AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಹೋಟೆಲ್​ಗೆ ಪಾರ್ಟಿಗೆಂದು ಹೋದ ಮಹಿಳೆಯರು, ಮಂಚೂರಿಯಲ್ಲಿ ಇಲಿ ಮರಿ ಪತ್ತೆ

ಹೋಟೆಲ್​ವೊಂದಕ್ಕೆ ಪಾರ್ಟಿಗೆಂದು ಹೋದ ಮಹಿಳೆಯರಿಗೆ ಮಂಚೂರಿಯಲ್ಲಿ ಇಲಿ ಮರಿ ಪತ್ತೆಯಾಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದಂದು ಹಲವು ಸ್ನೇಹಿತೆಯರು ಸೇರಿ ಮುಂಬೈನ ಪರ್ಪಲ್ ಬಟರ್​ಫ್ಲೈ ಹೋಟೆಲ್​ಗೆ ಹೋಗಿದ್ದರು. ಆಹಾರದಲ್ಲಿ ಇಲಿ ಮರಿ ನೋಡಿ ಬೆಚ್ಚಿಬಿದ್ದಿದ್ದಾರೆ. ಮಹಿಳೆಯರು ತಕ್ಷಣ ಹೋಟೆಲ್ ವ್ಯವಸ್ಥಾಪಕರಿಗೆ ಈ ಬಗ್ಗೆ ದೂರು ನೀಡಿದರು. ಇದಾದ ನಂತರ, ಹೋಟೆಲ್ ಸಿಬ್ಬಂದಿ ತಮ್ಮ ತಪ್ಪನ್ನು ಬಹಳ ಸಮಯದವರೆಗೆ ಒಪ್ಪಿಕೊಳ್ಳಲಿಲ್ಲ, ಮಹಿಳೆಯರು ಪ್ರತಿಭಟನೆ ಮಾಡಿದರು.ಆಗ ಹೋಟೆಲ್ ಸಿಬ್ಬಂದಿ ತಮ್ಮ ತಪ್ಪನ್ನು ಒಪ್ಪಿಕೊಂಡರು.

ಮುಂಬೈ: ಹೋಟೆಲ್​ಗೆ ಪಾರ್ಟಿಗೆಂದು ಹೋದ ಮಹಿಳೆಯರು, ಮಂಚೂರಿಯಲ್ಲಿ ಇಲಿ ಮರಿ ಪತ್ತೆ
ಇಲಿImage Credit source: India TV
ನಯನಾ ರಾಜೀವ್
|

Updated on: Mar 09, 2025 | 3:19 PM

Share

ಮುಂಬೈ, ಮಾರ್ಚ್​ 09: ಹೋಟೆಲ್​ವೊಂದಕ್ಕೆ ಪಾರ್ಟಿಗೆಂದು ಹೋದ ಮಹಿಳೆಯರಿಗೆ ಮಂಚೂರಿಯಲ್ಲಿ ಇಲಿ ಮರಿ ಪತ್ತೆಯಾಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದಂದು ಹಲವು ಸ್ನೇಹಿತೆಯರು ಸೇರಿ ಮುಂಬೈನ ಪರ್ಪಲ್ ಬಟರ್​ಫ್ಲೈ ಹೋಟೆಲ್​ಗೆ ಹೋಗಿದ್ದರು. ಆಹಾರದಲ್ಲಿ ಇಲಿ ಮರಿ ನೋಡಿ ಬೆಚ್ಚಿಬಿದ್ದಿದ್ದಾರೆ.

ಮಹಿಳೆಯರು ತಕ್ಷಣ ಹೋಟೆಲ್ ವ್ಯವಸ್ಥಾಪಕರಿಗೆ ಈ ಬಗ್ಗೆ ದೂರು ನೀಡಿದರು. ಇದಾದ ನಂತರ, ಹೋಟೆಲ್ ಸಿಬ್ಬಂದಿ ತಮ್ಮ ತಪ್ಪನ್ನು ಬಹಳ ಸಮಯದವರೆಗೆ ಒಪ್ಪಿಕೊಳ್ಳಲಿಲ್ಲ, ಮಹಿಳೆಯರು ಪ್ರತಿಭಟಿಸಿದ ಬಳಿಕ ಹೋಟೆಲ್ ಸಿಬ್ಬಂದಿ ತಮ್ಮ ತಪ್ಪನ್ನು ಒಪ್ಪಿಕೊಂಡರು.

ಮಹಿಳೆಯರು ರಬಾಲೆ ಪೊಲೀಸ್ ಠಾಣೆಗೆ ಹೋಗಿ ಹೋಟೆಲ್ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿದರು. ಮಹಿಳೆಯರು ತೋರಿಸಿದ ಛಾಯಾಚಿತ್ರಗಳ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾದ ನಂತರ, ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಹೋಟೆಲ್ ಅನ್ನು ಪರಿಶೀಲಿಸಿತು.

ಹೋಟೆಲ್ ಮಾಲೀಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಗಳಿಗೆ ದೂರು ಸಲ್ಲಿಸುವುದಾಗಿ ಮಹಿಳೆಯರು ತಿಳಿಸಿದ್ದಾರೆ. ಇಲ್ಲದಿದ್ದರೆ ಈ ರೀತಿಯ ಜನರು ನಿರ್ಲಕ್ಷ್ಯದಿಂದ ಕೆಲಸ ಮಾಡುವುದನ್ನು ಮುಂದುವರಿಸುತ್ತಾರೆ ಮತ್ತು ಜನರ ಆರೋಗ್ಯದ ಜೊತೆ ಆಟವಾಡುತ್ತಲೇ ಇರುತ್ತಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ವೈದ್ಯರು, ರೋಗಿಗಳಿಗಿಂತ ಈ ಆಸ್ಪತ್ರೆಯಲ್ಲಿ ಇಲಿಗಳ ಸಂಖ್ಯೆಯೇ ಹೆಚ್ಚು

ದೂರುದಾರರಾದ ಜ್ಯೋತಿ ಕೊಂಡೆ ಅವರು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲು ಇತರ ಮಹಿಳೆಯರೊಂದಿಗೆ ಹೋಟೆಲ್​ಗೆ ಹೋಗಿದ್ದರು. ಎಲ್ಲಾ ಮಹಿಳೆಯರು ಹೋಟೆಲ್‌ಗೆ ಹೋಗಿ ಅಲ್ಲಿ ವಿವಿಧ ರೀತಿಯ ಭಕ್ಷ್ಯಗಳನ್ನು ಆರ್ಡರ್ ಮಾಡಿದರು. ಮಂಚೂರಿಯನ್ ತಿನ್ನುತ್ತಿರುವಾಗ ಆಹಾರದಲ್ಲಿ ಮರಿ ಇಲಿಯನ್ನು ನೋಡಿದ್ದಾರೆ.

ಈ ಬಗ್ಗೆ ಅವರು ವ್ಯವಸ್ಥಾಪಕರಿಗೆ ದೂರು ನೀಡಿದಾಗ, ಹೋಟೆಲ್ ಸಿಬ್ಬಂದಿ ಪರಸ್ಪರ ದೂಷಿಸಿಕೊಳ್ಳುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಇತರ ಭಕ್ಷ್ಯಗಳನ್ನು ಸಹ ಬಡಿಸಲು ಪ್ರಾರಂಭಿಸಿದನು, ಆದರೆ ಮಹಿಳೆಯರು ಅವನ ವರ್ತನೆಯಿಂದ ಕೋಪಗೊಂಡರು. ಅವರು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?