AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಚರಿತಮಾನಸ ದಲಿತರು, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳನ್ನು ನಿಂದನೆ ಮಾಡಿದೆ: ಎಸ್​​ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ

ನಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಆದರೆ ಧರ್ಮದ ಹೆಸರಿನಲ್ಲಿ ಒಂದು ಸಮುದಾಯ ಅಥವಾ ಜಾತಿಯನ್ನು ಅವಮಾನಿಸಿದರೆ ಅದು ಆಕ್ಷೇಪಾರ್ಹ ಎಂದಿದ್ದಾರೆ ಮೌರ್ಯ.

ರಾಮಚರಿತಮಾನಸ ದಲಿತರು, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳನ್ನು ನಿಂದನೆ ಮಾಡಿದೆ: ಎಸ್​​ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ
ಸ್ವಾಮಿ ಪ್ರಸಾದ್ ಮೌರ್ಯ
TV9 Web
| Edited By: |

Updated on: Jan 23, 2023 | 2:25 PM

Share

ಗೋಸ್ವಾಮಿ ತುಳಸೀದಾಸ್ ಬರೆದಿರುವ ರಾಮಚರಿತಮಾನಸ (Ramcharitmanas) ಮಹಾಕಾವ್ಯವು ದಲಿತರು, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳನ್ನು ನಿಂದನೆ ಮಾಡಿದೆ ಎಂದು ಮಾಜಿ ಸಚಿವ ಮತ್ತು ಸಮಾಜವಾದಿ ಪಕ್ಷದ (Samajwadi Party) ಎಂಎಲ್‌ಸಿ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ಹೇಳಿರುವುದು ವಿವಾದವಾಗಿದೆ.ಆಜ್ ತಕ್ ಸುದ್ದಿವಾಹಿನಿ ಜತೆ ಮಾತನಾಡಿದ ಮೌರ್ಯ, ಇದನ್ನು ಕೋಟಿಗಟ್ಟಲೆ ಜನ ಓದುತ್ತಾರೆ ಎನ್ನುವುದು ಸುಳ್ಳು. ಇದನ್ನು ತುಳಸಿದಾಸರು ಆತ್ಮ ಪ್ರಶಂಸೆ ಮತ್ತು ತಮ್ಮ ಸಂತೋಷಕ್ಕಾಗಿ ಬರೆದಿದ್ದಾರೆ. ನಾವು ಧರ್ಮವನ್ನು ಸ್ವಾಗತಿಸುತ್ತೇವೆ. ಆದರೆ ಧರ್ಮದ ಹೆಸರಿನಲ್ಲಿ ದಲಿತರು, ಆದಿವಾಸಿಗಳು, ಹಿಂದುಳಿದವರ ಬಗ್ಗೆ ನಿಂದನೆ ಏಕೆ? ಶೂದ್ರ ಎಂದು ಕರೆಯುವ ಮೂಲಕ ಯಾಕೆ ನಿಂದಿಸುತ್ತೀರಿ. ನಿಂದನೆ ಮಾಡುವುದು ಧರ್ಮವೇ? ಎಂದು ಕೇಳಿದ್ದಾರೆ.

ಬಿಹಾರದ ಶಿಕ್ಷಣ ಸಚಿವ ಮತ್ತು ಆರ್‌ಜೆಡಿ ನಾಯಕ ಚಂದ್ರ ಶೇಖರ್ ಕೂಡಾ ಇದೇ ರೀತಿಯ ಟೀಕೆಗಳನ್ನು ಮಾಡಿದ್ದರು. ನಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಆದರೆ ಧರ್ಮದ ಹೆಸರಿನಲ್ಲಿ ಒಂದು ಸಮುದಾಯ ಅಥವಾ ಜಾತಿಯನ್ನು ಅವಮಾನಿಸಿದರೆ ಅದು ಆಕ್ಷೇಪಾರ್ಹ ಎಂದಿದ್ದಾರೆ ಮೌರ್ಯ. ಕಳೆದ ವರ್ಷ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಬಿಜೆಪಿಯಿಂದ ಸಮಾಜವಾದಿ ಪಕ್ಷಕ್ಕೆ ಪಕ್ಷಾಂತರವಾಗಿದ್ದರು ಮೌರ್ಯ.

ಇದನ್ನೂ ಓದಿ: Rahul Gandhi: ‘ಕರ್ಲಿ ಟೇಲ್ಸ್’ ಜತೆ ಚಿಟ್​​ಚಾಟ್; ಪ್ರೀತಿಸುವ, ಜಾಣೆ ಸಿಕ್ಕರೆ ಮದುವೆ ಆಗ್ತೀನಿ ಎಂದ ರಾಹುಲ್ ಗಾಂಧಿ

ಮೌರ್ಯ ಅವರ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಪ್ರತಿಕ್ರಿಯಿಸಿದೆ. ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿಯಲ್ಲಿದ್ದಾಗ, ನಾವು ಅವರಿಂದ ಅಂತಹ ಹೇಳಿಕೆಗಳನ್ನು ಕೇಳಿರಲಿಲ್ಲ. ಅವರು ಸಮಾಜವಾದಿ ಪಕ್ಷ ಸೇರಿದ ನಂತರ ಪ್ರಸ್ತುತ ಪಕ್ಷದ ಕಾರ್ಯಸೂಚಿಯ ಭಾಗವಾಗಿರುವ ಹಿಂದೂಗಳನ್ನು ಅಗೌರವಿಸಲು ಪ್ರಾರಂಭಿಸಿದ್ದಾರೆ. ಸಮಾಜವನ್ನು ವಿಭಜಿಸುವುದಕ್ಕಾಗಿ ಅವರು ರಾಮಚರಿತಮಾನಸವನ್ನು ಅವರು ವಿರೋಧಿಸುತ್ತಿದ್ದಾರೆ.ಇದರ ಪರಿಣಾಮಗಳನ್ನು ಎಸ್‌ಪಿ ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ