AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕನ್ನಡ ಮಕ್ಕಳಿಗೆ ಕನ್ನಡದಲ್ಲಿ ಕಲಿಸಿದ ಶಿಕ್ಷಕ: ರಂಜಿತ್​ಸಿಂಹ ಮಡಿಲಿಗೆ ಜಾಗತಿಕ ಪ್ರಶಸ್ತಿ

ಶಾಲೆಯ ಕನ್ನಡ ಭಾಷಾ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ ಮಾಡಿದ ಕೀರ್ತಿಗೆ ಪಾತ್ರರಾಗಿರುವ ದಿಸಾಳೆ ಈ ಪ್ರಶಸ್ತಿಗೆ ಭಾಜನರಾಗಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಮಹಾರಾಷ್ಟ್ರದ ಕನ್ನಡ ಮಕ್ಕಳಿಗೆ ಕನ್ನಡದಲ್ಲಿ ಕಲಿಸಿದ ಶಿಕ್ಷಕ: ರಂಜಿತ್​ಸಿಂಹ ಮಡಿಲಿಗೆ ಜಾಗತಿಕ ಪ್ರಶಸ್ತಿ
ರಂಜಿತ್​ಸಿಂಹ ದಿಸಾಳೆ
TV9 Web
| Edited By: |

Updated on:Apr 07, 2022 | 5:42 PM

Share

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೆವಾಡಿ ಪ್ರಾಥಮಿಕ ಶಾಲೆಯ ಶಿಕ್ಷಕ ರಂಜಿತ್​ಸಿಂಹ ದಿಸಾಳೆ (32) ಅವರು ಪ್ರತಿಷ್ಠಿತ ಗ್ಲೋಬಲ್ ಟೀಚರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಾಲೆಯ ಕನ್ನಡ ಭಾಷಾ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ ಮಾಡಿದ ಕೀರ್ತಿಗೆ ಪಾತ್ರರಾಗಿರುವ ದಿಸಾಳೆ ಈ ಪ್ರಶಸ್ತಿಗೆ ಭಾಜನರಾಗಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಲಂಡನ್ ಮೂಲದ ವರ್ಕಿ ಫೌಂಡೇಷನ್ ನೀಡುವ ಈ ಪ್ರಶಸ್ತಿಯು 10 ಲಕ್ಷ ಡಾಲರ್ (ಸುಮಾರು ₹ 7.37 ಕೋಟಿ) ನಗದು ಬಹುಮಾನವನ್ನು ಹೊಂದಿದೆ. ಲಂಡನ್​ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂನಲ್ಲಿ ನಿನ್ನೆ ವರ್ಚುಯಲ್ ಆಗಿ ಪ್ರಶಸ್ತಿ ಘೋಷಣೆಯಾಗಿದೆ.

ಪ್ರಶಸ್ತಿ ಮೊತ್ತವನ್ನು ಹಂಚಿಕೊಳ್ಳುವ ನಿರ್ಧಾರ ಪ್ರಶಸ್ತಿಗಾಗಿ 140 ದೇಶಗಳ 12 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಇದರಲ್ಲಿ, ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ 10 ಅಭ್ಯರ್ಥಿಗಳಿಗೆ ಪ್ರಶಸ್ತಿ ಮೊತ್ತದ ಅರ್ಧ ಭಾಗವನ್ನು ಹಂಚುವುದಾಗಿ ದಿಸಾಳೆ ಹೇಳಿದ್ದಾರೆ. ಈ ಮೂಲಕ ದಿಸಾಳೆ, ಗ್ಲೋಬಲ್ ಟೀಚರ್ ಪ್ರಶಸ್ತಿಯ ನಗದನ್ನು ಇತರ ಅಭ್ಯರ್ಥಿಗಳೊಂದಿಗೂ ಹಂಚಿಕೊಂಡ ಮೊದಲಿಗರಾಗಿದ್ದಾರೆ.

ಗ್ಲೋಬಲ್ ಟೀಚರ್ ಪ್ರೈಜ್​ನ 10 ಮಂದಿ ಫೈನಲಿಸ್ಟ್​ಗಳು

ಮಕ್ಕಳಿಗಾಗಿ ಕನ್ನಡ ಕಲಿತರು ಸೊಲ್ಲಾಪುರ ಮಹಾರಾಷ್ಟ್ರ ಆಡಳಿತಕ್ಕೆ ಒಳಪಟ್ಟ ಕರ್ನಾಟಕದ ಗಡಿಭಾಗದ ಊರು. ಕರ್ನಾಟಕದ ಗಡಿಯಿಂದ ಆಚೆಗೆ ಸುಮಾರು 50ಕಿ.ಮೀ. ಅಂತರವಿರುವ ಪ್ರದೇಶ. ಅಲ್ಲಿನ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಬುಡಕಟ್ಟು ಸಮುದಾಯಗಳಿಗೆ ಸೇರಿದವರಾಗಿದ್ದು, ಕನ್ನಡ ಭಾಷೆ ಮಾತ್ರ ಬಲ್ಲವರಾಗಿದ್ದರು. ಅವರ ಪಠ್ಯವು ಮರಾಠಿ ಭಾಷೆಯಲ್ಲಿ ಇದ್ದ ಕಾರಣ, ಮಕ್ಕಳ ಕಲಿಕೆ ಸಾಧ್ಯವಾಗುತ್ತಿರಲಿಲ್ಲ.

ಈ ಸಮಸ್ಯೆ ಸರಿದೂಗಿಸುವ ಪಣತೊಟ್ಟ ದಿಸಾಳೆ ಮೊದಲು ತಾವು ಕನ್ನಡ ಕಲಿತರು. 1ರಿಂದ 4ನೇ ತರಗತಿಯ ಎಲ್ಲಾ ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದರು. ಹಾಡುಗಳನ್ನು ಧ್ವನಿಮುದ್ರಿಸಿದರು. ಪಾಠದ ವೀಡಿಯೋ ಮಾಡಿದರು. ಅವುಗಳನ್ನೆಲ್ಲಾ ಕ್ಯೂಆರ್ ಕೋಡ್​ಗೆ ಅಳವಡಿಸಿದರು. ಪಾಠ, ಅಸೈನ್​ಮೆಂಟ್​ಗಳು ಕನ್ನಡದಲ್ಲೇ ಶುರುವಾದವು. ರಂಜಿತ್​ಸಿಂಹ ದಿಸಾಳೆ ಪ್ರಯತ್ನಕ್ಕೆ ಅದ್ಭುತ ಫಲ ಲಭಿಸಿತು. ಕಳೆದ ಸಲದ ವಾರ್ಷಿಕ ಪರೀಕ್ಷೆಗಳಲ್ಲಿ ಶಾಲೆಯ ಶೇ.85ರಷ್ಟು ವಿದ್ಯಾರ್ಥಿಗಳು ಎ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತಾಯಿತು.

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಊರಿನ ಹೆಣ್ಣು ಮಕ್ಕಳು ಕಲಿಕೆಯಲ್ಲಿ ತೊಡಗಿಕೊಂಡು, ಶೇಕಡಾ ನೂರು ಹಾಜರಾತಿ ಪಡೆದುಕೊಂಡರು. ಈಗ ಗ್ರಾಮದಲ್ಲಿ ಬಾಲ್ಯ ವಿವಾಹ ನಿಂತಿದೆ. ಗ್ರಾಮದ ಯುವತಿಯೊಬ್ಬಳು ಪದವಿಯನ್ನೂ ಪಡೆದ ಸಾಧನೆ ಮಾಡಿದ್ದಾಳೆ. ಊರ ಜನರು ಶಿಕ್ಷಿತರಾಗುತ್ತಿರುವುದಕ್ಕೆ ಈ ಬೆಳವಣಿಗೆಗಳು ಚಿಹ್ನೆಯಾಗಿ ಕಂಡಿವೆ.

‘ರಂಜಿತ್​ಸಿಂಹ ದಿಸಾಳೆ ಈ ಗ್ರಾಮಕ್ಕೆ ಬರುವ ಮೊದಲು ಇಂಥಾ ಬೆಳವಣಿಗೆಗಳು ಆಗುತ್ತವೆ ಎಂದು ಊಹಿಸಲೂ ಅಸಾಧ್ಯವಾಗಿತ್ತು’ ಎಂದು ಗ್ಲೋಬಲ್ ಟೀಚರ್ ಪ್ರೈಜ್​ನ ವೆಬ್​ಸೈಟ್​ನಲ್ಲಿ ಹೇಳಲಾಗಿದೆ.

ದಿಸಾಳೆ ಮತ್ತು ಮನೆಯವರ ಸಂಭ್ರಮ

ಇಂತಹ ಸಾಧನೆಯ ಪಥದಲ್ಲಿರುವ ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಎಂಬ ಪ್ರಶಸ್ತಿ ಲಭಿಸಿದೆ. ದಿಸಾಳೆ ಅವರಿಗೆ 2016ರಲ್ಲಿ ನಾವೀನ್ಯತೆ ಸಂಶೋಧಕ ಮತ್ತು 2018ರಲ್ಲಿ ರಾಷ್ಟ್ರೀಯ ನಾವೀನ್ಯತೆ ಸಂಶೋಧಕ ಪ್ರಶಸ್ತಿ ಸಿಕ್ಕಿದೆ. ಮೈಕ್ರೊಸಾಫ್ಟ್​ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸತ್ಯ ನಾಡೆಲ್ಲ ಪುಸ್ತಕ ‘ಹಿಟ್ ಪ್ರೆಶ್’ನಲ್ಲೂ ದಿಸಾಳೆ ಕೆಲಸದ ಬಗ್ಗೆ ಉಲ್ಲೇಖವಿದೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದಲ್ಲಿ ಸಕಲ ಸಿದ್ಧತೆ

Published On - 2:35 pm, Fri, 4 December 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ