AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanuja Sahasrabdi: ಶ್ರೀರಾಮಾನುಜಾಚಾರ್ಯರ ಸಹಸ್ರಾಬ್ದಿ; ಮೂರನೇ ದಿನದ ಕಾರ್ಯಕ್ರಮ ಸಂಪನ್ನ

ತೆಲಂಗಾಣದ ಚಿನ್ನ ಜೀಯರ್ ಸ್ವಾಮಿ ಆಶ್ರಮದ ಸಮೀಪದಲ್ಲಿ ಇರುವ ಶ್ರೀರಾಮಾನುಜಾಚಾರ್ಯರ ಪ್ರತಿಮೆಯು ಶೀಘ್ರವೇ ರಾಜ್ಯದ ಪ್ರಮುಖ ಪ್ರವಾಸಿ ತಾಣ ಆಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

Ramanuja Sahasrabdi: ಶ್ರೀರಾಮಾನುಜಾಚಾರ್ಯರ ಸಹಸ್ರಾಬ್ದಿ; ಮೂರನೇ ದಿನದ ಕಾರ್ಯಕ್ರಮ ಸಂಪನ್ನ
ಸಮಾನತೆಯ ಮೂರ್ತಿ
TV9 Web
| Edited By: |

Updated on:Feb 04, 2022 | 9:13 PM

Share

ಹೈದರಾಬಾದ್: ಶ್ರೀರಾಮಾನುಜಾಚಾರ್ಯರ ಸಹಸ್ರಾಬ್ದಿಯ ಮೂರನೇ ದಿನದ ಕಾರ್ಯಕ್ರಮಗಳು ಇಂದು (ಫೆಬ್ರವರಿ 4) ಹೈದರಾಬಾದ್​ನ ಹೊರವಲಯದ ಮುಂಚಿತ್ತಾಲ್​ನಲ್ಲಿ ನಡೆಯಿತು. ಅಷ್ಟಾಕ್ಷರಿ ಮಂತ್ರ ಪಠಿಸುವ ಮೂಲಕ ಆಚರಣೆಗಳನ್ನು ಆರಂಭಿಸಲಾಯಿತು. ಈ ಮಂತ್ರಪಠಣ ಕಾರ್ಯಕ್ರಮವು ಫೆಬ್ರವರಿ 14ರ ವರೆಗೆ, ಐದು ಸಾವಿರಕ್ಕೂ ಅಧಿಕ ಋತ್ವಿಕರ ಸಮ್ಮುಖದಲ್ಲಿ ನಡೆಯಲಿದೆ. ಇಂದಿನ ಸಮಾರಂಭಕ್ಕೆ ನಗರದ ವಿವಿಧ ಭಾಗಗಳ ಜನರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದರು.

ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ತಮ್ಮ ಪತ್ನಿ ಶೋಭಾ ಸಹಿತರಾಗಿ ಸಹಸ್ರಾಬ್ದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಚಿನ್ನ ಜೀಯರ್ ಸ್ವಾಮಿ ಆಶ್ರಮದ ಸಮೀಪದಲ್ಲಿ ಇರುವ ಶ್ರೀರಾಮಾನುಜಾಚಾರ್ಯರ ಪ್ರತಿಮೆಯು ಶೀಘ್ರವೇ ರಾಜ್ಯದ ಪ್ರಮುಖ ಪ್ರವಾಸಿ ತಾಣ ಆಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ರಾಮಾನುಜಾಚಾರ್ಯರು ಸಮಾನತೆ, ಗೌರವ ಹಾಗೂ ಶಾಂತಿಯನ್ನು ಸುಮಾರು ಸಾವಿರ ವರ್ಷಗಳ ಹಿಂದೆ ಬೋಧಿಸಿದರು ಎಂದು ಹೇಳಿದರು.

ಮುಂಚಿತ್ತಾಲ್ ಸಮಾನತೆಯ ಮೂರ್ತಿ ಕಾರಣದಿಂದ ಪ್ರಾಮುಖ್ಯತೆ ಪಡೆಯಲಿದೆ. ಈ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 5 ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್ ಹಾಗೂ ಆಶ್ರಮದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಕೆಸಿಆರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ ಸ್ಥಳದಲ್ಲಿ ಶ್ರೀ ಲಕ್ಷ್ಮೀನಾರಾಯಣ ಮಹಾಯಜ್ಞ ನಡೆಯುತ್ತಿದೆ. 1.5 ಲಕ್ಷ ಲೀಟರ್​ನಷ್ಟು ಹಸುವಿನ ಶುದ್ಧ ತುಪ್ಪದಿಂದ ಯಾಗ ನಡೆಸಲಾಗುತ್ತಿದೆ. ಈ ಯಾಗವು ಕೊವಿಡ್19 ಮಾತ್ರವಲ್ಲದೆ ಇತರ ವೈರಸ್​ಗಳಾದ ಅಸಮಾನತೆ, ದ್ವೇಷಗಳಿಂದ ನಮ್ಮನ್ನು ಹೊರತರಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ನಾಲ್ಕನೇ ದಿನವಾದ ನಾಳೆ (ಫೆಬ್ರವರಿ 5) ಅನುಷ್ಠಾನಮ್ ಮಂತ್ರ ಪಠಿಸಲಾಗುವುದು. ಅದರಿಂದ ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ಸಮಾಜದ ಒಳಿತನ್ನು ಬಯಸಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: Statue of Equality: ಹೈದರಾಬಾದ್​ನಲ್ಲಿ ರಾಮಾನುಜಾಚಾರ್ಯರ ಪ್ರತಿಮೆ ಉದ್ಘಾಟನೆಗೆ ಸಕಲ ಸಿದ್ಧತೆ

ಇದನ್ನೂ ಓದಿ: ಫೆ. 5ರಂದು ಹೈದರಾಬಾದ್​ಗೆ ಪ್ರಧಾನಿ ಮೋದಿ ಭೇಟಿ; ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆ ಅನಾವರಣ

Published On - 9:07 pm, Fri, 4 February 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್