AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾನ ವಿಗ್ರಹ ಫೈನಲ್, ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ: ಬಿಮಲೇಂದ್ರ

ರಾಮಲಲ್ಲಾ ಮೂರ್ತಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವಿರೋಧವಾಗಿ ಆಯ್ಕೆಯಾದ ವಿಗ್ರಹದ 'ಪ್ರಾಣ ಪ್ರತಿಷ್ಠೆಯನ್ನು ಮುಂದಿನ ತಿಂಗಳು ಜನವರಿ 22ರಂದು ಮಾಡಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ತಿಳಿಸಿದ್ದಾರೆ. ಇನ್ನು ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ, ನೀವು ಅದನ್ನು ಒಮ್ಮೆ ನೋಡಿದ್ರೆ ಮಂತ್ರಮುಗ್ಧರಾಗುತ್ತೀರಿ ಎಂದು ಹೇಳಿದ್ದಾರೆ.

ರಾಮಲಲ್ಲಾನ ವಿಗ್ರಹ ಫೈನಲ್, ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ: ಬಿಮಲೇಂದ್ರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 30, 2023 | 12:54 PM

Share

ಅಸಂಖ್ಯಾತ ರಾಮಭಕ್ತರು ಎಷ್ಟು ವರ್ಷಗಳಿಂದ ಶಬರಿಯಂತೆ ಕಾಯುತ್ತಿರುವ ರಾಮಮಂದಿರ ಉದ್ಟಾಟನೆ ಜನವರಿ 22ರಂದು ನಡೆಯಲಿದೆ. ಇದಕ್ಕೂ ಮುನ್ನ ರಾಮನ ಬಾಲ್ಯದಮೂರ್ತಿ (5 ವರ್ಷದ ಮಗುವಿನ ರೂಪದ ವಿಗ್ರಹ) ಆಯ್ಕೆಯಾಗಬೇಕು, ಅದಕ್ಕಾಗಿ ನೆನ್ನೆ ರಾಮಜನ್ಮಭೂಮಿ ಟ್ರಸ್ಟ್​​ ಸಭೆಯೊಂದನ್ನು ನಡೆಸಿ, ಮತ ಹಾಕುವ ಮೂಲಕ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡಲಾಗಿದೆ. ಮೂರು ಮೂರ್ತಿಗಳಲ್ಲಿ ಈಗ ಒಂದನ್ನು ಆಯ್ಕೆ ಮಾಡಲಾಗಿದೆ. ಈ ಆಯ್ಕೆಯಾದ ವಿಗ್ರಹವನ್ನು ಅಯೋಧ್ಯೆ ರಾಮಮಂದಿರದ ಗರ್ಭ ಗುಡಿಯಲ್ಲಿ ‘ಪ್ರಾಣ ಪ್ರತಿಷ್ಠೆ ಮಾಡಲಾಗುವುದು.

ರಾಮಲಲ್ಲಾ ಮೂರ್ತಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವಿರೋಧವಾಗಿ ಆಯ್ಕೆಯಾದ ವಿಗ್ರಹದ ‘ಪ್ರಾಣ ಪ್ರತಿಷ್ಠೆಯನ್ನು ಮುಂದಿನ ತಿಂಗಳು ಜನವರಿ 22ರಂದು ಮಾಡಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ತಿಳಿಸಿದ್ದಾರೆ. ಇನ್ನು ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ, ನೀವು ಅದನ್ನು ಒಮ್ಮೆ ನೋಡಿದ್ರೆ ಮಂತ್ರಮುಗ್ಧರಾಗುತ್ತೀರಿ ಎಂದು ಹೇಳಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಕಾರ್ಯದರ್ಶಿ ಚಂಪತ್ ರೈ ಅವರು ಮಾತನಾಡಿ, ರಾಮ ಮೂರ್ತಿ ಆಯ್ಕೆ ಬಗ್ಗೆ ಸಭೆಯನ್ನು ಮಾಡಿ, ಮತ ಹಾಕುವ ಮೂಲಕ ಮೂರ್ತಿಯನ್ನು ಆಯ್ಕೆ ಮಾಡಲಾಗಿದೆ. ನಮ್ಮ ಮುಂದೆ ಹಲವಾರು ಮೂರ್ತಿಗಳನ್ನು ಒಟ್ಟಿಗೆ ಇರಿಸಿದರೂ, ಅದರಲ್ಲಿ ಯಾವುದು ಉತ್ತಮ ಎನ್ನುವುದನ್ನು ನಾವು ಆಯ್ಕೆ ಮಾಡಬೇಕಿತ್ತು. ಇದರಲ್ಲಿ ಒಂದು ಕಾಕತಾಳೀಯವೆಂದರೆ ನಾನು ಒಂದು ವಿಗ್ರಹವನ್ನು ಇಷ್ಟಪಟ್ಟಿದೆ. ಅದೇ ವಿಗ್ರಹಕ್ಕೆ ಎಲ್ಲರೂ ಮತ ಹಾಕಿದ್ದಾರೆ. ಇದು ಒಂದು ನನಗೆ  ಸಂತೋಷದ ವಿಷಯ ಎಂದು ಹೇಳಿದ್ದಾರೆ. ಈಗ ಈ ಬಗ್ಗೆ ಎಲ್ಲರೂ ಒಂದು ನಿರ್ಧಾರವನ್ನು ತೆಗೆದುಕೊಂಡು. ಸರ್ವಾನುಮತದಿಂದ ಆಯ್ಕೆಯಾದ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆಗೆ ತರಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ: ಪ್ರಧಾನಿ ಮೋದಿ

ಅಯೋಧ್ಯೆಯ ರಾಮಮಂದಿರದಲ್ಲಿ ರಾಮ್ ಲಲ್ಲಾನ ಪ್ರಾಣ-ಪ್ರತಿಷ್ಠೆ ಸಮಾರಂಭವು ಜನವರಿ 22, 2024 ರಂದು ಮಧ್ಯಾಹ್ನ 12:20 ಕ್ಕೆ ನಡೆಯಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮನ 5 ವರ್ಷದ ಮಗುವಿನ ರೂಪದ ವಿಗ್ರಹವನ್ನು ಇರಿಸಲಾಗುತ್ತದೆ ಎಂದು ಹೇಳಿದ್ದಾರೆ. ಮಹಾಮಸ್ತಕಾಭಿಷೇಕದ ನಂತರ ಭಕ್ತರು ರಾಮ್ ಲಲ್ಲಾನ ದರ್ಶನವನ್ನು ಪಡೆಯಬಹುದು. ಗರ್ಭ ಗೃಹವು ದೇವಾಲಯದ ಪ್ರಧಾನ ದೇವತೆಯ ವಾಸಸ್ಥಾನವಾಗಿ ಕಾರ್ಯನಿರ್ವಹಿಸುವುದರಿಂದ ಅತ್ಯಂತ ಮಹತ್ವದ್ದಾಗಿದೆ. ಅಯೋಧ್ಯೆಯ ರಾಮ ಮಂದಿರವು ಅದ್ಭುತವಾದ ಗರ್ಭಗುಡಿಯನ್ನು ಹೊಂದಿದ್ದು. ಇದು ವಿಶ್ವದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Sat, 30 December 23

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು