AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ
ನ್ಯಾಯಾಲಯದ ಆವರಣದಲ್ಲಿ ನಡೆದ ವಿವಾಹ
Lakshmi Hegde
|

Updated on:Mar 16, 2021 | 3:38 PM

Share

ಪಾಟ್ನಾ: ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ನಂತರ ಶಿಕ್ಷೆಯಿಂದ ಪಾರಾಗಲು ಜಿಲ್ಲಾ ಕೋರ್ಟ್​ನ ಆವರಣದಲ್ಲೇ ಆಕೆಯನ್ನು ಮದುವೆಯಾದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿದೆ. ಇವರಿಬ್ಬರ ಕುಟುಂಬಗಳ ಮಾತುಕತೆಯ ಬಳಿಕ, ಮುಸ್ಲಿಂ ಧರ್ಮಗುರು ವಿವಾಹ ಮಾಡಿಸಿದ್ದಾರೆ. ಆರೋಪಿಯ ಹೆಸರು ಮೊಹಮ್ಮದ್​ ರಾಜಾ ಎಂದಾಗಿದ್ದು, ರಹೀಮ್​ಪುರ ರುದೌಲಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ್ದ. ಈತನ ವಿರುದ್ಧ POCSO ಕಾಯ್ದೆಯಡಿ ಮುಸ್ಸಾರಿ ಘರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೊಹಮ್ಮದ್ ರಾಜಾನನ್ನು ಬಂಧಿಸಿದ್ದ ಪೊಲೀಸರು ಜೈಲಿಗೆ ಹಾಕಿದ್ದರು. ಹಾಗೇ ಪ್ರಕರಣದ ವಿಚಾರಣೆ ಪೋಕ್ಸೊ ಕೋರ್ಟ್​​ನಲ್ಲಿ ನಡೆದಿತ್ತು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನೂ ನೀಡಬಹುದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯೋಚನೆ ಮಾಡಿದ. ಹೀಗಾಗಿ ಹುಡುಗಿಯ ಮನೆಯವರ ಬಳಿ, ಈತನ ಮನೆಯವರು ಮಾತುಕತೆ ನಡೆಸಿದರು. ಎರಡೂ ಕಡೆಯಿಂದ ಒಪ್ಪಿಗೆ ಸಿಕ್ಕ ಬಳಿಕ ಮೊಹಮ್ಮದ್​ ರಾಜಾ ಆಕೆಯನ್ನು ವಿವಾಹವಾಗಿದ್ದಾನೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ. ಮೊಹಮ್ಮದ್​ ರಾಜಾನಿಗೆ ಜಾಮೀನು ಸಿಕ್ಕಿತೋ, ವಿಚಾರಣೆ ಮುಂದೂಡಲ್ಪಟ್ಟಿದೆಯೋ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅದಲ್ಲದೆ ಆಕೆ ಅಪ್ರಾಪ್ತೆ ಆಗಿದ್ದರಿಂದ ಬಾಲ್ಯ ವಿವಾಹ ಎಂದು ಪರಿಗಣಿಸಲ್ಪಡುವ ಸಾಧ್ಯತೆಯೂ ಇರತ್ತದೆ.

Published On - 3:36 pm, Tue, 16 March 21

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ