AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಲಕ್ಷ್ಮಿ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿ ರದ್ದು ಮಾಡಿದ ಆರ್​​ಬಿಐ

ಸೋಲಾಪುರ ಮೂಲದ ಬ್ಯಾಂಕ್​​ಗೆ ಸಾಕಷ್ಟು ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳಿಲ್ಲ, ಅದು ನಿಯಮಗಳಿಗೆ ಬದ್ಧವಾಗಿಲ್ಲ ಎಂದು ಆರ್​ಬಿಐ ಹೇಳಿದೆ.

ಮಹಾರಾಷ್ಟ್ರದ ಲಕ್ಷ್ಮಿ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿ ರದ್ದು ಮಾಡಿದ ಆರ್​​ಬಿಐ
ಮಹಾರಾಷ್ಟ್ರದ ಲಕ್ಷ್ಮಿ ಸಹಕಾರಿ ಬ್ಯಾಂಕ್ ಲಿಮಿಟೆಡ್‌
TV9 Web
| Edited By: |

Updated on: Sep 22, 2022 | 7:30 PM

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹಾರಾಷ್ಟ್ರದ ಲಕ್ಷ್ಮಿ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನ (Laxmi Co-operative Bank Limited) ಪರವಾನಗಿಯನ್ನು ಗುರುವಾರ ರದ್ದುಗೊಳಿಸಿದೆ. ಸೋಲಾಪುರ ಮೂಲದ ಬ್ಯಾಂಕ್​​ಗೆ ಸಾಕಷ್ಟು ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳಿಲ್ಲ, ಅದು ನಿಯಮಗಳಿಗೆ ಬದ್ಧವಾಗಿಲ್ಲ ಎಂದು ಹೇಳಿದೆ. ಇಂದಿನಿಂದಲೇ ಆದೇಶ ಜಾರಿಯಾಗಲಿದೆ. ಆರ್‌ಬಿಐ ಹೇಳಿಕೆಯಲ್ಲಿ, ಮಹಾರಾಷ್ಟ್ರದ ಸೊಲ್ಲಾಪುರದ ಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, 1949 ಬ್ಯಾಂಕಿಂಗ್ ನಿಯಂತ್ರಣ ಕಾಯಿದೆಯ ವಿಭಾಗ 56 ಸೆಕ್ಷನ್ 5(ಬಿ) ನಲ್ಲಿ ವ್ಯಾಖ್ಯಾನಿಸಿದಂತೆ ಠೇವಣಿ ಸ್ವೀಕಾರ ಮತ್ತು ಠೇವಣಿಗಳ ಮರುಪಾವತಿಯನ್ನು ಒಳಗೊಂಡಿರುವ ‘ಬ್ಯಾಂಕಿಂಗ್’ ವ್ಯವಹಾರವನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಆರ್‌ಬಿಐ ಸಹಕಾರಕ್ಕಾಗಿ ಕಮಿಷನರ್ ಮತ್ತು ಸಹಕಾರ ಸಂಘಗಳ ರಿಜಿಸ್ಟ್ರಾರ್, ಮಹಾರಾಷ್ಟ್ರದ ಬ್ಯಾಂಕ್ ಅನ್ನು ಮುಚ್ಚುವ ಆದೇಶವನ್ನು ಹೊರಡಿಸಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ ಅನ್ನು ನೇಮಿಸುವಂತೆ ತಿಳಿಸಿದೆ.

ದಿವಾಳಿಯಾದ ಮೇಲೆ, ಪ್ರತಿ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಅಥವಾ ಡಿಐಸಿಜಿಸಿಯಿಂದ ₹ 5 ಲಕ್ಷದವರೆಗಿನ ಠೇವಣಿ ವಿಮೆಯ ಕ್ಲೈಮ್ ಮೊತ್ತವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಅದು ಹೇಳಿದೆ. ಬ್ಯಾಂಕ್ ಸಲ್ಲಿಸಿದ ಮಾಹಿತಿಯ ಪ್ರಕಾರ, 99 ಪ್ರತಿಶತ ಠೇವಣಿದಾರರು ತಮ್ಮ ಠೇವಣಿಗಳ ಪೂರ್ಣ ಮೊತ್ತವನ್ನು ಡಿಐಸಿಜಿಸಿಯಿಂದ ಸ್ವೀಕರಿಸಲು ಅರ್ಹರಾಗಿದ್ದಾರೆ.

Follow Us
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ