AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್
ಗುರ್ಮೀತ್ ರಾಮ್ ರಹೀಮ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Nov 20, 2023 | 7:20 PM

Share

ದೆಹಲಿ ನವೆಂಬರ್ 20: ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ (Gurmeet Ram Rahim Singh)21 ದಿನಗಳವರೆಗೆ ಪೆರೋಲ್ ಅನುಮತಿಸಲಾಗಿದೆ. ಇದಕ್ಕೂ ಮುನ್ನ ಜನವರಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿತ್ತು.

ಪೆರೋಲ್ ಎಂದರೆ ತಾತ್ಕಾಲಿಕವಾಗಿ ವಿಶೇಷ ಉದ್ದೇಶಕ್ಕಾಗಿ ಅಥವಾ ಶಿಕ್ಷೆಯ ಅವಧಿ ಮುಗಿಯುವ ಮೊದಲು ಸಂಪೂರ್ಣವಾಗಿ ಬಿಡುಗಡೆ ಮಾಡುವುದು. ಉತ್ತಮ ನಡವಳಿಕೆಯ ಕೈದಿಗಳನ್ನುಈ ರೀತಿ ಬಿಡುಗಡೆ ಮಾಡಲಾಗುತ್ತದ. ಫರ್ಲೋ ಎಂದರೆ ಜೈಲಿನಿಂದ ಅಪರಾಧಿಗಳ ಅಲ್ಪಾವಧಿಯ ತಾತ್ಕಾಲಿಕ ಬಿಡುಗಡೆಯಾಗಿದೆ.

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಇದೇ ಪೆರೋಲ್ ಅವಧಿಯಲ್ಲಿ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದು ಕಂಡುಬಂತು.

ಹಿಂದಿನ ಸಂದರ್ಭಗಳಲ್ಲಿ ಪೆರೋಲ್‌ನಲ್ಲಿ ಹೊರಗಿರುವಾಗ, ಸಿರ್ಸಾ-ಪ್ರಧಾನ ಪಂಥದ ಮುಖ್ಯಸ್ಥರು ಹಲವಾರು ಆನ್‌ಲೈನ್ “ಸತ್ಸಂಗ” ಸೆಷನ್‌ಗಳನ್ನು ನಡೆಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ