AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಬೈಕ್​ನ ಪೆಟ್ರೋಲ್​ ಟ್ಯಾಂಕ್​ಗೆ ಸಕ್ಕರೆ ಹಾಕಿದ್ದ ರತನ್ ಟಾಟಾ

ಅಂದು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಇನ್ನೂ ಚಿಕ್ಕವರಾಗಿದ್ದ ರತನ್ ಟಾಟಾ ತಮ್ಮ ಮೌನ ಪ್ರತಿಭಟನೆಯನ್ನು ಹೇಗೆ ಮಾಡಿದ್ದರು ಎನ್ನುವ ಮಾಹಿತಿ ಇಲ್ಲಿದೆ.

ಪೊಲೀಸ್ ಬೈಕ್​ನ ಪೆಟ್ರೋಲ್​ ಟ್ಯಾಂಕ್​ಗೆ ಸಕ್ಕರೆ ಹಾಕಿದ್ದ ರತನ್ ಟಾಟಾ
ರತನ್ ಟಾಟಾ
ನಯನಾ ರಾಜೀವ್
|

Updated on: Nov 07, 2024 | 9:43 AM

Share

ಖ್ಯಾತ ಉದ್ಯಮಿ ರತನ್ ಟಾಟಾ ನಿಧನದ ನಂತರ ಅವರ ಬಗೆಗಿನ ಸಾಕಷ್ಟು ಕುತೂಹಲಕರ ಸಂಗತಿಗಳು ಹೊರಬರುತ್ತಿವೆ. ರತನ್ ಟಾಟಾ ಗ್ರೂಪ್ಸ್​ನ ಎಮೆರಿಟಸ್​ನ ಅಧ್ಯಕ್ಷರಾಗಿದ್ದರು. ಇದು ಜಾಗತಿಕ ಬಹುರಾಷ್ಟ್ರೀಯ ನಿಗಮವಾಗಿ ರೂಪಾಂತರಗೊಂಡಿತು. ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಿಗೆ ಕೊಡುಗೆ ನೀಡಿದ ದೂರದೃಷ್ಟಿಯ ನಾಯಕರಾಗಿದ್ದರು. ರತನ್ ಟಾಟಾ ಅವರ ನೈತಿಕ ತತ್ವಗಳು, ಲೋಕೋಪಕಾರಕ್ಕೆ ಹೆಸರುವಾಸಿಯಾಗಿದ್ದರು.

ರತನ್ ಟಾಟಾ ಪೊಲೀಸ್ ಬೈಕ್‌ಗೆ ಸಕ್ಕರೆ ಹಾಕಿದ್ದೇಕೆ?

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರತನ್ ಟಾಟಾ ಅವರ ಕೊಡುಗೆಯೂ ಇದೆ ಎಂದರೆ ತಪ್ಪಾಗಲಾರದು. ಟಾಟಾ ಅವರ ಮನೆ ಟಾಟಾ ಅವರ ಪ್ರಸಿದ್ಧ ಕೇಂದ್ರ ಕಚೇರಿ ಬಾಂಬೆ ಹೌಸ್ ಮುಂಬೈನ ಆಜಾದ್ ಮೈದಾನದ ಬಳಿ ಇತ್ತು. ಸ್ವಾತಂತ್ರ್ಯ ರ್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಬ್ರಿಟಿಷರು, ಪೊಲೀಸರ ವಾಹನಗಳ ಪೆಟ್ರೋಲ್​ ಟ್ಯಾಂಕ್​ಗೆ ಸಕ್ಕರೆ ಹಾಕಿದ್ದರು, ಇದು ಅವರ ಮೌನ ಪ್ರತಿಭಟನೆಯಾಗಿತ್ತು. ಬೈಕ್​ ಇಲ್ಲದ ಕಾರಣ ಪ್ರತಿಭಟಿಸುವಾಗ, ಪೊಲೀಸರು ವೇಗವಾಗಿ ಇವರನ್ನು ಹಿಡಿಯಲು ಸಾಧ್ಯವಾಗುತ್ತಿರಲಿಲ್ಲ,

ಟಾಟಾ ಕುಟುಂಬವು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಬೆಂಬಲಿಸಿತ್ತು, ಅವರು ಮಹಾತ್ಮ ಗಾಂಧಿ ಮತ್ತು ಗೋಪಾಲ ಕೃಷ್ಣ ಗೋಖಲೆಯಂತಹ ನಾಯಕರಿಗೆ ಆರ್ಥಿಕ ಸಹಾಯವನ್ನೂ ನೀಡಿದ್ದರು. ಟಾಟಾ ಗ್ರೂಪ್ ಗಾಂಧಿಯವರ ಯೋಜನೆಗಳಿಗೆ 125,000 ರೂ. ಕ್ಕಿಂತ ಹೆಚ್ಚು ಕೊಡುಗೆ ನೀಡಿತು, ಇದು ಫೀನಿಕ್ಸ್ ಸೆಟ್ಲ್‌ಮೆಂಟ್, ಟಾಲ್‌ಸ್ಟಾಯ್ ಫಾರ್ಮ್ ಮತ್ತು ಇಂಡಿಯನ್ ಒಪಿನಿಯನ್ ಪತ್ರಿಕೆಯನ್ನು ಉಳಿಸಿಕೊಳ್ಳಲು ಅತ್ಯಗತ್ಯವಾಗಿತ್ತು.

ಮತ್ತಷ್ಟು ಓದಿ: ರತನ್ ಟಾಟಾ ಹಳೆಯ ಲವ್ ಸ್ಟೋರಿ; ಅಡ್ಡಿಯಾಗಿತ್ತು ಚೀನಾ ಗೋಡೆ; ಟಾಟಾ ಕೈತಪ್ಪಿದ್ದಕ್ಕೆ ಪರಿತಪಿಸಿದ್ದ ಅಮೆರಿಕನ್ ಚೆಲುವೆ

ಭಾರತವು ತನ್ನ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದಾಗ ರತನ್ ಟಾಟಾ ತುಂಬಾ ಚಿಕ್ಕವನಾಗಿದ್ದರು, ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಮೌನ ಪ್ರತಿಭಟನೆಯನ್ನು ಮಾಡಿದ್ದರು.

ಜೆಆರ್​ಡಿ ಟಾಟಾ ಅವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು. ಸ್ವತಂತ್ರ ಪಕ್ಷವನ್ನು ಬೆಂಬಲಿಸುವಂತೆ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ಪತ್ರ ಬರೆದರು.

ಸ್ವಾತಂತ್ರ್ಯ ಚಳವಳಿಗೆ ಟಾಟಾ ಅವರ ಬದ್ಧತೆಯು ಸಾಮಾಜಿಕ ನ್ಯಾಯ ಮತ್ತು ರಾಷ್ಟ್ರೀಯ ಪ್ರಗತಿಗೆ ಕುಟುಂಬದ ಸಮರ್ಪಣೆಯನ್ನು ತೋರಿಸುತ್ತದೆ, ರತನ್ ಟಾಟಾ ಅವರು ತಮ್ಮ ಜೀವಿತಾವಧಿಯಲ್ಲಿ ಇದೇ ಪರಂಪರೆಯನ್ನು ಮುಂದುವರೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ