AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಬೈಕ್​ನ ಪೆಟ್ರೋಲ್​ ಟ್ಯಾಂಕ್​ಗೆ ಸಕ್ಕರೆ ಹಾಕಿದ್ದ ರತನ್ ಟಾಟಾ

ಅಂದು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಇನ್ನೂ ಚಿಕ್ಕವರಾಗಿದ್ದ ರತನ್ ಟಾಟಾ ತಮ್ಮ ಮೌನ ಪ್ರತಿಭಟನೆಯನ್ನು ಹೇಗೆ ಮಾಡಿದ್ದರು ಎನ್ನುವ ಮಾಹಿತಿ ಇಲ್ಲಿದೆ.

ಪೊಲೀಸ್ ಬೈಕ್​ನ ಪೆಟ್ರೋಲ್​ ಟ್ಯಾಂಕ್​ಗೆ ಸಕ್ಕರೆ ಹಾಕಿದ್ದ ರತನ್ ಟಾಟಾ
ರತನ್ ಟಾಟಾ
ನಯನಾ ರಾಜೀವ್
|

Updated on: Nov 07, 2024 | 9:43 AM

Share

ಖ್ಯಾತ ಉದ್ಯಮಿ ರತನ್ ಟಾಟಾ ನಿಧನದ ನಂತರ ಅವರ ಬಗೆಗಿನ ಸಾಕಷ್ಟು ಕುತೂಹಲಕರ ಸಂಗತಿಗಳು ಹೊರಬರುತ್ತಿವೆ. ರತನ್ ಟಾಟಾ ಗ್ರೂಪ್ಸ್​ನ ಎಮೆರಿಟಸ್​ನ ಅಧ್ಯಕ್ಷರಾಗಿದ್ದರು. ಇದು ಜಾಗತಿಕ ಬಹುರಾಷ್ಟ್ರೀಯ ನಿಗಮವಾಗಿ ರೂಪಾಂತರಗೊಂಡಿತು. ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಿಗೆ ಕೊಡುಗೆ ನೀಡಿದ ದೂರದೃಷ್ಟಿಯ ನಾಯಕರಾಗಿದ್ದರು. ರತನ್ ಟಾಟಾ ಅವರ ನೈತಿಕ ತತ್ವಗಳು, ಲೋಕೋಪಕಾರಕ್ಕೆ ಹೆಸರುವಾಸಿಯಾಗಿದ್ದರು.

ರತನ್ ಟಾಟಾ ಪೊಲೀಸ್ ಬೈಕ್‌ಗೆ ಸಕ್ಕರೆ ಹಾಕಿದ್ದೇಕೆ?

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರತನ್ ಟಾಟಾ ಅವರ ಕೊಡುಗೆಯೂ ಇದೆ ಎಂದರೆ ತಪ್ಪಾಗಲಾರದು. ಟಾಟಾ ಅವರ ಮನೆ ಟಾಟಾ ಅವರ ಪ್ರಸಿದ್ಧ ಕೇಂದ್ರ ಕಚೇರಿ ಬಾಂಬೆ ಹೌಸ್ ಮುಂಬೈನ ಆಜಾದ್ ಮೈದಾನದ ಬಳಿ ಇತ್ತು. ಸ್ವಾತಂತ್ರ್ಯ ರ್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಬ್ರಿಟಿಷರು, ಪೊಲೀಸರ ವಾಹನಗಳ ಪೆಟ್ರೋಲ್​ ಟ್ಯಾಂಕ್​ಗೆ ಸಕ್ಕರೆ ಹಾಕಿದ್ದರು, ಇದು ಅವರ ಮೌನ ಪ್ರತಿಭಟನೆಯಾಗಿತ್ತು. ಬೈಕ್​ ಇಲ್ಲದ ಕಾರಣ ಪ್ರತಿಭಟಿಸುವಾಗ, ಪೊಲೀಸರು ವೇಗವಾಗಿ ಇವರನ್ನು ಹಿಡಿಯಲು ಸಾಧ್ಯವಾಗುತ್ತಿರಲಿಲ್ಲ,

ಟಾಟಾ ಕುಟುಂಬವು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಬೆಂಬಲಿಸಿತ್ತು, ಅವರು ಮಹಾತ್ಮ ಗಾಂಧಿ ಮತ್ತು ಗೋಪಾಲ ಕೃಷ್ಣ ಗೋಖಲೆಯಂತಹ ನಾಯಕರಿಗೆ ಆರ್ಥಿಕ ಸಹಾಯವನ್ನೂ ನೀಡಿದ್ದರು. ಟಾಟಾ ಗ್ರೂಪ್ ಗಾಂಧಿಯವರ ಯೋಜನೆಗಳಿಗೆ 125,000 ರೂ. ಕ್ಕಿಂತ ಹೆಚ್ಚು ಕೊಡುಗೆ ನೀಡಿತು, ಇದು ಫೀನಿಕ್ಸ್ ಸೆಟ್ಲ್‌ಮೆಂಟ್, ಟಾಲ್‌ಸ್ಟಾಯ್ ಫಾರ್ಮ್ ಮತ್ತು ಇಂಡಿಯನ್ ಒಪಿನಿಯನ್ ಪತ್ರಿಕೆಯನ್ನು ಉಳಿಸಿಕೊಳ್ಳಲು ಅತ್ಯಗತ್ಯವಾಗಿತ್ತು.

ಮತ್ತಷ್ಟು ಓದಿ: ರತನ್ ಟಾಟಾ ಹಳೆಯ ಲವ್ ಸ್ಟೋರಿ; ಅಡ್ಡಿಯಾಗಿತ್ತು ಚೀನಾ ಗೋಡೆ; ಟಾಟಾ ಕೈತಪ್ಪಿದ್ದಕ್ಕೆ ಪರಿತಪಿಸಿದ್ದ ಅಮೆರಿಕನ್ ಚೆಲುವೆ

ಭಾರತವು ತನ್ನ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದಾಗ ರತನ್ ಟಾಟಾ ತುಂಬಾ ಚಿಕ್ಕವನಾಗಿದ್ದರು, ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಮೌನ ಪ್ರತಿಭಟನೆಯನ್ನು ಮಾಡಿದ್ದರು.

ಜೆಆರ್​ಡಿ ಟಾಟಾ ಅವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು. ಸ್ವತಂತ್ರ ಪಕ್ಷವನ್ನು ಬೆಂಬಲಿಸುವಂತೆ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ಪತ್ರ ಬರೆದರು.

ಸ್ವಾತಂತ್ರ್ಯ ಚಳವಳಿಗೆ ಟಾಟಾ ಅವರ ಬದ್ಧತೆಯು ಸಾಮಾಜಿಕ ನ್ಯಾಯ ಮತ್ತು ರಾಷ್ಟ್ರೀಯ ಪ್ರಗತಿಗೆ ಕುಟುಂಬದ ಸಮರ್ಪಣೆಯನ್ನು ತೋರಿಸುತ್ತದೆ, ರತನ್ ಟಾಟಾ ಅವರು ತಮ್ಮ ಜೀವಿತಾವಧಿಯಲ್ಲಿ ಇದೇ ಪರಂಪರೆಯನ್ನು ಮುಂದುವರೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ