AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 10, 2021 | 1:07 PM

Share

ಅತ್ಯಾಚಾರಕ್ಕೆ ಒಳಗಾಗಿದ್ದ 55ವರ್ಷದ ಮಹಿಳೆಯೊಬ್ಬರು ಪೊಲೀಸ್​ ಠಾಣೆ (Police Station)ಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಅಜಂಗಢ್​​​ನಲ್ಲಿ ನಡೆದಿದೆ. ಪೊಲೀಸರು ಆರೋಪಿ ವಿರುದ್ಧ ಎಫ್​ಐಆರ್​ ದಾಖಲಿಸಲು ತುಂಬ ವಿಳಂಬ ಮಾಡಿದ್ದರಿಂದ ಬೇಸರಗೊಂಡ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.  ಶನಿವಾರ ಆಕೆ ಪೊಲೀಸ್​ ಠಾಣೆಯಲ್ಲಿ ವಿಷ ಸೇವಿಸಿದ್ದು, ಅವರ ಬಳಿ ಯಾವುದೇ ಸೂಸೈಡ್​ ನೋಟ್​ ಕೂಡ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಅಜಂಗಢ್​​ ಠಾಣೆಯ ಹಿರಿಯ ಅಧಿಕಾರಿ (SHO)ಯನ್ನು ಅಮಾನತು ಮಾಡಲಾಗಿದ್ದು, ಕೂಡಲೇ ಅತ್ಯಾಚಾರ ಪ್ರಕರಣ ದಾಖಲಿಸಿ, ತನಿಖೆ ಶುರು ಮಾಡುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಹಾಗೇ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಜನಸಾಮಾನ್ಯರಿಗೆ ನಾವು ನ್ಯಾಯ ನೀಡುತ್ತೇವೆ ಎಂದು ಸದಾ ಪ್ರತಿಪಾದಿಸುವ ಬಿಜೆಪಿಗೆ ಈ ಘಟನೆ ಕಪಾಳ ಮೋಕ್ಷ ಮಾಡುವಂತಿದೆ. ಈ ಘಟನೆಯಲ್ಲಿ ಅತ್ಯಾಚಾರ ಆರೋಪಿಗಷ್ಟೇ ಅಲ್ಲದೆ, ಮಹಿಳೆಯ ಸಾವಿಗೆ ಕಾರಣರಾದ ಪೊಲೀಸ್​ ಸಿಬ್ಬಂದಿಯ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

‘ನನ್ನ ಪತ್ನಿಯ ಮೇಲೆ ಅನಿಲ್​ ಎಂಬಾತ ಅತ್ಯಾಚಾರ ಮಾಡಿದ್ದ. ಆ ಬಗ್ಗೆ ದೂರು ನೀಡಿದರೆ ಪೊಲೀಸರು ಎಫ್​ಐಆರ್​ ದಾಖಲಿಸಲಿಲ್ಲ. ಯಾವುದೇ ಕ್ರಮ ಕೈಗೊಳ್ಳಲೂ ಮುಂದಾಗಲಿಲ್ಲ.ಹಲವು ಬಾರಿ ನಾವು ಪೊಲೀಸ್​ ಠಾಣೆಗೆ ಬಂದಿದ್ದರೂ ಅವರು ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಆಕೆ ಪೊಲೀಸ್​ ಠಾಣೆಯಲ್ಲೇ ವಿಷ ಸೇವಿಸಿದಳು. ಆದರೆ ಪೊಲೀಸರು ಆಕೆ ಪೊಲೀಸ್​ ಸ್ಟೇಶನ್​​ನಲ್ಲಿ ಸತ್ತಳು ಎಂಬುದನ್ನೂ ಒಪ್ಪಿಕೊಳ್ಳುತ್ತಿಲ್ಲ’ ಎಂದು ಮಹಿಳೆ ಪತಿ ಹೇಳಿದ್ದಾಗಿ ಎಸ್​ಪಿ ಸುಧೀರ್​ ಕುಮಾರ್​ ತಿಳಿಸಿದ್ದಾರೆ. ಇನ್ನು ಠಾಣಾಧಿಕಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದಿದ್ದಾರೆ. ಹಾಗೇ, ಮಹಿಳೆ ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದಿದ್ದಳು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಸಾವನ್ನಪ್ಪಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: WhatsApp: ನಿಮ್ಮ ಮೊಬೈಲ್​ನಲ್ಲಿ ವಾಟ್ಸ್​ಆ್ಯಪ್ ಜೊತೆ ಈ ಆ್ಯಪ್ ಇದ್ದರೆ ತಕ್ಷಣವೇ ಡಿಲೀಟ್ ಮಾಡಿ

ಕಾಶ್ಮೀರದಲ್ಲಿ ಆತಂಕದ ವಾತಾವರಣ: ಕಣಿವೆ ತೊರೆಯುತ್ತಿದ್ದಾರೆ ಕಾಶ್ಮೀರಿ ಪಂಡಿತ್, ಸಿಖ್ ಸಮುದಾಯದ ಸರ್ಕಾರಿ ಸಿಬ್ಬಂದಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ