AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanujacharya Statue: ರಾಮಾನುಜಾಚಾರ್ಯ ಸಹಸ್ರಾಬ್ದಿ ಕಾರ್ಯಕ್ರಮಗಳ ಆರಂಭಕ್ಕೆ ಭರದ ಸಿದ್ಧತೆ

ಶ್ರೀ ರಾಮಾನುಜಾಚಾರ್ಯರ 1003ನೇ ಜಯಂತಿ ಅಂಗವಾಗಿ ಸಮತಾಮೂರ್ತಿ ಸ್ಥಾಪನೆಯಾಗಲಿದ್ದು, 14 ದಿನಗಳ ಉತ್ಸವದಲ್ಲಿ ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅನೇಕ ಕೇಂದ್ರ ಸಚಿವರುಗಳು, 9 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.

Ramanujacharya Statue: ರಾಮಾನುಜಾಚಾರ್ಯ ಸಹಸ್ರಾಬ್ದಿ ಕಾರ್ಯಕ್ರಮಗಳ ಆರಂಭಕ್ಕೆ ಭರದ ಸಿದ್ಧತೆ
ಶ್ರೀ ರಾಮಾನುಜಾಚಾರ್ಯ ಸಹಸ್ರಾಬ್ದಿ ಕಾರ್ಯಕ್ರಮಗಳ ಆರಂಭ
TV9 Web
| Updated By: ಸಾಧು ಶ್ರೀನಾಥ್​|

Updated on:Feb 02, 2022 | 2:54 PM

Share

ದೀರ್ಘ ಕಾಲದಿಂದ ನಿರೀಕ್ಷಣೆಯಲ್ಲಿದ್ದ ಶ್ರೀ ರಾಮಾನುಜಾಚಾರ್ಯ ಸಹಸ್ರಾಬ್ದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಮತಾಮೂರ್ತಿ (Statue of Equality) ಎಂದು ಜನಜನಿತರಾದ ಸಂತ ಶ್ರೀ ರಾಮಾನುಜಾಚಾರ್ಯರ 218 ಅಡಿ ಎತ್ತರದ ಬೃಹತ್​ ವಿಗ್ರಹವನ್ನು (ramanujacharya statue inauguration) ಜನ ಕಣ್ತುಂಬಿಕೊಳ್ಳಲಿದ್ದಾರೆ. ಸಂತ ಶ್ರೀ ರಾಮಾನುಜಾಚಾರ್ಯರು 11 ನೇ ಶತಮಾನದಲ್ಲಿ ಭಾರತದಲ್ಲಿ ಜನ್ಮವೆತ್ತಿದ ಹಿಂದೂ ವೇದಾಂತ ತತ್ತ್ವಜ್ಞಾನಿ. ಭಕ್ತಿ, ಶರಣಾಗತಿ, ಸೇವೆ ಅಂತಹ ಸುಗುಣಗಳೊಂದಿಗೆ ಭಗವಂತನ ಭಕ್ತಿ ಪಥದಲ್ಲಿ ಸಾಗಿದ ಮಹಾನ್​ ಸಂತ ಶ್ರೀ ರಾಮಾನುಜಾಚಾರ್ಯ. ಶ್ರೀ ರಾಮಾನುಜಾಚಾರ್ಯರ 1003ನೇ ಜಯಂತಿ ಅಂಗವಾಗಿ ಸಮತಾಮೂರ್ತಿ ಸ್ಥಾಪನೆ ಕೈಂಕರ್ಯ ವಿಜೃಂಭಣೆಯಿಂದ ನಡೆದಿದೆ. ಹೈದರಾಬಾದ್​ ಬಳಿಯಿರುವ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಮುಚ್ಚಿಂತಲ್​ (Muchinthal) ಬಳಿ ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ ಆಶ್ರಮದಲ್ಲಿ ಈ ಮಹಾಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಮಹಾಮೂರ್ತಿಯ ಉದ್ಘಾಟನೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಶ್ರೀ ರಾಮಾನುಜಾಚಾರ್ಯರ 1003ನೇ ಜಯಂತಿ ಅಂಗವಾಗಿ ಸಮತಾಮೂರ್ತಿ ಸ್ಥಾಪನೆಯಾಗಲಿದ್ದು, 14 ದಿನಗಳ ಉತ್ಸವದಲ್ಲಿ (ಫೆಬ್ರವರಿ 2 ರಿಂದ ಫೆಬ್ರವರಿ 14 ವರೆಗೂ) ಯಾರೆಲ್ಲಾ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂಬುದನ್ನು ನೋಡುವುದಾದರೆ ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅನೇಕ ಕೇಂದ್ರ ಸಚಿವರುಗಳು, 9 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.

ಸಮಾನತೆಯನ್ನು ಸಾರಿದ ವೈಷ್ಣವ ಸಂತ ರಾಮಾನುಜಾಚಾರ್ಯ ಸ್ವಾಮಿಗಳು ಹುಟ್ಟಿ 1000 ವರ್ಷಗಳು ಸಂದಿವೆ . ಅವರ ನೆನಪಿಗಾಗಿ, ಹೈದರಾಬಾದಿನ ಸಮೀಪವಿರುವ ಶಂಶಾಬಾದ್‌ನಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗಿದೆ. ಸುಮಾರು 1000 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಇದು ನಿರ್ಮಾಣವಾಗುತ್ತಿದೆ. ರಾಮಾನುಜಾಚಾರ್ಯರ ಪ್ರತಿಮೆಗೆ ಸಮತಾಮೂರ್ತಿ (Statue of Equality) ಎಂದೂ ಕರೆಯಲಾಗುತ್ತಿದೆ.

ಇದು ವಿಶ್ವದ ಎರಡನೇ ಅತಿ ಎತ್ತರದ ಪ್ರತಿಮೆಯಾಗಿದೆ. ಸುಮಾರು 216 ಅಡಿ ಉದ್ದವಿರುವ ಈ ಪ್ರತಿಮೆಯ ನಿರ್ಮಾಣಕ್ಕೆ 1800 ಟನ್‌ಗಳಿಗಿಂತ ಹೆಚ್ಚು ಪಂಚ ಲೋಹಗಳನ್ನು ಬಳಸಲಾಗಿದೆ. ದೇವಾಲಯದ ಕುರಿತು ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ ಅವರು ಟಿವಿ9 ಭಾರತವರ್ಷದೊಂದಿಗೆ ವಿಶೇಷ ಸಂವಾದದಲ್ಲಿ ವಿವರವಾಗಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿಯಿಂದ ಶನಿವಾರ ಉದ್ಘಾಟನೆ: ಮಾಹಾ ಯಜ್ಞಗಳನ್ನು 1,035 ಕುಂಡಗಳೊಂದಿಗೆ ಪ್ರತಿ ದಿನ ಫೆಬ್ರವರಿ 14 ವರೆಗೂ ನೆರವೇರಲಿದೆ. ಸಮತಾಮೂರ್ತಿ ಎಂದು ಜನಜನಿತರಾದ ಸಂತ ಶ್ರೀ ರಾಮಾನುಜಾಚಾರ್ಯರ 218 ಅಡಿ ಎತ್ತರದ ಬೃಹತ್​ ವಿಗ್ರಹವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 5 ಶನಿವಾರ ಉದ್ಘಾಟಿಸಲಿದ್ದಾರೆ. ಇದು ವಿಶ್ವದ ಎರಡನೇ ಅತಿ ಎತ್ತರದ ಪ್ರತಿಮೆಯಾಗಿದೆ. ಹೈದರಾಬಾದಿಗೆ ಅಂಟಿಕೊಂಡಿರುವ ಆರ್ ಆರ್​ ಜಿಲ್ಲೆ ವ್ಯಾಪ್ತಿಯಲ್ಲಿರುವ ಮುಚ್ಚಿಂತಲ್​ದಲ್ಲಿ 40 ಎಕರೆ ಪ್ರದೇಶದಲ್ಲಿರುವ ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ ಆಶ್ರಮದಲ್ಲಿ ಸುಮಾರು 216 ಅಡಿ ಎತ್ತರದ ಈ ಪ್ರತಿಮೆಯ ನಿರ್ಮಾಣಕ್ಕೆ 1800 ಟನ್‌ಗಳಿಗಿಂತ ಹೆಚ್ಚು ಪಂಚ ಲೋಹಗಳನ್ನು ಬಳಸಲಾಗಿದೆ.

Also Read: Ramanujacharya Sahasrabdi: ಮುಚ್ಚಿಂತಲ್​ದಲ್ಲಿ ಘನವಾಗಿ ಆರಂಭವಾದ ರಾಮಾನುಜಾಚಾರ್ಯರ ಸಹಸ್ರಾಬ್ದಿ ಕಾರ್ಯಕ್ರಮ

Also Read: Statue of Equality: ಶ್ರೀರಾಮಾನುಜಾಚಾರ್ಯರ ಪ್ರತಿಮೆ ಅನಾವರಣಕ್ಕೆ ಬರಲು ಒಪ್ಪಿಗೆ ನೀಡಿದ ಮೋದಿ

Published On - 11:20 am, Wed, 2 February 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್