಟ್ಟು ವೃಕ್ಷ ರಕ್ಷಣೆ ಮಾಡಿ ಎಂದು ಹೇಳುತ್ತಿರುತ್ತಾರೆ.

ಇದನ್ನೂ ಓದಿ: ಸಸಿ ನೆಡಲು ಹಣವಿಲ್ಲದಾದಾಗ ಕೋಟಿಮರವೀರ ಪದ್ಮಶ್ರೀ ರಾಮಯ್ಯ ತಮ್ಮ ಮೂರೆಕರೆ ಜಮೀನು ಮಾರಿಬಿಟ್ಟರು!

ಒಂದು ಸಮಯದಲ್ಲಿ ಇವರ ಗಿಡ ನೆಡುವ ಸತ್ಕಾರ್ಯಕ್ಕೆ ಹಣ ಸಾಲದಿದ್ದಾಗ, ತನ್ನ ಮೂರು ಎಕರೆ ಜಮೀನನ್ನು ಮಾರಿ ಅದರಿಂದ ಬಂದಂತಹ ಹಣದಿಂದ ಗಿಡ ನೆಡುವ ಕಾರ್ಯವನ್ನು ಮುಂದುವರೆಸುತ್ತಾರೆ. ರಾಮಯ್ಯ ಅವರು ಓದಿದ್ದು 5 ನೇ ತರಗತಿಯವೆಗೆ ಮಾತ್ರ. ಅಂದು ಅವರ ಶಾಲೆಯಲ್ಲಿ ಶಿಕ್ಷಕರೊಬ್ಬರು ಗಿಡ ನೆಡುವ ಪ್ರಾಮುಖ್ಯತೆಯ ಬಗ್ಗೆ ಪಾಠ ಮಾಡುತ್ತಾರೆ. ಇದು ರಾಮಯ್ಯ ಅವರ ಮೇಲೆ ಗಾಢವಾದ ಪ್ರಭಾವ ಬೀರಿ ಇಂದು ಒಂದು ಕೋಟಿಗಿಂತಲೂ ಹೆಚ್ಚು ಗಿಡಗಳನ್ನು ನೆಟ್ಟು ಟ್ರೀ ಮ್ಯಾನ್ ಎಂಬ ಬಿರುದನ್ನು ಗಳಿಸಿದ್ದಾರೆ.

ಪರಿಸರವಾದಿ ರಾಮಯ್ಯ ಅವರ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಅವರನ್ನು ಗೌರವಿಸಿದೆ. ಅಲ್ಲದೆ ರಾಮಯ್ಯನವರ ಈ ಸೇವೆಗಾಗಿ ತೆಲಂಗಾಣ ಸರ್ಕಾರವು ರಾಮಯ್ಯನವರ ಜೀವನ ಚರಿತ್ರೆಯನ್ನು ಪಠ್ಯಕ್ರಮದಲ್ಲಿ ಸೇರಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ