ನೀವಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳುವುದು ಕಷ್ಟ, ರತನ್ ಟಾಟಾ ನಿಧನ, ಮಾಜಿ ಪ್ರೇಯಸಿ ಸಿಮಿ ಭಾವುಕ ಪೋಸ್ಟ್​

ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ನಿಧನದ ಹಿನ್ನೆಲೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್​ ಭಾವುಕ ಪೋಸ್ಟ್​ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ನೀವಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳುವುದು ಕಷ್ಟ, ರತನ್ ಟಾಟಾ ನಿಧನ, ಮಾಜಿ ಪ್ರೇಯಸಿ ಸಿಮಿ ಭಾವುಕ ಪೋಸ್ಟ್​
ಸಿಮಿ
Follow us
|

Updated on: Oct 10, 2024 | 10:27 AM

ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ನಿಧನದ ಹಿನ್ನೆಲೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್​ ಭಾವುಕ ಪೋಸ್ಟ್​ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ರತನ್ ಟಾಟಾ ಅವರ ಹಠಾತ್ ನಿಧನದ ಸುದ್ದಿ ಕೇಳಿ ಎಲ್ಲರೂ ತೀವ್ರ ದುಃಖಿತರಾಗಿದ್ದಾರೆ. ವ್ಯಾಪಾರ ಜಗತ್ತಿನೊಂದಿಗೆ ಸಂಬಂಧ ಹೊಂದಿರುವ ಪ್ರಸಿದ್ಧ ವ್ಯಕ್ತಿಗಳಿಂದ ಹಿಡಿದು ರಾಜಕೀಯ ಮತ್ತು ಬಾಲಿವುಡ್‌ ನಟರವರೆಗೂ ಎಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ.

ರತನ್ ಟಾಟಾ ಅವರ ನಿಧನದಿಂದ ಬಾಲಿವುಡ್ ಹಿರಿಯ ನಟಿ ಸಿಮಿ ಗರೆ​ವಾಲ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಸಿಮಿ ಅವರು ರತನ್ ಟಾಟಾ ಅವರ ನಿಧನದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಬರೆಯುವ ಮೂಲಕ ಅವರಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.

ಮತ್ತಷ್ಟು ಓದಿ: Ratan Tata: ಪೋಷಕರ ವಿಚ್ಛೇದನ, ತಂದೆಯೊಂದಿಗೆ ಭಿನ್ನಾಭಿಪ್ರಾಯ, ಅಂದು ರತನ್ ಪಾಲಿಗೆ ಇದ್ದಿದ್ದು ಅಜ್ಜಿಯೊಬ್ಬರೇ

ಫೋಟೊವೊಂದನ್ನು ಅವರು ಹಂಚಿಕೊಂಡಿದ್ದಾರೆ, ನೀವು ಹೋಗಿದ್ದೀರೆಂದು ಎಲ್ಲರೂ ಹೇಳುತ್ತಿದ್ದಾರೆ, ನೀವು ನಮ್ಮ ಜತೆ ಇಲ್ಲ ಎನ್ನುವ ಸತ್ಯವನ್ನು ಅರಗಿಸಿಕೊಳ್ಳುವುದು ತುಂಬಾ ಕಷ್ಟ, ಹೋಗಿಬನ್ನಿ ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ 2011 ರಲ್ಲಿ ನೀಡಿದ ಸಂದರ್ಶನದಲ್ಲಿ ಖ್ಯಾತ ಹಿಂದಿ ಸಿನಿಮಾ ನಟಿ ಸಿಮಿ ಸ್ವತಃ ಬಹಿರಂಗಪಡಿಸಿದ್ದರು.

ಸಿಮಿ ಅವರು ಪರಿಪೂರ್ಣ ವ್ಯಕ್ತಿ, ಹಾಸ್ಯ ಪ್ರಜ್ಞೆ ಕೂಡ ಚೆನ್ನಾಗಿತ್ತು, ಸಭ್ಯರು, ಎಂದೂ ಶ್ರೀಮಂತಿಕೆ ತೋರ್ಪಡಿಸಿರಲಿಲ್ಲ ಎಂದು ಹೇಳಿದ್ದರು. ಇಷ್ಟು ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಪ್ರೀತಿ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು, ಸಾಕಷ್ಟು ವರ್ಷಗಳ ಕಾಲ ಸಿಮಿ ಹಾಗೂ ರತನ್ ಒಳ್ಳೆಯ ಸ್ನೇಹಿತರಾಗಿದ್ದರು.

ಸಂದರ್ಶನವೊಂದರಲ್ಲಿ ಸ್ವತಃ ರತನ್ ಟಾಟಾ ಅವರು ನಾಲ್ಕು ಬಾರಿ ಪ್ರೀತಿಯಲ್ಲಿ ಬಿದ್ದಿದ್ದರೂ ಅದು ಮದುವೆಯ ಹಂತವನ್ನು ತಲುಪಲಿಲ್ಲ ಎಂದು ಬಹಿರಂಗಪಡಿಸಿದ್ದರು.

1960 ರ ದಶಕದಲ್ಲಿ ಅಮೆರಿಕದಲ್ಲಿ ಕೆಲಸ ಮಾಡುವಾಗ ರತನ್ ಟಾಟಾ ಬೇರೊಬ್ಬ ಹುಡುಗಿಯನ್ನು ಇಷ್ಟಪಟ್ಟಿದ್ದರು. 1962ರ ಭಾರತ-ಚೀನಾ ಯುದ್ಧ ಸಮಯದಲ್ಲಿ ಅದು ಕೊನೆಗೊಂಡಿತ್ತು. ಏಕೆಂದರೆ ಯುದ್ಧದ ಸಮಯದಲ್ಲಿ ಆಕೆಗೆ ಅಮೆರಿಕವನ್ನು ಬಿಟ್ಟು ಭಾರತಕ್ಕೆ ಹೋಗಲು ಪೋಷಕರು ಅನುಮತಿ ನೀಡಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?