AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಘೋಷಣೆ: ಮಾರ್ಚ್​ ನಂತರ ನಡೆಯಲ್ಲ 100, 10 ಮತ್ತು 5 ರೂಪಾಯಿಯ ಹಳೆಯ ನೋಟು!

ನೋಟು ಅಮಾನ್ಯೀಕರಣದ ಅನುಭವದ ಹಿನ್ನೆಲೆಯಲ್ಲಿ ಈಗ ರಿಸರ್ವ ಬ್ಯಾಂಕ್​ ಹಳೆಯ ಪದ್ಧತಿ ಅನುಕರಿಸಲು ಮುಂದೆ ಬಂದಿದೆ. ಆ ಪ್ರಕಾರ 100, 10 ಹಾಗೂ 5 ರೂಪಾಯಿ ಮುಖ ಬೆಲೆಯ ನೋಟುಗಳ ಬದಲಾವಣೆಗೆ ಮಾರ್ಚ ಕೊನೆವರೆಗೆ ಅವಕಾಶವಿದೆ.

ಆರ್​ಬಿಐ ಘೋಷಣೆ: ಮಾರ್ಚ್​ ನಂತರ ನಡೆಯಲ್ಲ 100, 10 ಮತ್ತು 5 ರೂಪಾಯಿಯ ಹಳೆಯ ನೋಟು!
ಪ್ರಾತಿನಿಧಿಕ ಚಿತ್ರ
ಡಾ. ಭಾಸ್ಕರ ಹೆಗಡೆ
| Edited By: |

Updated on:Jan 23, 2021 | 6:56 PM

Share

ರಿಸರ್ವ ಬ್ಯಾಂಕ್​ (Reserve Bank of India) ಒಂದು ಮಹತ್ವದ ನಿರ್ಣಯವನ್ನು ತೆಗೆದುಕೊಂಡಿದೆ. ಅದರ ಪ್ರಕಾರ 100, 10 ಮತ್ತು 5 ರೂಪಾಯಿ ಮುಖ ಬೆಲೆಯ ಹಳೆಯ ನೋಟುಗಳು ಮಾರ್ಚ ಮತ್ತು ಏಪ್ರಿಲ್​ ನಂತರ, ಚಲಾವಣೆಯಿಂದ ಹೊರಹೋಗಲಿವೆ.  ಹೀಗಾಗಿ, ಹಳೇ ನೋಟುಗಳನ್ನು ಈಗಲೇ ಬದಲಾಯಿಸಿಕೊಳ್ಳಲು ಆರ್​ಬಿಐ ಸೂಚಿಸಿದೆ.  ಆರ್​ಬಿಐ ನ ಪ್ರಧಾನ ವ್ಯವಸ್ಥಾಪಕ (General Manager), ಬಿ. ಮಹೇಶ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಆರ್​ಬಿಐ ಈ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ಯೋಜನೆಯನ್ನು ಜಾರಿಗೊಳಿಸುವಲ್ಲಿ ಕಾರ್ಯಪ್ರವೃತ್ತವಾಗಿದೆ.

ಆರ್​ಬಿಐ ಅಂದುಕೊಳ್ಳುವಂತೆ ಎಲ್ಲವೂ ನಡೆದಲ್ಲಿ, 100, 10 ಮತ್ತು 5 ರೂ. ಹಳೇ ನೋಟುಗಳನ್ನು ಬ್ಯಾಂಕುಗಳಿಗೆ ಹಿಂತಿರುಗಿಸಲು ಮಾರ್ಚ ತನಕ ಅವಕಾಶವಿದೆ. ಜನ ತಮ್ಮ ಬಳಿ ಇರುವ ಹಳೇ ನೋಟುಗಳನ್ನು ಆದಷ್ಟು ಬೇಗ ಬ್ಯಾಂಕ್​​ಗಳಿಗೆ ಸಲ್ಲಿಸಿ ಹೊಸ ನೋಟುಗಳನ್ನು ತೆಗೆದುಕೊಳ್ಳಬಹುದಾಗಿದೆ. 2019 ರಲ್ಲಿ ಹೊಸ ರೂಪದ ರೂ. 100ರ ನೋಟುಗಳು ಈಗಾಗಲೇ ಜಾರಿಗೆ ಬಂದಿವೆ. ಅಂದರೆ, ಹೊಸ ವಿನ್ಯಾಸದಲ್ಲಿ ಚಲಾವಣೆಗೆ ಬಂದಿರುವ 100 ರೂಪಾಯಿಯ ನೋಟುಗಳು ಇನ್ನು ಚಲಾವಣೆಯಲ್ಲಿರುತ್ತವೆ.

2016ರ ನವೆಂಬರ್​ 8ರಂದು  500 ರೂ ಮತ್ತು 1000 ರೂ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿದಾಗ ಅಲ್ಲೋಲ ಕಲ್ಲೋಲವಾಗಿತ್ತು. ಜನ ಬ್ಯಾಂಕ್​ಗಳ ಮುಂದೆ ಸಾಲಿನಲ್ಲಿ ನಿಂತು ಹಳೇ ನೋಟುಗಳ ಬದಲಾವಣೆಗೆ ಬೆವರಿಳಿಸಿಕೊಂಡಿದ್ದರು. ಎಷ್ಟೋ ಜನ ಹಳೇ ನೋಟು ಬದಲಾವಣೆ ಮಾಡಲಾಗದೇ, ಹಣ ಕಳೆದುಕೊಂಡವರಿದ್ದಾರೆ. ಆ ಅನುಭವದ ಹಿನ್ನೆಲೆಯಲ್ಲಿ, ಈ ಬಾರಿ ನೋಟು ಅಮಾನ್ಯೀಕರಣದ ನಿರ್ಣಯಯವನ್ನು ಆರ್​ಬಿಐ ತೆಗೆದುಕೊಂಡಿಲ್ಲ. ಅದಕ್ಕೆ ಬದಲಾಗಿ, ಹಳೇ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಿದೆ.

10 ರೂ ನ ನಾಣ್ಯಗಳು ಮಾರುಕಟ್ಟೆಗೆ ಬಂದು ವರ್ಷಗಳೇ ಕಳೆದರೂ, ಸಣ್ಣ ವ್ಯಾಪಾರಿಗಳು ಅದನ್ನು ತೆಗೆದುಕೊಳ್ಳುತ್ತಿಲ್ಲ. ಇದು ಆರ್​ಬಿಐಗೆ ತಲೆನೋವಾಗಿ ಪರಿಣಮಿಸಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

Published On - 4:25 pm, Sat, 23 January 21

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ