AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolkata: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಮರಣದಂಡನೆ

ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ರಾಜೀವ್ ಘೋಷ್‌ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು ನ್ಯಾಯಾಲಯ ಘೋಷಿಸಿದೆ. ಮಗುವಿನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿದೆ.

Kolkata: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಮರಣದಂಡನೆ
ತೀರ್ಪು Image Credit source: The Amikus Qriae
ನಯನಾ ರಾಜೀವ್
|

Updated on: Feb 19, 2025 | 2:56 PM

Share

ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ರಾಜೀವ್ ಘೋಷ್‌ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು ನ್ಯಾಯಾಲಯ ಘೋಷಿಸಿದೆ. ಮಗುವಿನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿದೆ.

ಘಟನೆ ಬಗ್ಗೆ ವಿವರ ಈ ಭಯಾನಕ ಘಟನೆ 2024ರ ನವೆಂಬರ್​ನಲ್ಲಿ ನಡೆದಿದೆ. ಕೋಲ್ಕತ್ತಾದ ಬರ್ತೊಲ್ಲಾ ಪ್ರದೇಶದಲ್ಲಿ ನಡೆದಿದೆ. ಈ ದಂಪತಿಗೆ ಸರಿಯಾದ ಸೂರಿರಲಿಲ್ಲ, ಫುಟ್​ಬಾತ್​ನಲ್ಲೇ ಮಲಗಿಕೊಳ್ಳುತ್ತಿದ್ದರು. ಶಿಶು ಕಾಣೆಯಾಗಿತ್ತು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಕೆಲ ಗಂಟೆಗಳ ಬಳಿಕ ತೀವ್ರ ಗಾಯಗಳಿಂದ ಮಳಲುತ್ತಿದ್ದ ಮಗು ಫುಟ್​ಪಾತ್​ನಲ್ಲಿ ಮಲಗಿ ಅಳುತ್ತಿರುವುದು ಕಂಡುಬಂದಿತ್ತು. ವೈದ್ಯಕೀಯ ಪರೀಕ್ಷೆ ವೇಳೆ ಗುಪ್ತಾಂಗದಲ್ಲಿ ಗಾಯಗಳು ಕಂಡುಬಂದಿದ್ದವು. ಆಗ ಅತ್ಯಾಚಾರ ನಡೆದಿದೆ ಎಂಬುದು ದೃಢಪಟ್ಟಿತ್ತು.

ಮತ್ತಷ್ಟು ಓದಿ: ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ; ಗಲ್ಲು ಶಿಕ್ಷೆ ನೀಡಲು ಇದು ಅತ್ಯಪರೂಪದ ಕೇಸಲ್ಲ ಎಂದ ಕೋರ್ಟ್

ಘಟನೆ ಬಳಿಕ ಪೊಲೀಸರು ಪ್ರದೇಶದ ಸುತ್ತಮುತ್ತಲಿನ ದೃಶ್ಯಾವಳಿಗಳನ್ನು ಬಳಸಿಕೊಂಡು ಆರೋಪಿ ರಾಜೀವ್​ ಘೋಷ್​ನನ್ನು ಪತ್ತೆ ಮಾಡಿದ್ದರು. ಅಪರಾಧ ನಡೆದ ಕೆಲವು ದಿನಗಳ ನಂತರ, ಕಳೆದ ವರ್ಷ ಡಿಸೆಂಬರ್ 4 ರಂದು ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ನಲ್ಲಿ ಘೋಷ್‌ನನ್ನು ಬಂಧಿಸಲಾಯಿತು.

ತನಿಖೆಯನ್ನು ತ್ವರಿತವಾಗಿ ಮುಗಿಸಿ, 26 ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಯಿತು. ಪ್ರಕರಣವನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸಲಾಯಿತು, ಇದು ತ್ವರಿತ ವಿಚಾರಣೆಗೆ ಕಾರಣವಾಯಿತು. ಫೆಬ್ರವರಿ 17, 2025 ರಂದು, ನ್ಯಾಯಾಲಯವು ಘೋಷ್ ಅವರನ್ನು ಪೋಕ್ಸೋ ಕಾಯ್ದೆಯ ಸೆಕ್ಷನ್ 6 ಅಡಿಯಲ್ಲಿ ತಪ್ಪಿತಸ್ಥನೆಂದು ಘೋಷಿಸಿತು.

ಮಗುವಿನ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು, ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ