AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ.

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕೋರ್ಟ್​ ಆವರಣದಲ್ಲೇ ಮದುವೆಯಾದ ಆರೋಪಿ
ನ್ಯಾಯಾಲಯದ ಆವರಣದಲ್ಲಿ ನಡೆದ ವಿವಾಹ
Follow us
Lakshmi Hegde
|

Updated on:Mar 16, 2021 | 3:38 PM

ಪಾಟ್ನಾ: ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ನಂತರ ಶಿಕ್ಷೆಯಿಂದ ಪಾರಾಗಲು ಜಿಲ್ಲಾ ಕೋರ್ಟ್​ನ ಆವರಣದಲ್ಲೇ ಆಕೆಯನ್ನು ಮದುವೆಯಾದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿದೆ. ಇವರಿಬ್ಬರ ಕುಟುಂಬಗಳ ಮಾತುಕತೆಯ ಬಳಿಕ, ಮುಸ್ಲಿಂ ಧರ್ಮಗುರು ವಿವಾಹ ಮಾಡಿಸಿದ್ದಾರೆ. ಆರೋಪಿಯ ಹೆಸರು ಮೊಹಮ್ಮದ್​ ರಾಜಾ ಎಂದಾಗಿದ್ದು, ರಹೀಮ್​ಪುರ ರುದೌಲಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ್ದ. ಈತನ ವಿರುದ್ಧ POCSO ಕಾಯ್ದೆಯಡಿ ಮುಸ್ಸಾರಿ ಘರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೊಹಮ್ಮದ್ ರಾಜಾನನ್ನು ಬಂಧಿಸಿದ್ದ ಪೊಲೀಸರು ಜೈಲಿಗೆ ಹಾಕಿದ್ದರು. ಹಾಗೇ ಪ್ರಕರಣದ ವಿಚಾರಣೆ ಪೋಕ್ಸೊ ಕೋರ್ಟ್​​ನಲ್ಲಿ ನಡೆದಿತ್ತು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನೂ ನೀಡಬಹುದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯೋಚನೆ ಮಾಡಿದ. ಹೀಗಾಗಿ ಹುಡುಗಿಯ ಮನೆಯವರ ಬಳಿ, ಈತನ ಮನೆಯವರು ಮಾತುಕತೆ ನಡೆಸಿದರು. ಎರಡೂ ಕಡೆಯಿಂದ ಒಪ್ಪಿಗೆ ಸಿಕ್ಕ ಬಳಿಕ ಮೊಹಮ್ಮದ್​ ರಾಜಾ ಆಕೆಯನ್ನು ವಿವಾಹವಾಗಿದ್ದಾನೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಮದುವೆ ನೋಡಲು ಭರ್ಜರಿ ಜನ ಸೇರಿದ್ದರು. ಇನ್ನು ಈ ಜೋಡಿಗೆ ಮದುವೆ ಮಾಡಿಸಿದ ಧರ್ಮಗುರುವನ್ನು ನ್ಯಾಯಾಲಯ ಕರೆಸಿ, ವಿಚಾರಣೆ ಮಾಡಿದೆ. ಮೊಹಮ್ಮದ್​ ರಾಜಾನಿಗೆ ಜಾಮೀನು ಸಿಕ್ಕಿತೋ, ವಿಚಾರಣೆ ಮುಂದೂಡಲ್ಪಟ್ಟಿದೆಯೋ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಅದಲ್ಲದೆ ಆಕೆ ಅಪ್ರಾಪ್ತೆ ಆಗಿದ್ದರಿಂದ ಬಾಲ್ಯ ವಿವಾಹ ಎಂದು ಪರಿಗಣಿಸಲ್ಪಡುವ ಸಾಧ್ಯತೆಯೂ ಇರತ್ತದೆ.

Published On - 3:36 pm, Tue, 16 March 21

ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ
ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ