AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಬಂದ್ರೆ ಇಲ್ಲಿನ ವಾತಾವರಣ ಹಾಳಾಗುತ್ತೆ, ಅತ್ಯಾಚಾರ ಸಂತ್ರಸ್ತೆಗೆ ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು

ಅತ್ಯಾಚಾರ ಸಂತ್ರಸ್ತೆಗೆ ಧೈರ್ಯ ತುಂಬಿ ಏನೂ ಆಗಿಲ್ಲ, ನೀನು ಪರೀಕ್ಷೆ ಬರೆದು ನಿನ್ನ ಕಾಲ ಮೇಲೆ ನಿಂತು ಎಲ್ಲವನ್ನೂ ಎದುರಿಸಬೇಕು ನಿನ್ನ ಜತೆ ನಾವಿದ್ದೇವೆ ಎಂದು ಧೈರ್ಯ ತುಂಬ ಬೇಕಾದ ಶಿಕ್ಷಕರೇ ಆಕೆಯನ್ನು ದೂರ ಇಟ್ಟರೆ ಆ ವಿದ್ಯಾರ್ಥಿನಿಯ ಮನಸ್ಸಿಗೆ ಎಷ್ಟು ಆಘಾತವಾಗಿರಬೇಡ.

ನೀನು ಬಂದ್ರೆ ಇಲ್ಲಿನ ವಾತಾವರಣ ಹಾಳಾಗುತ್ತೆ, ಅತ್ಯಾಚಾರ ಸಂತ್ರಸ್ತೆಗೆ ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು
ವಿದ್ಯಾರ್ಥಿನಿ-ಸಾಂದರ್ಭಿಕ ಚಿತ್ರImage Credit source: Odisha TV
ನಯನಾ ರಾಜೀವ್
|

Updated on: Apr 05, 2024 | 11:21 AM

Share

ಅತ್ಯಾಚಾರ ಸಂತ್ರಸ್ತೆಗೆ ಧೈರ್ಯ ತುಂಬಿ ಏನೂ ಆಗಿಲ್ಲ, ನೀನು ಪರೀಕ್ಷೆ ಬರೆದು ನಿನ್ನ ಕಾಲ ಮೇಲೆ ನಿಂತು ಎಲ್ಲವನ್ನೂ ಎದುರಿಸಬೇಕು ನಿನ್ನ ಜತೆ ನಾವಿದ್ದೇವೆ ಎಂದು ಧೈರ್ಯ ತುಂಬ ಬೇಕಾದ ಶಿಕ್ಷಕರೇ ಆಕೆಯನ್ನು ದೂರ ಇಟ್ಟರೆ ಆ ವಿದ್ಯಾರ್ಥಿನಿಯ ಮನಸ್ಸಿಗೆ ಎಷ್ಟು ಆಘಾತವಾಗಿರಬೇಡ.

ರಾಜಸ್ಥಾನದಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಳೆದ ವರ್ಷ ಸಾಮೂಹಿಕ ಅತ್ಯಾಚಾರವಾಗಿತ್ತು, ಈ ಕಾರಣವಿಟ್ಟುಕೊಂಡು ಅಧಿಕಾರಿಗಳು ಆಕೆಗೆ ಬೋರ್ಡ್​ ಪರೀಕ್ಷೆಗೆ ಹಾಜರಾಗಲು ಬಿಡದೆ ಅಮಾನವೀಯವಾಗಿ ನಡೆದುಕೊಂಡ ಘಟನೆ ವರದಿಯಾಗಿದೆ.

ನೀನು ಪರೀಕ್ಷೆಗೆ ಹಾಜರಾದರೆ ಇಲ್ಲಿನ ವಾತಾವರಣ ಹಾಳಾಗುವುದು ಎಂದು ಶಾಲಾ ಅಧಿಕಾರಿಗಳು ಹೇಳಿ ಆಕೆಯನ್ನು ಅಲ್ಲಿಂದ ಕಳುಹಿಸಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾಳೆ.

ಅಜ್ಮೀರ್‌ನ ಖಾಸಗಿ ಶಾಲೆಯು ವಿದ್ಯಾರ್ಥಿನಿ 4 ತಿಂಗಳಿನಿಂದ ತರಗತಿಗಳಿಗೆ ಹಾಜರಾಗದ ಕಾರಣ ಅವರು ಪ್ರವೇಶ ಪತ್ರವನ್ನು ನೀಡಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿದ್ಯಾರ್ಥಿನಿ ಬೇರೆ ಶಾಲೆಯ ಶಿಕ್ಷಕರನ್ನು ಸಂಪರ್ಕಿಸಿದಾಗ ವಿಷಯ ಬೆಳಕಿಗೆ ಬಂದಿದೆ, ಅವರು ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಸಲಹೆ ನೀಡಿದರು. ಅಜ್ಮೀರ್‌ನ ಮಕ್ಕಳ ಕಲ್ಯಾಣ ಆಯೋಗ (ಸಿಡಬ್ಲ್ಯೂಸಿ) ಪ್ರಕರಣ ದಾಖಲಿಸಿದ್ದು, ತನಿಖೆಯ ನಂತರ ಅಗತ್ಯ ಕ್ರಮ ಕೈಗೊಳ್ಳಲಿದೆ.

ಇಡೀ ಘಟನೆಯ ಬಗ್ಗೆ ವಿದ್ಯಾರ್ಥಿಯೊಂದಿಗೆ ಮಾತನಾಡಿದ್ದೇನೆ ಎಂದು ಸಿಡಬ್ಲ್ಯೂಸಿ ಅಧ್ಯಕ್ಷೆ ಅಂಜಲಿ ಶರ್ಮಾ ಹೇಳಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿದ್ಯಾರ್ಥಿನಿಯನ್ನು ಆಕೆಯ ಚಿಕ್ಕಪ್ಪ ಮತ್ತು ಇತರ ಇಬ್ಬರು ಪುರುಷರು ಅತ್ಯಾಚಾರ ಮಾಡಿದ್ದರು. ಅವಳು ಶಾಲೆಗೆ ಬರುವುದರಿಂದ ವಾತಾವರಣ ಹಾಳಾಗಬಹುದು ಎಂದು ಶಾಲೆಯವರು ಮನೆಯಿಂದಲೇ ಓದುವಂತೆ ಸೂಚಿಸಿದ್ದರು. ಆಕೆ ಒಪ್ಪಿಕೊಂಡು ಮನೆಯಿಂದಲೇ ಬೋರ್ಡ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು.

ಆಕೆಯ ಪ್ರವೇಶ ಪತ್ರವನ್ನು ತೆಗೆದುಕೊಳ್ಳಲು ಹೋದಾಗ, ಅವಳು ಇನ್ನು ಮುಂದೆ ಶಾಲೆಯ ವಿದ್ಯಾರ್ಥಿಯಲ್ಲ ಎಂದು ಹೇಳಲಾಗಿತ್ತು. ಆಕೆಯ ಅತ್ಯಾಚಾರದ ನಂತರ ಇತರ ವಿದ್ಯಾರ್ಥಿಗಳ ಪೋಷಕರು ಆಕೆಯ ಉಪಸ್ಥಿತಿಯನ್ನು ವಿರೋಧಿಸಿದ್ದರಿಂದ ಶಾಲೆಯು ತನ್ನನ್ನು ಪ್ರವೇಶಿಸದಂತೆ ನಿರ್ಬಂಧಿಸಿದೆ ಎಂಬುದನ್ನು ಅರಿತಳು.

ಆಕೆ ತನ್ನ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಆಕೆ 79% ಗಳಿಸಿದ್ದಾಳೆ, ಈಗ ಸ್ವಲ್ಪ ಖಿನ್ನತೆಗೆ ಒಳಗಾಗಿದ್ದಾಳೆ. ಶಾಲೆಯ ನಿರ್ಲಕ್ಷ್ಯದಿಂದಾಗಿ ಆಕೆಯ ಒಂದು ವರ್ಷ ನಷ್ಟವಾಯಿತು ಎಂದು ಅಂಜಲಿ ಶರ್ಮಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​