AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐಗೆ ಲಷ್ಕರ್-ಎ-ತೊಯ್ಬಾದಿಂದ ಬಾಂಬ್ ಬೆದರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಬೆದರಿಕೆ ಕರೆ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.

ಆರ್​ಬಿಐಗೆ ಲಷ್ಕರ್-ಎ-ತೊಯ್ಬಾದಿಂದ ಬಾಂಬ್ ಬೆದರಿಕೆ
ಆರ್​ಬಿಐ
Follow us
ನಯನಾ ರಾಜೀವ್
|

Updated on: Nov 17, 2024 | 11:32 AM

ಮುಂಬೈ, ನವೆಂಬರ್ 17: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಬೆದರಿಕೆ ಕರೆ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.

ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಕರೆ ಬಂದಿದೆ. ಫೋನ್ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಿಸರ್ವ್ ಬ್ಯಾಂಕ್ ನ ಭದ್ರತಾ ಸಿಬ್ಬಂದಿ ನೀಡಿದ ದೂರಿನಂತೆ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈನಲ್ಲಿರುವ ಜೆಎಸ್‌ಎ ಕಾನೂನು ಸಂಸ್ಥೆ ಬಲ್ಲಾರ್ಡ್ ಪೇರ್ ಮತ್ತು ಜೆಎಸ್‌ಎ ಕಚೇರಿ ಕಮಲಾ ಮಿಲ್ ಲೋವರ್ ಪರ್ಲ್‌ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಈ ಬೆದರಿಕೆ ಮೇಲ್ ಕಂಪನಿಯ ಇಮೇಲ್ ಐಡಿಯಲ್ಲಿ ಫರ್ಜಾನ್ ಅಹ್ಮದ್ ಎಂದು ಬರೆಯಲಾಗಿದೆ.

ಮತ್ತಷ್ಟು ಓದಿ: ಬಾಂಬ್​ ಇದೆ ಎಂದು ಆಟೋ ಸಮೇತ ಪೊಲೀಸ್ ಠಾಣೆಗೆ ಬಂದ ಚಾಲಕ: ಮುಂದೇನಾಯ್ತು?

ಜೆಎಫ್‌ಎ ಸಂಸ್ಥೆಯ ಕಚೇರಿಗಳು ಮತ್ತು ಬಲ್ಲಾರ್ಡ್ ಎಸ್ಟೇಟ್‌ನ ಕಚೇರಿಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಮೇಲ್‌ನಲ್ಲಿ ಬರೆಯಲಾಗಿದೆ. ಮಾಹಿತಿ ಬಂದ ತಕ್ಷಣ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಗುಂಪು 2008 ರ ಮುಂಬೈ ದಾಳಿಯನ್ನು ನಡೆಸಿತ್ತು, ಇದು ಭಾರತದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿದೆ.

ಕಳೆದ ಎರಡು-ಮೂರು ತಿಂಗಳಿನಿಂದ ನಿರಂತರವಾಗಿ ಶಾಲೆಗಳು, ಹೋಟೆಲ್‌ಗಳು, ವಿಮಾನ ನಿಲ್ದಾಣಗಳು, ಮಾರುಕಟ್ಟೆಗಳು, ರೈಲ್ವೆ, ಬಸ್‌ಗಳು ಇತ್ಯಾದಿಗಳಲ್ಲಿ ಬಾಂಬ್ ಬೆದರಿಕೆಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಅಕ್ಟೋಬರ್ 27 ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಜವಾನನಿಗೆ ಬೆದರಿಕೆ ಹಾಕಲಾಗಿತ್ತು. ಆಗ ವಿಮಾನ ಸ್ಫೋಟಗೊಂಡರೆ ಯಾರೂ ಬದುಕುವುದಿಲ್ಲ ಎಂದು ಹೇಳಲಾಗಿತ್ತು. ತನಿಖೆಯ ನಂತರ ಈ ಬೆದರಿಕೆ ಸುಳ್ಳು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ