AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐಗೆ ಲಷ್ಕರ್-ಎ-ತೊಯ್ಬಾದಿಂದ ಬಾಂಬ್ ಬೆದರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಬೆದರಿಕೆ ಕರೆ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.

ಆರ್​ಬಿಐಗೆ ಲಷ್ಕರ್-ಎ-ತೊಯ್ಬಾದಿಂದ ಬಾಂಬ್ ಬೆದರಿಕೆ
ಆರ್​ಬಿಐ
ನಯನಾ ರಾಜೀವ್
|

Updated on: Nov 17, 2024 | 11:32 AM

Share

ಮುಂಬೈ, ನವೆಂಬರ್ 17: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಬೆದರಿಕೆ ಕರೆ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.

ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಕರೆ ಬಂದಿದೆ. ಫೋನ್ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಿಸರ್ವ್ ಬ್ಯಾಂಕ್ ನ ಭದ್ರತಾ ಸಿಬ್ಬಂದಿ ನೀಡಿದ ದೂರಿನಂತೆ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈನಲ್ಲಿರುವ ಜೆಎಸ್‌ಎ ಕಾನೂನು ಸಂಸ್ಥೆ ಬಲ್ಲಾರ್ಡ್ ಪೇರ್ ಮತ್ತು ಜೆಎಸ್‌ಎ ಕಚೇರಿ ಕಮಲಾ ಮಿಲ್ ಲೋವರ್ ಪರ್ಲ್‌ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಈ ಬೆದರಿಕೆ ಮೇಲ್ ಕಂಪನಿಯ ಇಮೇಲ್ ಐಡಿಯಲ್ಲಿ ಫರ್ಜಾನ್ ಅಹ್ಮದ್ ಎಂದು ಬರೆಯಲಾಗಿದೆ.

ಮತ್ತಷ್ಟು ಓದಿ: ಬಾಂಬ್​ ಇದೆ ಎಂದು ಆಟೋ ಸಮೇತ ಪೊಲೀಸ್ ಠಾಣೆಗೆ ಬಂದ ಚಾಲಕ: ಮುಂದೇನಾಯ್ತು?

ಜೆಎಫ್‌ಎ ಸಂಸ್ಥೆಯ ಕಚೇರಿಗಳು ಮತ್ತು ಬಲ್ಲಾರ್ಡ್ ಎಸ್ಟೇಟ್‌ನ ಕಚೇರಿಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಮೇಲ್‌ನಲ್ಲಿ ಬರೆಯಲಾಗಿದೆ. ಮಾಹಿತಿ ಬಂದ ತಕ್ಷಣ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಗುಂಪು 2008 ರ ಮುಂಬೈ ದಾಳಿಯನ್ನು ನಡೆಸಿತ್ತು, ಇದು ಭಾರತದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿದೆ.

ಕಳೆದ ಎರಡು-ಮೂರು ತಿಂಗಳಿನಿಂದ ನಿರಂತರವಾಗಿ ಶಾಲೆಗಳು, ಹೋಟೆಲ್‌ಗಳು, ವಿಮಾನ ನಿಲ್ದಾಣಗಳು, ಮಾರುಕಟ್ಟೆಗಳು, ರೈಲ್ವೆ, ಬಸ್‌ಗಳು ಇತ್ಯಾದಿಗಳಲ್ಲಿ ಬಾಂಬ್ ಬೆದರಿಕೆಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಅಕ್ಟೋಬರ್ 27 ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಜವಾನನಿಗೆ ಬೆದರಿಕೆ ಹಾಕಲಾಗಿತ್ತು. ಆಗ ವಿಮಾನ ಸ್ಫೋಟಗೊಂಡರೆ ಯಾರೂ ಬದುಕುವುದಿಲ್ಲ ಎಂದು ಹೇಳಲಾಗಿತ್ತು. ತನಿಖೆಯ ನಂತರ ಈ ಬೆದರಿಕೆ ಸುಳ್ಳು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು