AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Oct 10, 2021 | 1:07 PM

Share

ಅತ್ಯಾಚಾರಕ್ಕೆ ಒಳಗಾಗಿದ್ದ 55ವರ್ಷದ ಮಹಿಳೆಯೊಬ್ಬರು ಪೊಲೀಸ್​ ಠಾಣೆ (Police Station)ಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಅಜಂಗಢ್​​​ನಲ್ಲಿ ನಡೆದಿದೆ. ಪೊಲೀಸರು ಆರೋಪಿ ವಿರುದ್ಧ ಎಫ್​ಐಆರ್​ ದಾಖಲಿಸಲು ತುಂಬ ವಿಳಂಬ ಮಾಡಿದ್ದರಿಂದ ಬೇಸರಗೊಂಡ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.  ಶನಿವಾರ ಆಕೆ ಪೊಲೀಸ್​ ಠಾಣೆಯಲ್ಲಿ ವಿಷ ಸೇವಿಸಿದ್ದು, ಅವರ ಬಳಿ ಯಾವುದೇ ಸೂಸೈಡ್​ ನೋಟ್​ ಕೂಡ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಅಜಂಗಢ್​​ ಠಾಣೆಯ ಹಿರಿಯ ಅಧಿಕಾರಿ (SHO)ಯನ್ನು ಅಮಾನತು ಮಾಡಲಾಗಿದ್ದು, ಕೂಡಲೇ ಅತ್ಯಾಚಾರ ಪ್ರಕರಣ ದಾಖಲಿಸಿ, ತನಿಖೆ ಶುರು ಮಾಡುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಹಾಗೇ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಜನಸಾಮಾನ್ಯರಿಗೆ ನಾವು ನ್ಯಾಯ ನೀಡುತ್ತೇವೆ ಎಂದು ಸದಾ ಪ್ರತಿಪಾದಿಸುವ ಬಿಜೆಪಿಗೆ ಈ ಘಟನೆ ಕಪಾಳ ಮೋಕ್ಷ ಮಾಡುವಂತಿದೆ. ಈ ಘಟನೆಯಲ್ಲಿ ಅತ್ಯಾಚಾರ ಆರೋಪಿಗಷ್ಟೇ ಅಲ್ಲದೆ, ಮಹಿಳೆಯ ಸಾವಿಗೆ ಕಾರಣರಾದ ಪೊಲೀಸ್​ ಸಿಬ್ಬಂದಿಯ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

‘ನನ್ನ ಪತ್ನಿಯ ಮೇಲೆ ಅನಿಲ್​ ಎಂಬಾತ ಅತ್ಯಾಚಾರ ಮಾಡಿದ್ದ. ಆ ಬಗ್ಗೆ ದೂರು ನೀಡಿದರೆ ಪೊಲೀಸರು ಎಫ್​ಐಆರ್​ ದಾಖಲಿಸಲಿಲ್ಲ. ಯಾವುದೇ ಕ್ರಮ ಕೈಗೊಳ್ಳಲೂ ಮುಂದಾಗಲಿಲ್ಲ.ಹಲವು ಬಾರಿ ನಾವು ಪೊಲೀಸ್​ ಠಾಣೆಗೆ ಬಂದಿದ್ದರೂ ಅವರು ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಆಕೆ ಪೊಲೀಸ್​ ಠಾಣೆಯಲ್ಲೇ ವಿಷ ಸೇವಿಸಿದಳು. ಆದರೆ ಪೊಲೀಸರು ಆಕೆ ಪೊಲೀಸ್​ ಸ್ಟೇಶನ್​​ನಲ್ಲಿ ಸತ್ತಳು ಎಂಬುದನ್ನೂ ಒಪ್ಪಿಕೊಳ್ಳುತ್ತಿಲ್ಲ’ ಎಂದು ಮಹಿಳೆ ಪತಿ ಹೇಳಿದ್ದಾಗಿ ಎಸ್​ಪಿ ಸುಧೀರ್​ ಕುಮಾರ್​ ತಿಳಿಸಿದ್ದಾರೆ. ಇನ್ನು ಠಾಣಾಧಿಕಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದಿದ್ದಾರೆ. ಹಾಗೇ, ಮಹಿಳೆ ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದಿದ್ದಳು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಸಾವನ್ನಪ್ಪಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: WhatsApp: ನಿಮ್ಮ ಮೊಬೈಲ್​ನಲ್ಲಿ ವಾಟ್ಸ್​ಆ್ಯಪ್ ಜೊತೆ ಈ ಆ್ಯಪ್ ಇದ್ದರೆ ತಕ್ಷಣವೇ ಡಿಲೀಟ್ ಮಾಡಿ

ಕಾಶ್ಮೀರದಲ್ಲಿ ಆತಂಕದ ವಾತಾವರಣ: ಕಣಿವೆ ತೊರೆಯುತ್ತಿದ್ದಾರೆ ಕಾಶ್ಮೀರಿ ಪಂಡಿತ್, ಸಿಖ್ ಸಮುದಾಯದ ಸರ್ಕಾರಿ ಸಿಬ್ಬಂದಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ