AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಗಲ್ಲು ಶಿಕ್ಷೆ!

3 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ 65 ವರ್ಷದ ವ್ಯಕ್ತಿಗೆ ಪುಣೆಯ ವೇಗದೂತ ನ್ಯಾಯಾಲಯವು ಇಂದು ಮರಣದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಭೀಮರಾವ್ ಕಾಂಬ್ಳೆ ಎಂದು ಗುರುತಿಸಲಾದ ಈ ಅಪರಾಧಿಯನ್ನು ಅಪ್ರಾಪ್ತ ಮಗುವಿನ ಅಪಹರಣ, ಅತ್ಯಾಚಾರ ಮತ್ತು ಕೊಲೆಗಾಗಿ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಮೇ 1ರಂದು ನಡೆದಿದ್ದ ಈ ಅಪರಾಧ ನಡೆದ ಕೇವಲ 60 ದಿನಗಳ ಒಳಗಾಗಿ ಆರೋಪಿಯನ್ನು ದೋಷಿ ಎಂದು ನಿರ್ಧರಿಸಿತ್ತು.

3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಗಲ್ಲು ಶಿಕ್ಷೆ!
Bhimrao KambleImage Credit source: x
ಸುಷ್ಮಾ ಚಕ್ರೆ
|

Updated on: Jun 29, 2026 | 5:50 PM

Share

ಮುಖ್ಯಾಂಶಗಳು

  • 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ
  • 65 ವರ್ಷದ ಆರೋಪಿಗೆ ಗಲ್ಲು ಶಿಕ್ಷೆ ಘೋಷಣೆ
  • ಪುಣೆ ಕೋರ್ಟ್​ನಿಂದ ಮಹತ್ವದ ತೀರ್ಪು ಪ್ರಕಟ

ಪುಣೆ, ಜೂನ್ 29: ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರವೆಸಗಿ ಕಾಮತೃಷೆ ತೀರಿಸಿಕೊಂಡು, ಬಳಿಕ ಆ ಮಗುವನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದ 65 ವರ್ಷದ ವ್ಯಕ್ತಿಗೆ ಪುಣೆ ಕೋರ್ಟ್ (Pune) ಗಲ್ಲುಶಿಕ್ಷೆ ವಿಧಿಸಿದೆ. ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ನ್ಯಾಯಾಲಯವು ಇಂದು ಆರೋಪಿಗೆ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪುಣೆಯ ವೇಗಧೂತ ನ್ಯಾಯಾಲಯ ಘಟನೆ ನಡೆದ 2 ತಿಂಗಳಲ್ಲೇ ಈ ತೀರ್ಪು ನೀಡಿದೆ.

ಈ ಘೋರ ಅಪರಾಧವು ಇದೇ ವರ್ಷ ಮೇ 1ರಂದು ಪುಣೆ ಜಿಲ್ಲೆಯ ಭೋರ್ ತಹಸಿಲ್‌ನಲ್ಲಿರುವ ನಸ್ರಾಪುರ ಗ್ರಾಮದಲ್ಲಿ ನಡೆದಿತ್ತು. ಭೀಮರಾವ್ ಕಾಂಬ್ಳೆ ಎಂಬ 65 ವರ್ಷದ ಆರೋಪಿಯು 3 ವರ್ಷದ ಮಗುವನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದನು. ನಂತರ ಮಗು ಯಾರಿಗಾದರೂ ವಿಷಯ ತಿಳಿಸಬಹುದು ಎಂಬ ಭಯದಿಂದ ಮಗುವಿನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದನು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕೇವಲ 24 ಗಂಟೆಗಳ ಒಳಗೆ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿ: ಅತ್ಯಾಚಾರ ನಡೆಸಿದ ತಂದೆ ವಿರುದ್ಧ ಒಬ್ಬಂಟಿಯಾಗಿ ಕಾನೂನು ಹೋರಾಟ ಗೆದ್ದ ಅಪ್ರಾಪ್ತೆ!: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

“ಈ ಅಪರಾಧವನ್ನು ಅತ್ಯಂತ ಕ್ರೂರವಾಗಿ ಎಸಗಲಾಗಿದ್ದು, ಇದರಲ್ಲಿ ಸಂತ್ರಸ್ತ ಮಗುವಿಗೆ ಅಮಾನವೀಯ ಹಿಂಸೆ ನೀಡಲಾಗಿದೆ. ಸಂತ್ರಸ್ತೆ ಅತ್ಯಂತ ನಿರಪರಾಧಿ ಮತ್ತು ಅಸಹಾಯಕ ಮಗುವಾಗಿದ್ದಳು. ಕಾಮದ ಹಸಿವನ್ನು ನೀಗಿಸಿಕೊಳ್ಳಲು ಈ ಕೊಲೆ ಮಾಡಲಾಗಿದ್ದು, ಇದು ಸಂಪೂರ್ಣ ನೈತಿಕ ಪತನವನ್ನು ತೋರಿಸುತ್ತದೆ. ಇದು ಯಾವುದೇ ಪ್ರಚೋದನೆಯಿಲ್ಲದೆ ನಡೆದ ಕೊಲೆಯಾಗಿದೆ. ಈ ಅಪರಾಧವನ್ನು ಎಷ್ಟು ಕ್ರೂರವಾಗಿ ಮಾಡಲಾಗಿದೆಯೆಂದರೆ, ಇದು ಕೇವಲ ನ್ಯಾಯಾಂಗದ ಆತ್ಮಸಾಕ್ಷಿಯನ್ನು ಮಾತ್ರವಲ್ಲದೆ ಇಡೀ ಸಮಾಜದ ಆತ್ಮಸಾಕ್ಷಿಯನ್ನೇ ಬೆಚ್ಚಿಬೀಳಿಸಿದೆ” ಎಂದು ನ್ಯಾಯಾಧೀಶ ಸಾಳುಂಖೆ ಉಲ್ಲೇಖಿಸಿದ್ದಾರೆ.

ವಿಶೇಷ ಪೋಕ್ಸೋ (POCSO) ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಸಾಳುಂಖೆ ಅವರು ಈ ತೀರ್ಪನ್ನು ಪ್ರಕಟಿಸಿದ್ದಾರೆ. ಈ ಪ್ರಕರಣವನ್ನು “ಅಪರೂಪದಲ್ಲೇ ಅಪರೂಪದ ಪ್ರಕರಣ” ಎಂದು ವರ್ಗೀಕರಿಸಿದ ನ್ಯಾಯಾಲಯ, ಸಮಾಜದಲ್ಲಿ ಇಂತಹ ಘೋರ ಕೃತ್ಯಗಳಿಗೆ ಯಾವುದೇ ಕ್ಷಮೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಆರು ಜನ ಹಂತಕರಿಗೆ ಗಲ್ಲು ಶಿಕ್ಷೆ

ನ್ಯಾಯಾಲಯವು ಆರೋಪಿಗೆ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮರಣದಂಡನೆ ಹಾಗೂ ಭಾರಿ ದಂಡವನ್ನು ವಿಧಿಸಿದೆ. ತನಿಖೆಯ ಸಂದರ್ಭದಲ್ಲಿ ಪೊಲೀಸರು ಮಂಡಿಸಿದ ಬಲವಾದ ವೈಜ್ಞಾನಿಕ ಮತ್ತು ವೈದ್ಯಕೀಯ ಸಾಕ್ಷ್ಯಾಧಾರಗಳು ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

ಏನಿದು ಪ್ರಕರಣ?:

ಈ ಆಘಾತಕಾರಿ ಘಟನೆ 2026ರ ಮೇ 1ರಂದು ಪುಣೆ ಜಿಲ್ಲೆಯ ಭೋರ್ ತಹಸಿಲ್‌ನಲ್ಲಿರುವ ನಸ್ರಾಪುರ ಗ್ರಾಮದಲ್ಲಿ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, 3 ವರ್ಷದ ಮಗುವನ್ನು ಕಾಂಬ್ಳೆ ಆಮಿಷ ಒಡ್ಡಿ ಕರೆದೊಯ್ದು, ಕ್ರೂರವಾಗಿ ಲೈಂಗಿಕ ದೌರ್ಜನ್ಯ ನಡೆಸಿ ಕೊಂದಿದ್ದನು. ಆರೋಪಿಯು ಅಪ್ರಾಪ್ತ ಬಾಲಕಿಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ, ನಂತರ ಆಕೆಯ ಶವವನ್ನು ಹಸುಗಳ ಕೊಟ್ಟಿಗೆಯಲ್ಲಿ ಬಚ್ಚಿಟ್ಟಿದ್ದನು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!