AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯದಲ್ಲಿ ತನ್ನ ವಿರುದ್ಧ ತೀರ್ಪು ನೀಡಿದ ಜಡ್ಜ್​​ಗೆ ಚಪ್ಪಲಿ ಎಸೆದ ಅತ್ಯಾಚಾರ ಆರೋಪಿ; ನಾನು ತಪ್ಪು ಮಾಡಿಲ್ಲ ಎಂದು ಒಂದೇ ಸಮನೆ ಕೂಗುತ್ತಿದ್ದ !

ಕಳೆದ ವರ್ಷ ಏಪ್ರಿಲ್​ನಲ್ಲಿ ಈ ಸುಜಿತ್​​ನಿಂದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿ ವಲಸೆ ಕಾರ್ಮಿಕನೊಬ್ಬನ ಪುತ್ರಿಯಾಗಿದ್ದಳು. ಈಕೆಗೆ ಸುಜಿತ್ ಚಾಕಲೇಟ್​ ಆಸೆ ತೋರಿಸಿ ಹತ್ತಿರ ಕರೆಸಿದ್ದ.

ನ್ಯಾಯಾಲಯದಲ್ಲಿ ತನ್ನ ವಿರುದ್ಧ ತೀರ್ಪು ನೀಡಿದ ಜಡ್ಜ್​​ಗೆ ಚಪ್ಪಲಿ ಎಸೆದ ಅತ್ಯಾಚಾರ ಆರೋಪಿ; ನಾನು ತಪ್ಪು ಮಾಡಿಲ್ಲ ಎಂದು ಒಂದೇ ಸಮನೆ ಕೂಗುತ್ತಿದ್ದ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 30, 2021 | 4:19 PM

Share

ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಓದುತ್ತಿದ್ದಂತೆಯೇ, ಆರೋಪಿ ಸ್ಥಾನದಲ್ಲಿದ್ದ ವ್ಯಕ್ತಿ ಅವರೆಡೆಗೆ ಚಪ್ಪಲಿಯನ್ನು ಎಸೆದ ಘಟನೆ ಗುಜರಾತ್​ನ ಸೂರತ್​​ನಲ್ಲಿ ನಡೆದಿದೆ.  ಈತನ ಹೆಸರು ಸುಜಿತ್​ ಸಾಕೇತ್​.  ಕಳೆದ ವರ್ಷ ಏಪ್ರಿಲ್​​ನಲ್ಲಿ 5ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಆಕೆಯನ್ನು ಹತ್ಯೆಗೈದ ಆರೋಪ ಇವನ ಮೇಲಿತ್ತು. ಅದರ ವಿಚಾರಣೆ ನಡೆಸಿದ್ದ ಸೂರತ್​ ನ್ಯಾಯಾಲಯದ ಜಡ್ಜ್​ ಇಂದು ತೀರ್ಪು ತಮ್ಮ ತೀರ್ಪು ಪ್ರಕಟಸಿದರು. ಆರೋಪಿ (27ವರ್ಷದ ಯುವಕ)ನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದರು. ಈ ಶಿಕ್ಷೆಯಿಂದ ತೀವ್ರ ಕುಪಿತನಾದ ವ್ಯಕ್ತಿ ತನ್ನ ಚಪ್ಪಲಿಯನ್ನು ಎಸೆದಿದ್ದಾನೆ.

ಕಳೆದ ವರ್ಷ ಏಪ್ರಿಲ್​ನಲ್ಲಿ ಈ ಸುಜಿತ್​​ನಿಂದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿ ವಲಸೆ ಕಾರ್ಮಿಕನೊಬ್ಬನ ಪುತ್ರಿಯಾಗಿದ್ದಳು. ಈಕೆಗೆ ಸುಜಿತ್ ಚಾಕಲೇಟ್​ ಆಸೆ ತೋರಿಸಿ ಹತ್ತಿರ ಕರೆಸಿದ್ದ. ನಂತರ ಕಿಡ್ನ್ಯಾಪ್​ ಮಾಡಿ, ಅತ್ಯಾಚಾರ ಮಾಡಿದ್ದ. ಬಳಿಕ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ.  ನಂತರ ಪೊಲೀಸರು ಸುಜಿತ್​​ನನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಿಸಿದ್ದರು. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಈ ವ್ಯಕ್ತಿ ತನ್ನದೇನೂ ತಪ್ಪಿಲ್ಲ. ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಕ್ಕಿಸಲಾಗಿದೆ ಎಂದು ಹೇಳುತ್ತಲೇ ಬಂದಿದ್ದ. ಆದರೆ ಕೋರ್ಟ್​ ಇದುವರೆಗೆ ಸುಮಾರು 29 ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದು, ಎಲ್ಲವೂ ಸುಜಿತ್​ ವಿರುದ್ಧವಾಗಿಯೇ ಇವೆ. ಆತನೇ ಆರೋಪಿ ಎಂಬುದನ್ನು ಎತ್ತಿ ತೋರಿಸುತ್ತಿವೆ ಎಂದು ಹೇಳಲಾಗಿದೆ.  ಹಾಗೇ, ಬಾಲಕಿಯ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದೂ ನ್ಯಾಯಾಧೀಶರು ಆದೇಶಿಸಿದ್ದಾರೆ.   ಪ್ರಕರಣದ ವಿಚಾರಣೆ ಶುರುವಾದಾಗಿನಿಂದಲೂ ಕೋರ್ಟ್​ನಲ್ಲಿ ಹಾಜರಿದ್ದ ವಕೀಲ ವಿನಯ್​ ಶರ್ಮಾ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಧೀಶರು ತೀರ್ಪು ಓದುತ್ತಿರುವಂತೆಯೇ, ಆರೋಪಿ ಅವರೆಡೆಗೆ ಚಪ್ಪಲಿ ಎಸೆದಿದ್ದಾನೆ. ತಾನು ಅಪರಾಧಿಯಲ್ಲ ಎಂದು ಕೂಗಿದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Bandh: ಬಂದ್ ಮುಂದೂಡುವಂತೆ ಕಾಲುಮುಟ್ಟಿ ಮನವಿ ಮಾಡಿಕೊಂಡ ಪ್ರವೀಣ್ ಶೆಟ್ಟಿ ಮನವಿ ತಿರಸ್ಕರಿಸಿದ ವಾಟಾಳ್ ನಾಗರಾಜ್

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ