AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್ ಜಾಮೀನು

Narendra Dabholkar Murder Case: 2013ರ ಆಗಸ್ಟ್‌ 20ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್‌ ಹತ್ಯೆಯಾಗಿತ್ತು. ಇತರ ಇಬ್ಬರು ಆರೋಪಿಗಳಾದ ಸಚಿನ್ ಅಧೂರೆ, ಶರದ್‌ ಕಲಸ್ಕರ್‌ರಿಗೆ ನೆರವಾಗಿದ್ದ ಆರೋಪದ ಅಡಿಯಲ್ಲಿ ಭಾವೆಯನ್ನು ಪೊಲೀಸರು ಬಂಧಿಸಿದ್ದರು.

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್ ಜಾಮೀನು
ನರೇಂದ್ರ ದಾಭೋಲ್ಕರ್‌
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 06, 2021 | 6:46 PM

Share

ಮುಂಬೈ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್‌ ಗುರುವಾರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಎಸ್‌.ಎಸ್‌ ಶಿಂಧೆ ಮತ್ತು ಮನೀಶ್‌ ಪಿತಾಳೆ ಅವರನ್ನು ಒಳಗೊಂಡ ವಿಭಾಗೀಯ ಪೀಠವು ₹1 ಲಕ್ಷದ ನಗದು ಶ್ಯೂರಿಟಿ ಬರೆಸಿಕೊಂಡು ಭಾವೆಗೆ ಜಾಮೀನು ಅನುಮತಿ ನೀಡಿದ್ದಾರೆ. ಭಾವೆ ಸದ್ಯ ಯೆರವಡಾ ಸೆಂಟ್ರಲ್ ಜೈಲಿನಲ್ಲಿದ್ದು , ಶ್ಯೂರಿಟಿ ನೀಡಿದ ನಂತರವೇ ಬಿಡುಗಡೆ ಮಾಡಲಾಗುವುದು. 2013ರ ಆಗಸ್ಟ್‌ 20ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್‌ ಹತ್ಯೆಯಾಗಿತ್ತು. ಇತರ ಇಬ್ಬರು ಆರೋಪಿಗಳಾದ ಸಚಿನ್ ಅಧೂರೆ, ಶರದ್‌ ಕಲಸ್ಕರ್‌ರಿಗೆ ನೆರವಾಗಿದ್ದ ಆರೋಪದ ಅಡಿಯಲ್ಲಿ ಭಾವೆಯನ್ನು ಪೊಲೀಸರು ಬಂಧಿಸಿದ್ದರು.

ಜಾಮೀನು ಪಡೆದ ನಂತರ ಭಾವೆ ಮೊದಲ ತಿಂಗಳಿನಲ್ಲಿ ಪ್ರತಿ ದಿನ ಮತ್ತು ಎರಡನೇ ತಿಂಗಳಿನಲ್ಲಿ ಪ್ರತಿ ಎರಡು ದಿನಗಳಿಗೊಮ್ಮೆ ಪುಣೆಯ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ಹಾಜರಾಗುವಂತೆ ನ್ಯಾಯಪೀಠ ಸೂಚಿಸಿದೆ. ಅದೇ ವೇಳೆ ದಾಭೋಲ್ಕರ್‌ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮತ್ತು ಯಾವುದೇ ಪುರಾವೆಗಳು ನಾಶ ಮಾಡದಂತೆ ನಿರ್ದೇಶನ ನೀಡಿದೆ.

ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದ ನಂತರ ಭಾವೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ಆದೇಶವನ್ನು ತಡೆಹಿಡಿಯಬೇಕೆಂದು ಕೋರಿ ಸಿಬಿಐ ಕೋರಿಕೆಯನ್ನು ಒಪ್ಪಿಕೊಳ್ಳಲು ನ್ಯಾಯಾಲಯ ನಿರಾಕರಿಸಿದೆ.

ಸಿಬಿಐ ಪ್ರಕಾರ, ಬಂಧಿತ ಆರೋಪಿ ಸಚಿನ್ ಅಧೂರೆ ಮತ್ತು ಶರದ್ ಕಲಾಸ್ಕರ್ 2013 ರ ಆಗಸ್ಟ್ 20 ರಂದು ಪುಣೆಯ ಓಂಕಾರೇಶ್ವರ ದೇವಸ್ಥಾನದ ಬಳಿಯ ವಿ ಆರ್ ಶಿಂಧೆ ಸೇತುವೆಯ ಮೇಲೆ ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದಾಗ ದಾಬೋಲ್ಕರ್ ಮೇಲೆ ಗುಂಡು ಹಾರಿಸಿದ್ದರು.

ಇದನ್ನೂ ಓದಿ: ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್

(Rationalist Narendra Dabholkar murder case Bombay HC grants bail to Vikram Bhave)

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!