AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯರು ಅಮಾನತು; ಇಲಿಗಳಿಂದಾಗಿ ಹೋಯ್ತು ಕೆಲಸ

ಮಹಾತ್ಮ ಗಾಂಧಿ ಮೆಮೋರಿಯಲ್​ ಆಸ್ಪತ್ರೆ  ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು. ಇಲ್ಲೀಗ ರೋಗಿಗೆ ಇಲಿ ಕಡಿದಿದ್ದು ಟೀಕೆಗೆ ಗುರಿಯಾಗಿದ್ದಲ್ಲದೆ, ದೊಡ್ಡಮಟ್ಟದಲ್ಲಿ ಸುದ್ದಿಯಾಗಿದೆ.

ತೆಲಂಗಾಣ ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯರು ಅಮಾನತು; ಇಲಿಗಳಿಂದಾಗಿ ಹೋಯ್ತು ಕೆಲಸ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 01, 2022 | 2:43 PM

Share

ಇಲಿ ತಂದೊಡ್ಡುವ ಸಂಕಷ್ಟಗಳನ್ನು ಅದನ್ನು ಬಲ್ಲವರೇ ಬಲ್ಲರು. ಇಂಥ ಇಲಿಯ ಕಾರಣಕ್ಕೀಗ ಇಬ್ಬರು ವೈದ್ಯರ ಕೆಲಸ ಹೋಗಿದೆ. ತೆಲಂಗಾಣದವ ವಾರಂಗಲ್​​ನ ಮಹಾತ್ಮ ಗಾಂಧಿ ಮೆಮೋರಿಯಲ್​ ಆಸ್ಪತ್ರೆಯ ರೆಸ್ಪಿರೇಟರಿ ಇಂಟರ್​ಮೀಡಿಯೇಟ್​ ಕೇರ್​  ಘಟಕದಲ್ಲಿ ದಾಖಲಾಗಿದ್ದ ರೋಗಿಯೊಬ್ಬರಿಗೆ ಇಲಿ ಕಚ್ಚಿದ ಪರಿಣಾಮ, ಅಲ್ಲಿದ್ದ ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ.  ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಪರಿಗಣಿಸಲಾಗಿದೆ.

ರೋಗಿಯ ಹೆಸರು ಶ್ರೀನಿವಾಸ್​ ಎಂದಾಗಿದ್ದು 38 ವರ್ಷ. ಶ್ವಾಸಕೋಶ ಮತ್ತು ಲಿವರ್​ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಮಾರ್ಚ್​ 26ರಂದು ರೆಸ್ಪಿರೇಟರಿ ಇಂಟರ್​ಮೀಡಿಯೇಟ್​ ಕೇರ್​ಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅಷ್ಟೊತ್ತಿಗೆ ಶ್ರೀನಿವಾಸ್​ ಕಾಲು, ಕೈಗಳ ಮೇಲೆಲ್ಲ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಈ ಗಾಯವಾಗಿದ್ದು ಇಲಿಗಳಿಂದ. ಈ ಘಟಕದಲ್ಲಿ ಇಲಿಗಳಿದ್ದು, ಅವರು ಶ್ರೀನಿವಾಸ್​ಗೆ ಕಚ್ಚುತ್ತಿವೆ ಎಂದು ಅವರನ್ನು ಆರೈಕೆ ಮಾಡಲು ಇದ್ದವರು ಮತ್ತು ಕುಟುಂಬದ ಇನ್ನಿತರ ಸದಸ್ಯರು ಆರೋಪಿಸಿದ್ದರು.

ಮಹಾತ್ಮ ಗಾಂಧಿ ಮೆಮೋರಿಯಲ್​ ಆಸ್ಪತ್ರೆ  ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು. ಇಲ್ಲೀಗ ರೋಗಿಗೆ ಇಲಿ ಕಡಿದಿದ್ದು ಟೀಕೆಗೆ ಗುರಿಯಾಗಿದ್ದಲ್ಲದೆ, ದೊಡ್ಡಮಟ್ಟದಲ್ಲಿ ಸುದ್ದಿಯಾಗಿದೆ. ಆಸ್ಪತ್ರೆಯ ವ್ಯವಸ್ಥಾಪಕ ಬಿ. ಶ್ರೀನಿವಾಸ್​ ರಾವ್​ ಅವರನ್ನು ವರ್ಗಾವಣೆ ಮಾಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ, ರೆಸ್ಪಿರೇಟರಿ ಇಂಟರ್​ಮೀಡಿಯೇಟ್​ ಕೇರ್​ನಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಆದರೆ ಇಲ್ಲೊಂದು ಪ್ರಮುಖ ವಿಷಯವೆಂದರೆ, ಕಡಿದಿದ್ದು ಇಲಿಯೇ ಎಂಬುದನ್ನು ಶ್ರೀನಿವಾಸ್​ ಕುಟುಂಬದವರಾಗಲೀ, ಅವರೊಂದಿಗೆ ಇದ್ದವರಾಗಲಿ ನೋಡಲಿಲ್ಲ. ಗಾಯದ ಸ್ವರೂಪ ನೋಡಿ, ಅದು ಇಲಿಯೇ ಎಂದು ಶಂಕಿಸಲಾಗಿದೆ ಎಂಬುದನ್ನು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಇನ್ನು ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಉಳಿದುಕೊಳ್ಳಲು ಬಂದವರು ಹೆಚ್ಚುಳಿದ ತಿಂಡಿಗಳನ್ನು ಹೊರಗಿನ ಆವರಣದಲ್ಲಿ ಬಿಸಾಕುವುದರಿಂದ ಅಲ್ಲಿ ಇಲಿಗಳು ಇದ್ದಿದ್ದೂ ಹೌದು. ರೋಗಿಗ ಮೈಮೇಲೆ ಆದ ಗಾಯಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಈ ಮಧ್ಯೆ ರಾಜ್ಯ ಆರೋಗ್ಯ ಇಲಾಖೆ ಸಚಿವ ಟಿ. ಹರೀಶ್​ ರಾವ್​ ಕೂಡ ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. ರೋಗಿಗಳಿಗೆ ಚಿಕಿತ್ಸೆ ನೀಡುವ ಜತೆಗೆ, ಅವರ ಬಗ್ಗೆ ಕಾಳಜಿಯನ್ನೂ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಜಾನ್ವಿ ಕಪೂರ್ ಮೈಮಾಟಕ್ಕೆ ಸರಿಸಾಟಿ ಯಾರು?

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’