AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ
ನ್ಯಾಯಾಲಯದ ಆವರಣದಲ್ಲಿ ನಡೆದ ವಿವಾಹ
Lakshmi Hegde
|

Updated on:Mar 16, 2021 | 3:38 PM

Share

ಪಾಟ್ನಾ: ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ನಂತರ ಶಿಕ್ಷೆಯಿಂದ ಪಾರಾಗಲು ಜಿಲ್ಲಾ ಕೋರ್ಟ್​ನ ಆವರಣದಲ್ಲೇ ಆಕೆಯನ್ನು ಮದುವೆಯಾದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿದೆ. ಇವರಿಬ್ಬರ ಕುಟುಂಬಗಳ ಮಾತುಕತೆಯ ಬಳಿಕ, ಮುಸ್ಲಿಂ ಧರ್ಮಗುರು ವಿವಾಹ ಮಾಡಿಸಿದ್ದಾರೆ. ಆರೋಪಿಯ ಹೆಸರು ಮೊಹಮ್ಮದ್​ ರಾಜಾ ಎಂದಾಗಿದ್ದು, ರಹೀಮ್​ಪುರ ರುದೌಲಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ್ದ. ಈತನ ವಿರುದ್ಧ POCSO ಕಾಯ್ದೆಯಡಿ ಮುಸ್ಸಾರಿ ಘರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೊಹಮ್ಮದ್ ರಾಜಾನನ್ನು ಬಂಧಿಸಿದ್ದ ಪೊಲೀಸರು ಜೈಲಿಗೆ ಹಾಕಿದ್ದರು. ಹಾಗೇ ಪ್ರಕರಣದ ವಿಚಾರಣೆ ಪೋಕ್ಸೊ ಕೋರ್ಟ್​​ನಲ್ಲಿ ನಡೆದಿತ್ತು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನೂ ನೀಡಬಹುದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯೋಚನೆ ಮಾಡಿದ. ಹೀಗಾಗಿ ಹುಡುಗಿಯ ಮನೆಯವರ ಬಳಿ, ಈತನ ಮನೆಯವರು ಮಾತುಕತೆ ನಡೆಸಿದರು. ಎರಡೂ ಕಡೆಯಿಂದ ಒಪ್ಪಿಗೆ ಸಿಕ್ಕ ಬಳಿಕ ಮೊಹಮ್ಮದ್​ ರಾಜಾ ಆಕೆಯನ್ನು ವಿವಾಹವಾಗಿದ್ದಾನೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ. ಮೊಹಮ್ಮದ್​ ರಾಜಾನಿಗೆ ಜಾಮೀನು ಸಿಕ್ಕಿತೋ, ವಿಚಾರಣೆ ಮುಂದೂಡಲ್ಪಟ್ಟಿದೆಯೋ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅದಲ್ಲದೆ ಆಕೆ ಅಪ್ರಾಪ್ತೆ ಆಗಿದ್ದರಿಂದ ಬಾಲ್ಯ ವಿವಾಹ ಎಂದು ಪರಿಗಣಿಸಲ್ಪಡುವ ಸಾಧ್ಯತೆಯೂ ಇರತ್ತದೆ.

Published On - 3:36 pm, Tue, 16 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ