Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Oct 10, 2021 | 1:07 PM

ಅತ್ಯಾಚಾರಕ್ಕೆ ಒಳಗಾಗಿದ್ದ 55ವರ್ಷದ ಮಹಿಳೆಯೊಬ್ಬರು ಪೊಲೀಸ್​ ಠಾಣೆ (Police Station)ಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಅಜಂಗಢ್​​​ನಲ್ಲಿ ನಡೆದಿದೆ. ಪೊಲೀಸರು ಆರೋಪಿ ವಿರುದ್ಧ ಎಫ್​ಐಆರ್​ ದಾಖಲಿಸಲು ತುಂಬ ವಿಳಂಬ ಮಾಡಿದ್ದರಿಂದ ಬೇಸರಗೊಂಡ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.  ಶನಿವಾರ ಆಕೆ ಪೊಲೀಸ್​ ಠಾಣೆಯಲ್ಲಿ ವಿಷ ಸೇವಿಸಿದ್ದು, ಅವರ ಬಳಿ ಯಾವುದೇ ಸೂಸೈಡ್​ ನೋಟ್​ ಕೂಡ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಅಜಂಗಢ್​​ ಠಾಣೆಯ ಹಿರಿಯ ಅಧಿಕಾರಿ (SHO)ಯನ್ನು ಅಮಾನತು ಮಾಡಲಾಗಿದ್ದು, ಕೂಡಲೇ ಅತ್ಯಾಚಾರ ಪ್ರಕರಣ ದಾಖಲಿಸಿ, ತನಿಖೆ ಶುರು ಮಾಡುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಹಾಗೇ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಒತ್ತಾಯಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಜನಸಾಮಾನ್ಯರಿಗೆ ನಾವು ನ್ಯಾಯ ನೀಡುತ್ತೇವೆ ಎಂದು ಸದಾ ಪ್ರತಿಪಾದಿಸುವ ಬಿಜೆಪಿಗೆ ಈ ಘಟನೆ ಕಪಾಳ ಮೋಕ್ಷ ಮಾಡುವಂತಿದೆ. ಈ ಘಟನೆಯಲ್ಲಿ ಅತ್ಯಾಚಾರ ಆರೋಪಿಗಷ್ಟೇ ಅಲ್ಲದೆ, ಮಹಿಳೆಯ ಸಾವಿಗೆ ಕಾರಣರಾದ ಪೊಲೀಸ್​ ಸಿಬ್ಬಂದಿಯ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

‘ನನ್ನ ಪತ್ನಿಯ ಮೇಲೆ ಅನಿಲ್​ ಎಂಬಾತ ಅತ್ಯಾಚಾರ ಮಾಡಿದ್ದ. ಆ ಬಗ್ಗೆ ದೂರು ನೀಡಿದರೆ ಪೊಲೀಸರು ಎಫ್​ಐಆರ್​ ದಾಖಲಿಸಲಿಲ್ಲ. ಯಾವುದೇ ಕ್ರಮ ಕೈಗೊಳ್ಳಲೂ ಮುಂದಾಗಲಿಲ್ಲ.ಹಲವು ಬಾರಿ ನಾವು ಪೊಲೀಸ್​ ಠಾಣೆಗೆ ಬಂದಿದ್ದರೂ ಅವರು ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಆಕೆ ಪೊಲೀಸ್​ ಠಾಣೆಯಲ್ಲೇ ವಿಷ ಸೇವಿಸಿದಳು. ಆದರೆ ಪೊಲೀಸರು ಆಕೆ ಪೊಲೀಸ್​ ಸ್ಟೇಶನ್​​ನಲ್ಲಿ ಸತ್ತಳು ಎಂಬುದನ್ನೂ ಒಪ್ಪಿಕೊಳ್ಳುತ್ತಿಲ್ಲ’ ಎಂದು ಮಹಿಳೆ ಪತಿ ಹೇಳಿದ್ದಾಗಿ ಎಸ್​ಪಿ ಸುಧೀರ್​ ಕುಮಾರ್​ ತಿಳಿಸಿದ್ದಾರೆ. ಇನ್ನು ಠಾಣಾಧಿಕಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದಿದ್ದಾರೆ. ಹಾಗೇ, ಮಹಿಳೆ ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದಿದ್ದಳು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಸಾವನ್ನಪ್ಪಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: WhatsApp: ನಿಮ್ಮ ಮೊಬೈಲ್​ನಲ್ಲಿ ವಾಟ್ಸ್​ಆ್ಯಪ್ ಜೊತೆ ಈ ಆ್ಯಪ್ ಇದ್ದರೆ ತಕ್ಷಣವೇ ಡಿಲೀಟ್ ಮಾಡಿ

ಕಾಶ್ಮೀರದಲ್ಲಿ ಆತಂಕದ ವಾತಾವರಣ: ಕಣಿವೆ ತೊರೆಯುತ್ತಿದ್ದಾರೆ ಕಾಶ್ಮೀರಿ ಪಂಡಿತ್, ಸಿಖ್ ಸಮುದಾಯದ ಸರ್ಕಾರಿ ಸಿಬ್ಬಂದಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್