AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯದಲ್ಲಿ ತನ್ನ ವಿರುದ್ಧ ತೀರ್ಪು ನೀಡಿದ ಜಡ್ಜ್​​ಗೆ ಚಪ್ಪಲಿ ಎಸೆದ ಅತ್ಯಾಚಾರ ಆರೋಪಿ; ನಾನು ತಪ್ಪು ಮಾಡಿಲ್ಲ ಎಂದು ಒಂದೇ ಸಮನೆ ಕೂಗುತ್ತಿದ್ದ !

ಕಳೆದ ವರ್ಷ ಏಪ್ರಿಲ್​ನಲ್ಲಿ ಈ ಸುಜಿತ್​​ನಿಂದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿ ವಲಸೆ ಕಾರ್ಮಿಕನೊಬ್ಬನ ಪುತ್ರಿಯಾಗಿದ್ದಳು. ಈಕೆಗೆ ಸುಜಿತ್ ಚಾಕಲೇಟ್​ ಆಸೆ ತೋರಿಸಿ ಹತ್ತಿರ ಕರೆಸಿದ್ದ.

ನ್ಯಾಯಾಲಯದಲ್ಲಿ ತನ್ನ ವಿರುದ್ಧ ತೀರ್ಪು ನೀಡಿದ ಜಡ್ಜ್​​ಗೆ ಚಪ್ಪಲಿ ಎಸೆದ ಅತ್ಯಾಚಾರ ಆರೋಪಿ; ನಾನು ತಪ್ಪು ಮಾಡಿಲ್ಲ ಎಂದು ಒಂದೇ ಸಮನೆ ಕೂಗುತ್ತಿದ್ದ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 30, 2021 | 4:19 PM

Share

ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಓದುತ್ತಿದ್ದಂತೆಯೇ, ಆರೋಪಿ ಸ್ಥಾನದಲ್ಲಿದ್ದ ವ್ಯಕ್ತಿ ಅವರೆಡೆಗೆ ಚಪ್ಪಲಿಯನ್ನು ಎಸೆದ ಘಟನೆ ಗುಜರಾತ್​ನ ಸೂರತ್​​ನಲ್ಲಿ ನಡೆದಿದೆ.  ಈತನ ಹೆಸರು ಸುಜಿತ್​ ಸಾಕೇತ್​.  ಕಳೆದ ವರ್ಷ ಏಪ್ರಿಲ್​​ನಲ್ಲಿ 5ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಆಕೆಯನ್ನು ಹತ್ಯೆಗೈದ ಆರೋಪ ಇವನ ಮೇಲಿತ್ತು. ಅದರ ವಿಚಾರಣೆ ನಡೆಸಿದ್ದ ಸೂರತ್​ ನ್ಯಾಯಾಲಯದ ಜಡ್ಜ್​ ಇಂದು ತೀರ್ಪು ತಮ್ಮ ತೀರ್ಪು ಪ್ರಕಟಸಿದರು. ಆರೋಪಿ (27ವರ್ಷದ ಯುವಕ)ನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದರು. ಈ ಶಿಕ್ಷೆಯಿಂದ ತೀವ್ರ ಕುಪಿತನಾದ ವ್ಯಕ್ತಿ ತನ್ನ ಚಪ್ಪಲಿಯನ್ನು ಎಸೆದಿದ್ದಾನೆ.

ಕಳೆದ ವರ್ಷ ಏಪ್ರಿಲ್​ನಲ್ಲಿ ಈ ಸುಜಿತ್​​ನಿಂದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿ ವಲಸೆ ಕಾರ್ಮಿಕನೊಬ್ಬನ ಪುತ್ರಿಯಾಗಿದ್ದಳು. ಈಕೆಗೆ ಸುಜಿತ್ ಚಾಕಲೇಟ್​ ಆಸೆ ತೋರಿಸಿ ಹತ್ತಿರ ಕರೆಸಿದ್ದ. ನಂತರ ಕಿಡ್ನ್ಯಾಪ್​ ಮಾಡಿ, ಅತ್ಯಾಚಾರ ಮಾಡಿದ್ದ. ಬಳಿಕ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ.  ನಂತರ ಪೊಲೀಸರು ಸುಜಿತ್​​ನನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಿಸಿದ್ದರು. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಈ ವ್ಯಕ್ತಿ ತನ್ನದೇನೂ ತಪ್ಪಿಲ್ಲ. ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಕ್ಕಿಸಲಾಗಿದೆ ಎಂದು ಹೇಳುತ್ತಲೇ ಬಂದಿದ್ದ. ಆದರೆ ಕೋರ್ಟ್​ ಇದುವರೆಗೆ ಸುಮಾರು 29 ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದು, ಎಲ್ಲವೂ ಸುಜಿತ್​ ವಿರುದ್ಧವಾಗಿಯೇ ಇವೆ. ಆತನೇ ಆರೋಪಿ ಎಂಬುದನ್ನು ಎತ್ತಿ ತೋರಿಸುತ್ತಿವೆ ಎಂದು ಹೇಳಲಾಗಿದೆ.  ಹಾಗೇ, ಬಾಲಕಿಯ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದೂ ನ್ಯಾಯಾಧೀಶರು ಆದೇಶಿಸಿದ್ದಾರೆ.   ಪ್ರಕರಣದ ವಿಚಾರಣೆ ಶುರುವಾದಾಗಿನಿಂದಲೂ ಕೋರ್ಟ್​ನಲ್ಲಿ ಹಾಜರಿದ್ದ ವಕೀಲ ವಿನಯ್​ ಶರ್ಮಾ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಧೀಶರು ತೀರ್ಪು ಓದುತ್ತಿರುವಂತೆಯೇ, ಆರೋಪಿ ಅವರೆಡೆಗೆ ಚಪ್ಪಲಿ ಎಸೆದಿದ್ದಾನೆ. ತಾನು ಅಪರಾಧಿಯಲ್ಲ ಎಂದು ಕೂಗಿದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Bandh: ಬಂದ್ ಮುಂದೂಡುವಂತೆ ಕಾಲುಮುಟ್ಟಿ ಮನವಿ ಮಾಡಿಕೊಂಡ ಪ್ರವೀಣ್ ಶೆಟ್ಟಿ ಮನವಿ ತಿರಸ್ಕರಿಸಿದ ವಾಟಾಳ್ ನಾಗರಾಜ್

Follow Us
ಬೆಂಗಳೂರಿನಿಂದ ಸೈಕಲ್​​ನಲ್ಲೇ ತಿರುಪತಿ ತಲುಪಿದ ಶಾಸಕ ಸುರೇಶ್​​ ಕುಮಾರ್​​
ಬೆಂಗಳೂರಿನಿಂದ ಸೈಕಲ್​​ನಲ್ಲೇ ತಿರುಪತಿ ತಲುಪಿದ ಶಾಸಕ ಸುರೇಶ್​​ ಕುಮಾರ್​​
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’