AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯದಲ್ಲಿ ತನ್ನ ವಿರುದ್ಧ ತೀರ್ಪು ನೀಡಿದ ಜಡ್ಜ್​​ಗೆ ಚಪ್ಪಲಿ ಎಸೆದ ಅತ್ಯಾಚಾರ ಆರೋಪಿ; ನಾನು ತಪ್ಪು ಮಾಡಿಲ್ಲ ಎಂದು ಒಂದೇ ಸಮನೆ ಕೂಗುತ್ತಿದ್ದ !

ಕಳೆದ ವರ್ಷ ಏಪ್ರಿಲ್​ನಲ್ಲಿ ಈ ಸುಜಿತ್​​ನಿಂದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿ ವಲಸೆ ಕಾರ್ಮಿಕನೊಬ್ಬನ ಪುತ್ರಿಯಾಗಿದ್ದಳು. ಈಕೆಗೆ ಸುಜಿತ್ ಚಾಕಲೇಟ್​ ಆಸೆ ತೋರಿಸಿ ಹತ್ತಿರ ಕರೆಸಿದ್ದ.

ನ್ಯಾಯಾಲಯದಲ್ಲಿ ತನ್ನ ವಿರುದ್ಧ ತೀರ್ಪು ನೀಡಿದ ಜಡ್ಜ್​​ಗೆ ಚಪ್ಪಲಿ ಎಸೆದ ಅತ್ಯಾಚಾರ ಆರೋಪಿ; ನಾನು ತಪ್ಪು ಮಾಡಿಲ್ಲ ಎಂದು ಒಂದೇ ಸಮನೆ ಕೂಗುತ್ತಿದ್ದ !
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Dec 30, 2021 | 4:19 PM

Share

ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಓದುತ್ತಿದ್ದಂತೆಯೇ, ಆರೋಪಿ ಸ್ಥಾನದಲ್ಲಿದ್ದ ವ್ಯಕ್ತಿ ಅವರೆಡೆಗೆ ಚಪ್ಪಲಿಯನ್ನು ಎಸೆದ ಘಟನೆ ಗುಜರಾತ್​ನ ಸೂರತ್​​ನಲ್ಲಿ ನಡೆದಿದೆ.  ಈತನ ಹೆಸರು ಸುಜಿತ್​ ಸಾಕೇತ್​.  ಕಳೆದ ವರ್ಷ ಏಪ್ರಿಲ್​​ನಲ್ಲಿ 5ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಆಕೆಯನ್ನು ಹತ್ಯೆಗೈದ ಆರೋಪ ಇವನ ಮೇಲಿತ್ತು. ಅದರ ವಿಚಾರಣೆ ನಡೆಸಿದ್ದ ಸೂರತ್​ ನ್ಯಾಯಾಲಯದ ಜಡ್ಜ್​ ಇಂದು ತೀರ್ಪು ತಮ್ಮ ತೀರ್ಪು ಪ್ರಕಟಸಿದರು. ಆರೋಪಿ (27ವರ್ಷದ ಯುವಕ)ನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದರು. ಈ ಶಿಕ್ಷೆಯಿಂದ ತೀವ್ರ ಕುಪಿತನಾದ ವ್ಯಕ್ತಿ ತನ್ನ ಚಪ್ಪಲಿಯನ್ನು ಎಸೆದಿದ್ದಾನೆ.

ಕಳೆದ ವರ್ಷ ಏಪ್ರಿಲ್​ನಲ್ಲಿ ಈ ಸುಜಿತ್​​ನಿಂದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿ ವಲಸೆ ಕಾರ್ಮಿಕನೊಬ್ಬನ ಪುತ್ರಿಯಾಗಿದ್ದಳು. ಈಕೆಗೆ ಸುಜಿತ್ ಚಾಕಲೇಟ್​ ಆಸೆ ತೋರಿಸಿ ಹತ್ತಿರ ಕರೆಸಿದ್ದ. ನಂತರ ಕಿಡ್ನ್ಯಾಪ್​ ಮಾಡಿ, ಅತ್ಯಾಚಾರ ಮಾಡಿದ್ದ. ಬಳಿಕ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ.  ನಂತರ ಪೊಲೀಸರು ಸುಜಿತ್​​ನನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಿಸಿದ್ದರು. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಈ ವ್ಯಕ್ತಿ ತನ್ನದೇನೂ ತಪ್ಪಿಲ್ಲ. ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಕ್ಕಿಸಲಾಗಿದೆ ಎಂದು ಹೇಳುತ್ತಲೇ ಬಂದಿದ್ದ. ಆದರೆ ಕೋರ್ಟ್​ ಇದುವರೆಗೆ ಸುಮಾರು 29 ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದು, ಎಲ್ಲವೂ ಸುಜಿತ್​ ವಿರುದ್ಧವಾಗಿಯೇ ಇವೆ. ಆತನೇ ಆರೋಪಿ ಎಂಬುದನ್ನು ಎತ್ತಿ ತೋರಿಸುತ್ತಿವೆ ಎಂದು ಹೇಳಲಾಗಿದೆ.  ಹಾಗೇ, ಬಾಲಕಿಯ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದೂ ನ್ಯಾಯಾಧೀಶರು ಆದೇಶಿಸಿದ್ದಾರೆ.   ಪ್ರಕರಣದ ವಿಚಾರಣೆ ಶುರುವಾದಾಗಿನಿಂದಲೂ ಕೋರ್ಟ್​ನಲ್ಲಿ ಹಾಜರಿದ್ದ ವಕೀಲ ವಿನಯ್​ ಶರ್ಮಾ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಧೀಶರು ತೀರ್ಪು ಓದುತ್ತಿರುವಂತೆಯೇ, ಆರೋಪಿ ಅವರೆಡೆಗೆ ಚಪ್ಪಲಿ ಎಸೆದಿದ್ದಾನೆ. ತಾನು ಅಪರಾಧಿಯಲ್ಲ ಎಂದು ಕೂಗಿದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Bandh: ಬಂದ್ ಮುಂದೂಡುವಂತೆ ಕಾಲುಮುಟ್ಟಿ ಮನವಿ ಮಾಡಿಕೊಂಡ ಪ್ರವೀಣ್ ಶೆಟ್ಟಿ ಮನವಿ ತಿರಸ್ಕರಿಸಿದ ವಾಟಾಳ್ ನಾಗರಾಜ್

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!