Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ; ಸ್ವಪಕ್ಷೀಯರ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ

ಆದಷ್ಟು ಬೇಗ ತನಿಖೆ ಮುಗಿಸಿ ಕ್ಲೀನ್ ಚಿಟ್ ಕೊಡಿಸಲು ಮನವಿ ಮಾಡಿದ ರಮೇಶ್, ನನಗೆ ಕ್ಲೀನ್ ಚಿಟ್ ಸಿಕ್ಕ ಬಳಿಕ ಸಚಿವ ಸ್ಥಾನವನ್ನು ಕೊಡಿಸಿ. ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿ ಎಂದು ಫಡ್ನವಿಸ್ಗೆ ಮನವಿ ಮಾಡಿದ್ದಾರೆ.

ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ; ಸ್ವಪಕ್ಷೀಯರ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ
ರಮೇಶ್​ ಜಾರಕಿಹೊಳಿ
Follow us
TV9 Web
| Updated By: sandhya thejappa

Updated on: Jun 30, 2021 | 9:12 AM

ದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗಾಗಲೇ ದೆಹಲಿಗೆ ತಲುಪಿದ್ದು, ಸ್ವಪಕ್ಷೀಯರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ. ವಿಪಕ್ಷಗಳ ಜೊತೆಗೆ ಸ್ವಪಕ್ಷೀಯರೂ ಖೆಡ್ಡಾ ತೋಡಿದ್ದಾರೆ. ನನ್ನ ರಾಜಕೀಯ ಜೀವನ ಅಂತ್ಯಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ರಮೇಶ್ ಜಾರಕಿಹೊಳಿ ದೇವೇಂದ್ರ ಫಡ್ನವಿಸ್​ಗೆ ದೂರು ಹೇಳಿದ್ದಾರೆ. ಸಿಡಿ ಪ್ರಕರಣ 15 ದಿನದಲ್ಲಿ ಮುಕ್ತಾಯ ಆಗುತ್ತೆಂದು ಹೇಳಿದ್ದರು. ನಾನು ಮತ್ತೆ ಸಚಿವನಾಗುತ್ತೇನೆ ಎಂದು ಭರವಸೆ ನೀಡಿದ್ದರು. ಸಿಡಿ ಪ್ರಕರಣದ ತನಿಖೆಯನ್ನು ಬೇಗ ಮುಗಿಸದೆ ವಿಳಂಬ ಮಾಡುತ್ತಿದ್ದಾರೆ. ವಿಪಕ್ಷಗಳ ಜತೆ ನಮ್ಮವರು ಸೇರಿಕೊಂಡು ಸಂಚು ರೂಪಿಸುತ್ತಿದ್ದಾರೆ ಎಂದು ದೇವೇಂದ್ರ ಫಡ್ನವಿಸ್ ಭೇಟಿ ವೇಳೆ ರಮೇಶ್ ಜಾರಕಿಹೊಳಿ ಹೇಳಿದರು.

ಆದಷ್ಟು ಬೇಗ ತನಿಖೆ ಮುಗಿಸಿ ಕ್ಲೀನ್ ಚಿಟ್ ಕೊಡಿಸಲು ಮನವಿ ಮಾಡಿದ ರಮೇಶ್, ನನಗೆ ಕ್ಲೀನ್ ಚಿಟ್ ಸಿಕ್ಕ ಬಳಿಕ ಸಚಿವ ಸ್ಥಾನವನ್ನು ಕೊಡಿಸಿ. ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿ ಎಂದು ಫಡ್ನವಿಸ್ಗೆ ಮನವಿ ಮಾಡಿದ್ದಾರೆ. ನಿನ್ನೆ (ಜೂನ್ 29) ಸಂಜೆ ದೇವೇಂದ್ರ ಫಡ್ನವಿಸ್ ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ, ಇಂದು ಕೂಡ ದೆಹಲಿಯಲ್ಲೇ ಇದ್ದು ಬಿ.ಎಲ್.ಸಂತೋಷ್, ಅರುಣ್ ಸಿಂಗ್ ಭೇಟಿಯಾಗುವ ಸಾಧ್ಯತೆಯಿದೆ.

ಜುಲೈ ಒಂದರ ಬಳಿಕ ಸುದ್ದಿಗೋಷ್ಠಿ ಸಾಧ್ಯತೆ ಜುಲೈ 1ರಂದು ಗೋಕಾಕ್‌ನಲ್ಲಿ ಕೊವಿಡ್ ವಿರುದ್ಧ ಹೋರಾಡಿದ ವೈದ್ಯರಿಗೆ ಸನ್ಮಾನ ಸಮಾರಂಭ ನಡೆಯಲಿದ್ದು ಅದರಲ್ಲಿ ರಮೇಶ್​ ಪಾಲ್ಗೊಳ್ಳಲಿದ್ದಾರೆ. ಗೋಕಾಕ್ ಮತ್ತು ಮೂಡಲಗಿ ಕ್ಷೇತ್ರದ ವೈದ್ಯರಿಗೆ ಸನ್ಮಾನ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲಿರುವ ರಮೇಶ್ ಜಾರಕಿಹೊಳಿ‌ ಮತ್ತು ಬಾಲಚಂದ್ರ ಜಾರಕಿಹೊಳಿ ಜುಲೈ ಒಂದರ ಬಳಿಕ ಜಾರಕಿಹೊಳಿ‌ ಬ್ರದರ್ಸ್ ಜಂಟಿ ಸುದ್ದಿಗೋಷ್ಠಿಗೆ ನಿರ್ಧರಿಸಿದ್ದಾರೆ  ಎಂದು ಜಾರಕಿಹೊಳಿ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ

ಬಿಜೆಪಿಯ ಮೂವರು ನನಗೆ ದ್ರೋಹ ಬಗೆದಿದ್ದಾರೆ; ದೆಹಲಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಕಿಡಿ

Karnataka BJP: ಯೋಗೇಶ್ವರ್ -ಯತ್ನಾಳ್ ರಹಸ್ಯ ಭೇಟಿ, ರಮೇಶ್ ಜಾರಕಿಹೊಳಿ ದಿಢೀರ್‌ ದೆಹಲಿಗೆ; ಬಿಜೆಯಲ್ಲಿ ಮತ್ತೆ ತಳಮಳ

(Ramesh Jarkiholi has complained to Devendra Fadnavis against BJP Leaders)

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ