Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾನ ವಿಗ್ರಹ ಫೈನಲ್, ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ: ಬಿಮಲೇಂದ್ರ

ರಾಮಲಲ್ಲಾ ಮೂರ್ತಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವಿರೋಧವಾಗಿ ಆಯ್ಕೆಯಾದ ವಿಗ್ರಹದ 'ಪ್ರಾಣ ಪ್ರತಿಷ್ಠೆಯನ್ನು ಮುಂದಿನ ತಿಂಗಳು ಜನವರಿ 22ರಂದು ಮಾಡಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ತಿಳಿಸಿದ್ದಾರೆ. ಇನ್ನು ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ, ನೀವು ಅದನ್ನು ಒಮ್ಮೆ ನೋಡಿದ್ರೆ ಮಂತ್ರಮುಗ್ಧರಾಗುತ್ತೀರಿ ಎಂದು ಹೇಳಿದ್ದಾರೆ.

ರಾಮಲಲ್ಲಾನ ವಿಗ್ರಹ ಫೈನಲ್, ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ: ಬಿಮಲೇಂದ್ರ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 30, 2023 | 12:54 PM

ಅಸಂಖ್ಯಾತ ರಾಮಭಕ್ತರು ಎಷ್ಟು ವರ್ಷಗಳಿಂದ ಶಬರಿಯಂತೆ ಕಾಯುತ್ತಿರುವ ರಾಮಮಂದಿರ ಉದ್ಟಾಟನೆ ಜನವರಿ 22ರಂದು ನಡೆಯಲಿದೆ. ಇದಕ್ಕೂ ಮುನ್ನ ರಾಮನ ಬಾಲ್ಯದಮೂರ್ತಿ (5 ವರ್ಷದ ಮಗುವಿನ ರೂಪದ ವಿಗ್ರಹ) ಆಯ್ಕೆಯಾಗಬೇಕು, ಅದಕ್ಕಾಗಿ ನೆನ್ನೆ ರಾಮಜನ್ಮಭೂಮಿ ಟ್ರಸ್ಟ್​​ ಸಭೆಯೊಂದನ್ನು ನಡೆಸಿ, ಮತ ಹಾಕುವ ಮೂಲಕ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡಲಾಗಿದೆ. ಮೂರು ಮೂರ್ತಿಗಳಲ್ಲಿ ಈಗ ಒಂದನ್ನು ಆಯ್ಕೆ ಮಾಡಲಾಗಿದೆ. ಈ ಆಯ್ಕೆಯಾದ ವಿಗ್ರಹವನ್ನು ಅಯೋಧ್ಯೆ ರಾಮಮಂದಿರದ ಗರ್ಭ ಗುಡಿಯಲ್ಲಿ ‘ಪ್ರಾಣ ಪ್ರತಿಷ್ಠೆ ಮಾಡಲಾಗುವುದು.

ರಾಮಲಲ್ಲಾ ಮೂರ್ತಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವಿರೋಧವಾಗಿ ಆಯ್ಕೆಯಾದ ವಿಗ್ರಹದ ‘ಪ್ರಾಣ ಪ್ರತಿಷ್ಠೆಯನ್ನು ಮುಂದಿನ ತಿಂಗಳು ಜನವರಿ 22ರಂದು ಮಾಡಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ತಿಳಿಸಿದ್ದಾರೆ. ಇನ್ನು ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ, ನೀವು ಅದನ್ನು ಒಮ್ಮೆ ನೋಡಿದ್ರೆ ಮಂತ್ರಮುಗ್ಧರಾಗುತ್ತೀರಿ ಎಂದು ಹೇಳಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಕಾರ್ಯದರ್ಶಿ ಚಂಪತ್ ರೈ ಅವರು ಮಾತನಾಡಿ, ರಾಮ ಮೂರ್ತಿ ಆಯ್ಕೆ ಬಗ್ಗೆ ಸಭೆಯನ್ನು ಮಾಡಿ, ಮತ ಹಾಕುವ ಮೂಲಕ ಮೂರ್ತಿಯನ್ನು ಆಯ್ಕೆ ಮಾಡಲಾಗಿದೆ. ನಮ್ಮ ಮುಂದೆ ಹಲವಾರು ಮೂರ್ತಿಗಳನ್ನು ಒಟ್ಟಿಗೆ ಇರಿಸಿದರೂ, ಅದರಲ್ಲಿ ಯಾವುದು ಉತ್ತಮ ಎನ್ನುವುದನ್ನು ನಾವು ಆಯ್ಕೆ ಮಾಡಬೇಕಿತ್ತು. ಇದರಲ್ಲಿ ಒಂದು ಕಾಕತಾಳೀಯವೆಂದರೆ ನಾನು ಒಂದು ವಿಗ್ರಹವನ್ನು ಇಷ್ಟಪಟ್ಟಿದೆ. ಅದೇ ವಿಗ್ರಹಕ್ಕೆ ಎಲ್ಲರೂ ಮತ ಹಾಕಿದ್ದಾರೆ. ಇದು ಒಂದು ನನಗೆ  ಸಂತೋಷದ ವಿಷಯ ಎಂದು ಹೇಳಿದ್ದಾರೆ. ಈಗ ಈ ಬಗ್ಗೆ ಎಲ್ಲರೂ ಒಂದು ನಿರ್ಧಾರವನ್ನು ತೆಗೆದುಕೊಂಡು. ಸರ್ವಾನುಮತದಿಂದ ಆಯ್ಕೆಯಾದ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆಗೆ ತರಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ: ಪ್ರಧಾನಿ ಮೋದಿ

ಅಯೋಧ್ಯೆಯ ರಾಮಮಂದಿರದಲ್ಲಿ ರಾಮ್ ಲಲ್ಲಾನ ಪ್ರಾಣ-ಪ್ರತಿಷ್ಠೆ ಸಮಾರಂಭವು ಜನವರಿ 22, 2024 ರಂದು ಮಧ್ಯಾಹ್ನ 12:20 ಕ್ಕೆ ನಡೆಯಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮನ 5 ವರ್ಷದ ಮಗುವಿನ ರೂಪದ ವಿಗ್ರಹವನ್ನು ಇರಿಸಲಾಗುತ್ತದೆ ಎಂದು ಹೇಳಿದ್ದಾರೆ. ಮಹಾಮಸ್ತಕಾಭಿಷೇಕದ ನಂತರ ಭಕ್ತರು ರಾಮ್ ಲಲ್ಲಾನ ದರ್ಶನವನ್ನು ಪಡೆಯಬಹುದು. ಗರ್ಭ ಗೃಹವು ದೇವಾಲಯದ ಪ್ರಧಾನ ದೇವತೆಯ ವಾಸಸ್ಥಾನವಾಗಿ ಕಾರ್ಯನಿರ್ವಹಿಸುವುದರಿಂದ ಅತ್ಯಂತ ಮಹತ್ವದ್ದಾಗಿದೆ. ಅಯೋಧ್ಯೆಯ ರಾಮ ಮಂದಿರವು ಅದ್ಭುತವಾದ ಗರ್ಭಗುಡಿಯನ್ನು ಹೊಂದಿದ್ದು. ಇದು ವಿಶ್ವದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Sat, 30 December 23

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ