AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉತ್ತರಪ್ರದೇಶ ರಾಜಕೀಯ ಪಕ್ಷಗಳ ನಡುವಿನ ಕಚ್ಚಾಟವೂ ಈಗ ಕಿವಿಗೆ ಇಂಪು; ಒಂದರ ಬೆನ್ನಿಗೆ ಇನ್ನೊಂದು ಹಾಡುಗಳು ವೈರಲ್​

UP Assembly Election 2022: ರವಿ ಕಿಶನ್​ ತಮ್ಮ 5 ನಿಮಿಷಗಳ ಹಾಡಿನ ಮೂಲಕ ಹೊಗಳಿದ್ದಾರೆ. ಬಿಜೆಪಿಯನ್ನು ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ತರುವಂತೆ ಈ ಹಾಡಿನ ಮೂಲಕ ಮನವಿ ಮಾಡಿದ್ದಾರೆ. 

Video: ಉತ್ತರಪ್ರದೇಶ ರಾಜಕೀಯ ಪಕ್ಷಗಳ ನಡುವಿನ ಕಚ್ಚಾಟವೂ ಈಗ ಕಿವಿಗೆ ಇಂಪು; ಒಂದರ ಬೆನ್ನಿಗೆ ಇನ್ನೊಂದು ಹಾಡುಗಳು ವೈರಲ್​
ರವಿ ಕಿಶನ್​ ಮತ್ತು ನೇಹಾ ರಾಥೋಡ್​
TV9 Web
| Edited By: |

Updated on: Jan 18, 2022 | 9:14 AM

Share

ಉತ್ತರ ಪ್ರದೇಶ ಸೇರಿ ಒಟ್ಟು 5 ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ, ವಾಗ್ದಾಳಿ-ಪ್ರತಿವಾಗ್ದಾಳಿಗಳೆಲ್ಲ ಸಾಮಾನ್ಯ. ಹೀಗಿರುವಾಗ ಉತ್ತರ ಪ್ರದೇಶಲ್ಲಿ ರಾಜಯಕೀಯ ಪಕ್ಷಗಳ ನಡುವೆ ಗಾಯನ ಸಮರ ಶುರುವಾಗಿದೆ. ಇತ್ತೀಚೆಗೆ ಬಿಜೆಪಿ ನಾಯಕ, ಸಂಸದ ರವಿ ಕಿಶನ್​ ಅವರು ಉತ್ತರಪ್ರದೇಶ ಸರ್ಕಾರ, ಯೋಗಿ ಆದಿತ್ಯನಾಥ್​ ಅವರನ್ನು ಹೊಗಳಿ ಒಂದು ಹಾಡು ಹಾಡಿದ್ದರು. ಭೋಜಪುರಿ ನಟ, ಗಾಯಕರೂ ಆಗಿರುವ ರವಿ ಕಿಶನ್​ ಯುಪಿ ಮೆ ಸಬ್​ ಬಾ (ಉತ್ತರಪ್ರದೇಶದಲ್ಲಿ ಎಲ್ಲವೂ ಇದೆ) ಎಂಬ ಹಾಡನ್ನು ಹಾಡಿದ್ದರು. ಅದರಲ್ಲಿ, ಯೋಗಿ ಆದಿತ್ಯನಾಥ್​ ನೇತೃತ್ವದ ಬಿಜೆಪಿ ಸರ್ಕಾರ ಕಳೆದ 5ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ಉಲ್ಲೇಖವಿದೆ.  ಇತ್ತೀಚೆಗೆ ಉದ್ಘಾಟನೆಯಾದ ಕುಶಿನಗರ ಏರ್​ಪೋರ್ಟ್ ಮತ್ತು ಜಾವರ್​ ಏರ್​ಪೋರ್ಟ್​ಗಳ ಉಲ್ಲೇಖವೂ ಇದೆ.  ಅಷ್ಟೇ ಅಲ್ಲ, ಉತ್ತರಪ್ರದೇಶ ಸರ್ಕಾರ ಕೊರೊನಾ ಸಾಂಕ್ರಾಮಿಕವನ್ನು ನಿಭಾಯಿಸಿದ ರೀತಿ, ಕಾನೂನು ಸುವ್ಯವಸ್ಥೆ ಜಾರಿಗೊಳಿಸಿದ ರೀತಿಯಯನ್ನೂ ರವಿ ಕಿಶನ್​ ತಮ್ಮ 5 ನಿಮಿಷಗಳ ಹಾಡಿನ ಮೂಲಕ ಹೊಗಳಿದ್ದಾರೆ. ಬಿಜೆಪಿಯನ್ನು ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ತರುವಂತೆ ಈ ಹಾಡಿನ ಮೂಲಕ ಮನವಿ ಮಾಡಿದ್ದಾರೆ. 

ರವಿ ಕಿಶನ್​ ಹಾಡು ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಇನ್ನೊಬ್ಬರು ಭೋಜಪುರಿ ಗಾಯಕ ನೇಹಾ ರಾಥೋಡ್​ ಈ ಹಾಡಿಗೆ ಪ್ರತಿಯಾಗಿ ಒಂದು ಹಾಡು ಹಾಡಿದ್ದಾರೆ. ತಮ್ಮ ಹಾಡಿನಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತೆಗಳಿದ್ದಾರೆ. ಸದ್ಯ ಪ್ರತಿಪಕ್ಷಗಳು ಉತ್ತರಪ್ರದೇಶದಲ್ಲಿ ಬಿಜೆಪಿ ವಿರುದ್ಧ ಯಾವೆಲ್ಲ ಆರೋಪ ಮಾಡುತ್ತಿವೆಯೋ, ಅದೆಲ್ಲವನ್ನೂ ಸೇರಿಸಿ ನೇಹಾ ಹಾಡು ಹಾಡಿದ್ದಾರೆ.

23 ವರ್ಷದ ನೇಹಾ ರಾಥೋಡ್​ ಇದೀಗ ಯುಪಿ ಮೆ ಕಾ ಬಾ (ಏನಿದೆ ಉತ್ತರಪ್ರದೇಶದಲ್ಲಿ) ಎಂಬ ಹಾಡನ್ನು ಟ್ವಿಟರ್​, ಯೂಟ್ಯೂಬ್​​ನಲ್ಲಿ ಹರಿಬಿಟ್ಟಿದ್ದಾರೆ. ಕೊವಿಡ್​ 19 ಎರಡನೇ ಅಲೆ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಶವಗಳು ಸಿಕ್ಕ ಬಗ್ಗೆ, ಹತ್ರಾಸ್​ ಅತ್ಯಾಚಾರ ಪ್ರಕರಣ ಮತ್ತು ಲಖಿಂಪುರದಲ್ಲಿ ರೈತರ ಕೊಲೆಯಾದ ಬಗ್ಗೆ ತಮ್ಮ ಹಾಡಿನ ಮೂಲಕವೇ ಸರ್ಕಾರವನ್ನು ಚುಚ್ಚಿದ್ದಾರೆ.  ಈ ಹಾಡನ್ನು ಮಹಾರಾಷ್ಟ್ರ ಸಚಿವ ನವಾಬ್​ ಮಲ್ಲಿಕ್​ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಅಂದಹಾಗೇ, ಈ ಹಾಡಿನ ಸಮರ ಇಲ್ಲಿಗೇ ಮುಗಿದಿಲ್ಲ. ಬಿಜೆಪಿಯ ಮತ್ತೊಬ್ಬರು ಸಂಸದರಾದ ಮನೋಜ್​ ತಿವಾರಿ ಇನ್ನೊಂದು ಹಾಡನ್ನು ಹಾಡಿದ್ದಾರೆ. ಮಂದಿರ್ ಅಬ್​ ಬನಾನೆ ಎಂಬ ಹಾಡಿದು. ಅಂದರೆ ಮಂದಿರ (ಅಯೋಧ್ಯೆ ರಾಮಮಂದಿರ) ನಿರ್ಮಾಣ ಶುರುವಾಗಿದೆ, ಎಲ್ಲೆಲ್ಲೂ ಕೇಸರಿ ಎಂಬ ಅರ್ಥ ಸೂಸುವ ಹಾಡು.  ಫೆ.10ರಿಂದ ಶುರುವಾಗಲಿರುವ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಹಾಡಿನ ಮೂಲಕ ಸಮರ ಶುರುವಾಗಿದೆ.

ಇದನ್ನೂ ಓದಿ: ಮದುವೆಯ ಬಳಿಕವೂ ಸಂಬಂಧಿಕನ ಜೊತೆ ಪ್ರೀತಿ; ಬಾಡಿಗೆ ಮನೆಯಲ್ಲಿ ಪ್ರಿಯಕರನ ಜೊತೆ ಆತ್ಮಹತ್ಯೆಗೆ ಶರಣಾದ ಮಹಿಳೆ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್