AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ; ಸ್ವಪಕ್ಷೀಯರ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ

ಆದಷ್ಟು ಬೇಗ ತನಿಖೆ ಮುಗಿಸಿ ಕ್ಲೀನ್ ಚಿಟ್ ಕೊಡಿಸಲು ಮನವಿ ಮಾಡಿದ ರಮೇಶ್, ನನಗೆ ಕ್ಲೀನ್ ಚಿಟ್ ಸಿಕ್ಕ ಬಳಿಕ ಸಚಿವ ಸ್ಥಾನವನ್ನು ಕೊಡಿಸಿ. ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿ ಎಂದು ಫಡ್ನವಿಸ್ಗೆ ಮನವಿ ಮಾಡಿದ್ದಾರೆ.

ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ; ಸ್ವಪಕ್ಷೀಯರ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ
ರಮೇಶ್​ ಜಾರಕಿಹೊಳಿ
TV9 Web
| Edited By: sandhya thejappa|

Updated on: Jun 30, 2021 | 9:12 AM

Share

ದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗಾಗಲೇ ದೆಹಲಿಗೆ ತಲುಪಿದ್ದು, ಸ್ವಪಕ್ಷೀಯರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ. ವಿಪಕ್ಷಗಳ ಜೊತೆಗೆ ಸ್ವಪಕ್ಷೀಯರೂ ಖೆಡ್ಡಾ ತೋಡಿದ್ದಾರೆ. ನನ್ನ ರಾಜಕೀಯ ಜೀವನ ಅಂತ್ಯಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ರಮೇಶ್ ಜಾರಕಿಹೊಳಿ ದೇವೇಂದ್ರ ಫಡ್ನವಿಸ್​ಗೆ ದೂರು ಹೇಳಿದ್ದಾರೆ. ಸಿಡಿ ಪ್ರಕರಣ 15 ದಿನದಲ್ಲಿ ಮುಕ್ತಾಯ ಆಗುತ್ತೆಂದು ಹೇಳಿದ್ದರು. ನಾನು ಮತ್ತೆ ಸಚಿವನಾಗುತ್ತೇನೆ ಎಂದು ಭರವಸೆ ನೀಡಿದ್ದರು. ಸಿಡಿ ಪ್ರಕರಣದ ತನಿಖೆಯನ್ನು ಬೇಗ ಮುಗಿಸದೆ ವಿಳಂಬ ಮಾಡುತ್ತಿದ್ದಾರೆ. ವಿಪಕ್ಷಗಳ ಜತೆ ನಮ್ಮವರು ಸೇರಿಕೊಂಡು ಸಂಚು ರೂಪಿಸುತ್ತಿದ್ದಾರೆ ಎಂದು ದೇವೇಂದ್ರ ಫಡ್ನವಿಸ್ ಭೇಟಿ ವೇಳೆ ರಮೇಶ್ ಜಾರಕಿಹೊಳಿ ಹೇಳಿದರು.

ಆದಷ್ಟು ಬೇಗ ತನಿಖೆ ಮುಗಿಸಿ ಕ್ಲೀನ್ ಚಿಟ್ ಕೊಡಿಸಲು ಮನವಿ ಮಾಡಿದ ರಮೇಶ್, ನನಗೆ ಕ್ಲೀನ್ ಚಿಟ್ ಸಿಕ್ಕ ಬಳಿಕ ಸಚಿವ ಸ್ಥಾನವನ್ನು ಕೊಡಿಸಿ. ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿ ಎಂದು ಫಡ್ನವಿಸ್ಗೆ ಮನವಿ ಮಾಡಿದ್ದಾರೆ. ನಿನ್ನೆ (ಜೂನ್ 29) ಸಂಜೆ ದೇವೇಂದ್ರ ಫಡ್ನವಿಸ್ ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ, ಇಂದು ಕೂಡ ದೆಹಲಿಯಲ್ಲೇ ಇದ್ದು ಬಿ.ಎಲ್.ಸಂತೋಷ್, ಅರುಣ್ ಸಿಂಗ್ ಭೇಟಿಯಾಗುವ ಸಾಧ್ಯತೆಯಿದೆ.

ಜುಲೈ ಒಂದರ ಬಳಿಕ ಸುದ್ದಿಗೋಷ್ಠಿ ಸಾಧ್ಯತೆ ಜುಲೈ 1ರಂದು ಗೋಕಾಕ್‌ನಲ್ಲಿ ಕೊವಿಡ್ ವಿರುದ್ಧ ಹೋರಾಡಿದ ವೈದ್ಯರಿಗೆ ಸನ್ಮಾನ ಸಮಾರಂಭ ನಡೆಯಲಿದ್ದು ಅದರಲ್ಲಿ ರಮೇಶ್​ ಪಾಲ್ಗೊಳ್ಳಲಿದ್ದಾರೆ. ಗೋಕಾಕ್ ಮತ್ತು ಮೂಡಲಗಿ ಕ್ಷೇತ್ರದ ವೈದ್ಯರಿಗೆ ಸನ್ಮಾನ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲಿರುವ ರಮೇಶ್ ಜಾರಕಿಹೊಳಿ‌ ಮತ್ತು ಬಾಲಚಂದ್ರ ಜಾರಕಿಹೊಳಿ ಜುಲೈ ಒಂದರ ಬಳಿಕ ಜಾರಕಿಹೊಳಿ‌ ಬ್ರದರ್ಸ್ ಜಂಟಿ ಸುದ್ದಿಗೋಷ್ಠಿಗೆ ನಿರ್ಧರಿಸಿದ್ದಾರೆ  ಎಂದು ಜಾರಕಿಹೊಳಿ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ

ಬಿಜೆಪಿಯ ಮೂವರು ನನಗೆ ದ್ರೋಹ ಬಗೆದಿದ್ದಾರೆ; ದೆಹಲಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಕಿಡಿ

Karnataka BJP: ಯೋಗೇಶ್ವರ್ -ಯತ್ನಾಳ್ ರಹಸ್ಯ ಭೇಟಿ, ರಮೇಶ್ ಜಾರಕಿಹೊಳಿ ದಿಢೀರ್‌ ದೆಹಲಿಗೆ; ಬಿಜೆಯಲ್ಲಿ ಮತ್ತೆ ತಳಮಳ

(Ramesh Jarkiholi has complained to Devendra Fadnavis against BJP Leaders)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್