AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಘೋಷಣೆ: ಮಾರ್ಚ್​ ನಂತರ ನಡೆಯಲ್ಲ 100, 10 ಮತ್ತು 5 ರೂಪಾಯಿಯ ಹಳೆಯ ನೋಟು!

ನೋಟು ಅಮಾನ್ಯೀಕರಣದ ಅನುಭವದ ಹಿನ್ನೆಲೆಯಲ್ಲಿ ಈಗ ರಿಸರ್ವ ಬ್ಯಾಂಕ್​ ಹಳೆಯ ಪದ್ಧತಿ ಅನುಕರಿಸಲು ಮುಂದೆ ಬಂದಿದೆ. ಆ ಪ್ರಕಾರ 100, 10 ಹಾಗೂ 5 ರೂಪಾಯಿ ಮುಖ ಬೆಲೆಯ ನೋಟುಗಳ ಬದಲಾವಣೆಗೆ ಮಾರ್ಚ ಕೊನೆವರೆಗೆ ಅವಕಾಶವಿದೆ.

ಆರ್​ಬಿಐ ಘೋಷಣೆ: ಮಾರ್ಚ್​ ನಂತರ ನಡೆಯಲ್ಲ 100, 10 ಮತ್ತು 5 ರೂಪಾಯಿಯ ಹಳೆಯ ನೋಟು!
ಪ್ರಾತಿನಿಧಿಕ ಚಿತ್ರ
ಡಾ. ಭಾಸ್ಕರ ಹೆಗಡೆ
| Edited By: |

Updated on:Jan 23, 2021 | 6:56 PM

Share

ರಿಸರ್ವ ಬ್ಯಾಂಕ್​ (Reserve Bank of India) ಒಂದು ಮಹತ್ವದ ನಿರ್ಣಯವನ್ನು ತೆಗೆದುಕೊಂಡಿದೆ. ಅದರ ಪ್ರಕಾರ 100, 10 ಮತ್ತು 5 ರೂಪಾಯಿ ಮುಖ ಬೆಲೆಯ ಹಳೆಯ ನೋಟುಗಳು ಮಾರ್ಚ ಮತ್ತು ಏಪ್ರಿಲ್​ ನಂತರ, ಚಲಾವಣೆಯಿಂದ ಹೊರಹೋಗಲಿವೆ.  ಹೀಗಾಗಿ, ಹಳೇ ನೋಟುಗಳನ್ನು ಈಗಲೇ ಬದಲಾಯಿಸಿಕೊಳ್ಳಲು ಆರ್​ಬಿಐ ಸೂಚಿಸಿದೆ.  ಆರ್​ಬಿಐ ನ ಪ್ರಧಾನ ವ್ಯವಸ್ಥಾಪಕ (General Manager), ಬಿ. ಮಹೇಶ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಆರ್​ಬಿಐ ಈ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ಯೋಜನೆಯನ್ನು ಜಾರಿಗೊಳಿಸುವಲ್ಲಿ ಕಾರ್ಯಪ್ರವೃತ್ತವಾಗಿದೆ.

ಆರ್​ಬಿಐ ಅಂದುಕೊಳ್ಳುವಂತೆ ಎಲ್ಲವೂ ನಡೆದಲ್ಲಿ, 100, 10 ಮತ್ತು 5 ರೂ. ಹಳೇ ನೋಟುಗಳನ್ನು ಬ್ಯಾಂಕುಗಳಿಗೆ ಹಿಂತಿರುಗಿಸಲು ಮಾರ್ಚ ತನಕ ಅವಕಾಶವಿದೆ. ಜನ ತಮ್ಮ ಬಳಿ ಇರುವ ಹಳೇ ನೋಟುಗಳನ್ನು ಆದಷ್ಟು ಬೇಗ ಬ್ಯಾಂಕ್​​ಗಳಿಗೆ ಸಲ್ಲಿಸಿ ಹೊಸ ನೋಟುಗಳನ್ನು ತೆಗೆದುಕೊಳ್ಳಬಹುದಾಗಿದೆ. 2019 ರಲ್ಲಿ ಹೊಸ ರೂಪದ ರೂ. 100ರ ನೋಟುಗಳು ಈಗಾಗಲೇ ಜಾರಿಗೆ ಬಂದಿವೆ. ಅಂದರೆ, ಹೊಸ ವಿನ್ಯಾಸದಲ್ಲಿ ಚಲಾವಣೆಗೆ ಬಂದಿರುವ 100 ರೂಪಾಯಿಯ ನೋಟುಗಳು ಇನ್ನು ಚಲಾವಣೆಯಲ್ಲಿರುತ್ತವೆ.

2016ರ ನವೆಂಬರ್​ 8ರಂದು  500 ರೂ ಮತ್ತು 1000 ರೂ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿದಾಗ ಅಲ್ಲೋಲ ಕಲ್ಲೋಲವಾಗಿತ್ತು. ಜನ ಬ್ಯಾಂಕ್​ಗಳ ಮುಂದೆ ಸಾಲಿನಲ್ಲಿ ನಿಂತು ಹಳೇ ನೋಟುಗಳ ಬದಲಾವಣೆಗೆ ಬೆವರಿಳಿಸಿಕೊಂಡಿದ್ದರು. ಎಷ್ಟೋ ಜನ ಹಳೇ ನೋಟು ಬದಲಾವಣೆ ಮಾಡಲಾಗದೇ, ಹಣ ಕಳೆದುಕೊಂಡವರಿದ್ದಾರೆ. ಆ ಅನುಭವದ ಹಿನ್ನೆಲೆಯಲ್ಲಿ, ಈ ಬಾರಿ ನೋಟು ಅಮಾನ್ಯೀಕರಣದ ನಿರ್ಣಯಯವನ್ನು ಆರ್​ಬಿಐ ತೆಗೆದುಕೊಂಡಿಲ್ಲ. ಅದಕ್ಕೆ ಬದಲಾಗಿ, ಹಳೇ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಿದೆ.

10 ರೂ ನ ನಾಣ್ಯಗಳು ಮಾರುಕಟ್ಟೆಗೆ ಬಂದು ವರ್ಷಗಳೇ ಕಳೆದರೂ, ಸಣ್ಣ ವ್ಯಾಪಾರಿಗಳು ಅದನ್ನು ತೆಗೆದುಕೊಳ್ಳುತ್ತಿಲ್ಲ. ಇದು ಆರ್​ಬಿಐಗೆ ತಲೆನೋವಾಗಿ ಪರಿಣಮಿಸಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

Published On - 4:25 pm, Sat, 23 January 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?