AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ
ನ್ಯಾಯಾಲಯದ ಆವರಣದಲ್ಲಿ ನಡೆದ ವಿವಾಹ
Lakshmi Hegde
|

Updated on:Mar 16, 2021 | 3:38 PM

Share

ಪಾಟ್ನಾ: ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ನಂತರ ಶಿಕ್ಷೆಯಿಂದ ಪಾರಾಗಲು ಜಿಲ್ಲಾ ಕೋರ್ಟ್​ನ ಆವರಣದಲ್ಲೇ ಆಕೆಯನ್ನು ಮದುವೆಯಾದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿದೆ. ಇವರಿಬ್ಬರ ಕುಟುಂಬಗಳ ಮಾತುಕತೆಯ ಬಳಿಕ, ಮುಸ್ಲಿಂ ಧರ್ಮಗುರು ವಿವಾಹ ಮಾಡಿಸಿದ್ದಾರೆ. ಆರೋಪಿಯ ಹೆಸರು ಮೊಹಮ್ಮದ್​ ರಾಜಾ ಎಂದಾಗಿದ್ದು, ರಹೀಮ್​ಪುರ ರುದೌಲಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ್ದ. ಈತನ ವಿರುದ್ಧ POCSO ಕಾಯ್ದೆಯಡಿ ಮುಸ್ಸಾರಿ ಘರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೊಹಮ್ಮದ್ ರಾಜಾನನ್ನು ಬಂಧಿಸಿದ್ದ ಪೊಲೀಸರು ಜೈಲಿಗೆ ಹಾಕಿದ್ದರು. ಹಾಗೇ ಪ್ರಕರಣದ ವಿಚಾರಣೆ ಪೋಕ್ಸೊ ಕೋರ್ಟ್​​ನಲ್ಲಿ ನಡೆದಿತ್ತು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನೂ ನೀಡಬಹುದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯೋಚನೆ ಮಾಡಿದ. ಹೀಗಾಗಿ ಹುಡುಗಿಯ ಮನೆಯವರ ಬಳಿ, ಈತನ ಮನೆಯವರು ಮಾತುಕತೆ ನಡೆಸಿದರು. ಎರಡೂ ಕಡೆಯಿಂದ ಒಪ್ಪಿಗೆ ಸಿಕ್ಕ ಬಳಿಕ ಮೊಹಮ್ಮದ್​ ರಾಜಾ ಆಕೆಯನ್ನು ವಿವಾಹವಾಗಿದ್ದಾನೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ. ಮೊಹಮ್ಮದ್​ ರಾಜಾನಿಗೆ ಜಾಮೀನು ಸಿಕ್ಕಿತೋ, ವಿಚಾರಣೆ ಮುಂದೂಡಲ್ಪಟ್ಟಿದೆಯೋ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅದಲ್ಲದೆ ಆಕೆ ಅಪ್ರಾಪ್ತೆ ಆಗಿದ್ದರಿಂದ ಬಾಲ್ಯ ವಿವಾಹ ಎಂದು ಪರಿಗಣಿಸಲ್ಪಡುವ ಸಾಧ್ಯತೆಯೂ ಇರತ್ತದೆ.

Published On - 3:36 pm, Tue, 16 March 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು