AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ
ನ್ಯಾಯಾಲಯದ ಆವರಣದಲ್ಲಿ ನಡೆದ ವಿವಾಹ
Lakshmi Hegde
|

Updated on:Mar 16, 2021 | 3:38 PM

Share

ಪಾಟ್ನಾ: ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ನಂತರ ಶಿಕ್ಷೆಯಿಂದ ಪಾರಾಗಲು ಜಿಲ್ಲಾ ಕೋರ್ಟ್​ನ ಆವರಣದಲ್ಲೇ ಆಕೆಯನ್ನು ಮದುವೆಯಾದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿದೆ. ಇವರಿಬ್ಬರ ಕುಟುಂಬಗಳ ಮಾತುಕತೆಯ ಬಳಿಕ, ಮುಸ್ಲಿಂ ಧರ್ಮಗುರು ವಿವಾಹ ಮಾಡಿಸಿದ್ದಾರೆ. ಆರೋಪಿಯ ಹೆಸರು ಮೊಹಮ್ಮದ್​ ರಾಜಾ ಎಂದಾಗಿದ್ದು, ರಹೀಮ್​ಪುರ ರುದೌಲಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ್ದ. ಈತನ ವಿರುದ್ಧ POCSO ಕಾಯ್ದೆಯಡಿ ಮುಸ್ಸಾರಿ ಘರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೊಹಮ್ಮದ್ ರಾಜಾನನ್ನು ಬಂಧಿಸಿದ್ದ ಪೊಲೀಸರು ಜೈಲಿಗೆ ಹಾಕಿದ್ದರು. ಹಾಗೇ ಪ್ರಕರಣದ ವಿಚಾರಣೆ ಪೋಕ್ಸೊ ಕೋರ್ಟ್​​ನಲ್ಲಿ ನಡೆದಿತ್ತು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನೂ ನೀಡಬಹುದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯೋಚನೆ ಮಾಡಿದ. ಹೀಗಾಗಿ ಹುಡುಗಿಯ ಮನೆಯವರ ಬಳಿ, ಈತನ ಮನೆಯವರು ಮಾತುಕತೆ ನಡೆಸಿದರು. ಎರಡೂ ಕಡೆಯಿಂದ ಒಪ್ಪಿಗೆ ಸಿಕ್ಕ ಬಳಿಕ ಮೊಹಮ್ಮದ್​ ರಾಜಾ ಆಕೆಯನ್ನು ವಿವಾಹವಾಗಿದ್ದಾನೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ. ಮೊಹಮ್ಮದ್​ ರಾಜಾನಿಗೆ ಜಾಮೀನು ಸಿಕ್ಕಿತೋ, ವಿಚಾರಣೆ ಮುಂದೂಡಲ್ಪಟ್ಟಿದೆಯೋ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅದಲ್ಲದೆ ಆಕೆ ಅಪ್ರಾಪ್ತೆ ಆಗಿದ್ದರಿಂದ ಬಾಲ್ಯ ವಿವಾಹ ಎಂದು ಪರಿಗಣಿಸಲ್ಪಡುವ ಸಾಧ್ಯತೆಯೂ ಇರತ್ತದೆ.

Published On - 3:36 pm, Tue, 16 March 21

Follow Us
Lakshmi Hegde
Lakshmi Hegde
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ