AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 10, 2021 | 1:07 PM

Share

ಅತ್ಯಾಚಾರಕ್ಕೆ ಒಳಗಾಗಿದ್ದ 55ವರ್ಷದ ಮಹಿಳೆಯೊಬ್ಬರು ಪೊಲೀಸ್​ ಠಾಣೆ (Police Station)ಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಅಜಂಗಢ್​​​ನಲ್ಲಿ ನಡೆದಿದೆ. ಪೊಲೀಸರು ಆರೋಪಿ ವಿರುದ್ಧ ಎಫ್​ಐಆರ್​ ದಾಖಲಿಸಲು ತುಂಬ ವಿಳಂಬ ಮಾಡಿದ್ದರಿಂದ ಬೇಸರಗೊಂಡ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.  ಶನಿವಾರ ಆಕೆ ಪೊಲೀಸ್​ ಠಾಣೆಯಲ್ಲಿ ವಿಷ ಸೇವಿಸಿದ್ದು, ಅವರ ಬಳಿ ಯಾವುದೇ ಸೂಸೈಡ್​ ನೋಟ್​ ಕೂಡ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಅಜಂಗಢ್​​ ಠಾಣೆಯ ಹಿರಿಯ ಅಧಿಕಾರಿ (SHO)ಯನ್ನು ಅಮಾನತು ಮಾಡಲಾಗಿದ್ದು, ಕೂಡಲೇ ಅತ್ಯಾಚಾರ ಪ್ರಕರಣ ದಾಖಲಿಸಿ, ತನಿಖೆ ಶುರು ಮಾಡುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಹಾಗೇ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಜನಸಾಮಾನ್ಯರಿಗೆ ನಾವು ನ್ಯಾಯ ನೀಡುತ್ತೇವೆ ಎಂದು ಸದಾ ಪ್ರತಿಪಾದಿಸುವ ಬಿಜೆಪಿಗೆ ಈ ಘಟನೆ ಕಪಾಳ ಮೋಕ್ಷ ಮಾಡುವಂತಿದೆ. ಈ ಘಟನೆಯಲ್ಲಿ ಅತ್ಯಾಚಾರ ಆರೋಪಿಗಷ್ಟೇ ಅಲ್ಲದೆ, ಮಹಿಳೆಯ ಸಾವಿಗೆ ಕಾರಣರಾದ ಪೊಲೀಸ್​ ಸಿಬ್ಬಂದಿಯ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

‘ನನ್ನ ಪತ್ನಿಯ ಮೇಲೆ ಅನಿಲ್​ ಎಂಬಾತ ಅತ್ಯಾಚಾರ ಮಾಡಿದ್ದ. ಆ ಬಗ್ಗೆ ದೂರು ನೀಡಿದರೆ ಪೊಲೀಸರು ಎಫ್​ಐಆರ್​ ದಾಖಲಿಸಲಿಲ್ಲ. ಯಾವುದೇ ಕ್ರಮ ಕೈಗೊಳ್ಳಲೂ ಮುಂದಾಗಲಿಲ್ಲ.ಹಲವು ಬಾರಿ ನಾವು ಪೊಲೀಸ್​ ಠಾಣೆಗೆ ಬಂದಿದ್ದರೂ ಅವರು ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಆಕೆ ಪೊಲೀಸ್​ ಠಾಣೆಯಲ್ಲೇ ವಿಷ ಸೇವಿಸಿದಳು. ಆದರೆ ಪೊಲೀಸರು ಆಕೆ ಪೊಲೀಸ್​ ಸ್ಟೇಶನ್​​ನಲ್ಲಿ ಸತ್ತಳು ಎಂಬುದನ್ನೂ ಒಪ್ಪಿಕೊಳ್ಳುತ್ತಿಲ್ಲ’ ಎಂದು ಮಹಿಳೆ ಪತಿ ಹೇಳಿದ್ದಾಗಿ ಎಸ್​ಪಿ ಸುಧೀರ್​ ಕುಮಾರ್​ ತಿಳಿಸಿದ್ದಾರೆ. ಇನ್ನು ಠಾಣಾಧಿಕಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದಿದ್ದಾರೆ. ಹಾಗೇ, ಮಹಿಳೆ ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದಿದ್ದಳು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಸಾವನ್ನಪ್ಪಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: WhatsApp: ನಿಮ್ಮ ಮೊಬೈಲ್​ನಲ್ಲಿ ವಾಟ್ಸ್​ಆ್ಯಪ್ ಜೊತೆ ಈ ಆ್ಯಪ್ ಇದ್ದರೆ ತಕ್ಷಣವೇ ಡಿಲೀಟ್ ಮಾಡಿ

ಕಾಶ್ಮೀರದಲ್ಲಿ ಆತಂಕದ ವಾತಾವರಣ: ಕಣಿವೆ ತೊರೆಯುತ್ತಿದ್ದಾರೆ ಕಾಶ್ಮೀರಿ ಪಂಡಿತ್, ಸಿಖ್ ಸಮುದಾಯದ ಸರ್ಕಾರಿ ಸಿಬ್ಬಂದಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ