AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI ಸುದ್ದಿಗೋಷ್ಠಿ, EMI ಮತ್ತೆ 3 ತಿಂಗಳು ವಿಸ್ತರಣೆ

ದೆಹಲಿ: ಕೊರೊನಾ ಸಂಕಷ್ಟದ ವೇಳೆ ಈ ಹಿಂದೆ ಎರಡು ಬಾರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರ್​ಬಿಐ ಮುಖ್ಯಸ್ಥ ದೇಶದ ಹಣಕಾಸು ವ್ಯವಸ್ಥೆಯಲ್ಲಿ ಹಣದ ಹರಿವು ಹೆಚ್ಚಿಸಲು ವಿವಿಧ ಕ್ರಮಗಳನ್ನು ಪ್ರಕಟಿಸಿದ್ದರು. ಇಂದು ಸುದ್ದಿಗೋಷ್ಠಿಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌ ಮಾರುಕಟ್ಟೆ ಚೈತನ್ಯಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. 40 ಬೇಸಿಸ್ ಪಾಯಿಂಟ್ ರೆಪೋ ದರ ಕಡಿತವಾಗಲಿದೆ. ಶೇಕಡಾ 4.4ರಷ್ಟಿದ್ದ ರೆಪೋ ದರ ಶೇಕಡಾ 4ಕ್ಕೆ ಇಳಿಕೆಯಾಗಲಿದೆ. ಗೃಹಸಾಲ, ವಾಹನ ಸಾಲ,ವೈಯಕ್ತಿಕ ಸಾಲದ ಬಡ್ಡಿ ದರ ಕಡಿತವಾಗುತ್ತೆ. ರಿವರ್ಸ್ ರೆಪೋ ದರ […]

RBI ಸುದ್ದಿಗೋಷ್ಠಿ, EMI ಮತ್ತೆ 3 ತಿಂಗಳು ವಿಸ್ತರಣೆ
ಶಕ್ತಿಕಾಂತ್​ ದಾಸ್
ಆಯೇಷಾ ಬಾನು
ಆಯೇಷಾ ಬಾನು|

Updated on:May 22, 2020 | 12:48 PM

Share

ದೆಹಲಿ: ಕೊರೊನಾ ಸಂಕಷ್ಟದ ವೇಳೆ ಈ ಹಿಂದೆ ಎರಡು ಬಾರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರ್​ಬಿಐ ಮುಖ್ಯಸ್ಥ ದೇಶದ ಹಣಕಾಸು ವ್ಯವಸ್ಥೆಯಲ್ಲಿ ಹಣದ ಹರಿವು ಹೆಚ್ಚಿಸಲು ವಿವಿಧ ಕ್ರಮಗಳನ್ನು ಪ್ರಕಟಿಸಿದ್ದರು.

ಇಂದು ಸುದ್ದಿಗೋಷ್ಠಿಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌ ಮಾರುಕಟ್ಟೆ ಚೈತನ್ಯಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. 40 ಬೇಸಿಸ್ ಪಾಯಿಂಟ್ ರೆಪೋ ದರ ಕಡಿತವಾಗಲಿದೆ. ಶೇಕಡಾ 4.4ರಷ್ಟಿದ್ದ ರೆಪೋ ದರ ಶೇಕಡಾ 4ಕ್ಕೆ ಇಳಿಕೆಯಾಗಲಿದೆ. ಗೃಹಸಾಲ, ವಾಹನ ಸಾಲ,ವೈಯಕ್ತಿಕ ಸಾಲದ ಬಡ್ಡಿ ದರ ಕಡಿತವಾಗುತ್ತೆ. ರಿವರ್ಸ್ ರೆಪೋ ದರ ಶೇಕಡಾ 3.35ಕ್ಕೆ ಇಳಿಕೆಯಾಗುತ್ತದೆ. ಕೈಗಾರಿಕಾ ವಲಯದ ಉತ್ಪಾದನೆ ಶೇ.17ರಷ್ಟು ಕಡಿಮೆ ಆಗಿದೆ.

ಕೈಗಾರಿಕಾ ವಲಯಗಳ ಉತ್ಪಾದನೆ ಕುಸಿತ: ಲಾಕ್​ಡೌನ್ ಸಂದರ್ಭದಲ್ಲಿ ಬೇಡಿಕೆ ಮತ್ತು ಪೂರೈಕೆ ಕುಸಿದಿದೆ. ಪ್ರಮುಖ ಕೈಗಾರಿಕಾ ವಲಯಗಳ ಉತ್ಪಾದನೆ ಶೇ. 6.5ರಷ್ಟು ಕುಸಿತ ಕಂಡಿದೆ. ಮಾರ್ಚ್ ತಿಂಗಳಲ್ಲಿ ಸಿಮೆಂಟ್ ಉತ್ಪಾದನೆ ಶೇ.19ರಷ್ಟು ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಶೇ.3.7ರಷ್ಟು ಏರಿಕೆಯಾಗಿದೆ. ಆಹಾರ ಹಣದುಬ್ಬರ ಏಪ್ರಿಲ್​ನಲ್ಲಿ ಶೇ. 8.7ರಷ್ಟು ಏರಿಕೆ. ಕಳೆದ 30 ವರ್ಷಗಳಲ್ಲೇ ರಫ್ತು ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಗ್ರಾಹಕ ಬಳಕೆಯ ವಸ್ತುಗಳ ಉತ್ಪಾದನೆ ಶೇ.33ರಷ್ಟು ಇಳಿಕೆಯಾಗಿದೆ. ಎರಡು ತಿಂಗಳಲ್ಲಿ ದೇಶೀಯ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಿದೆ. ವಿದೇಶಿ ವಿನಿಮಯ 9.2 ಬಿಲಿಯನ್ ಡಾಲರ್ ಏರಿಕೆಯಾಗಿದೆ.

ಮತ್ತೆ ಮೂರು ತಿಂಗಳು EMI ಪಾವತಿ ಮುಂದೂಡಿಕೆ: 2021ರಲ್ಲಿ ಜಿಡಿಪಿ ಬೆಳವಣಿಗೆಯಲ್ಲಿ ನಕಾರಾತ್ಮಕ ಬೆಳವಣಿಗೆ ಆಗಲಿದೆ. ಹಣದುಬ್ಬರದ ಅನಿಶ್ಚಿತತೆ ಮುಂದಿನ ದಿನಗಳಲ್ಲಿ ಕಾಡಲಿದೆ. SIDBIಗೆ ಮುಂದಿನ 3 ತಿಂಗಳಲ್ಲಿ 15 ಸಾವಿರ ಕೋಟಿ. ಆಮದು, ರಫ್ತು ವಲಯಕ್ಕೆ ಆರ್​ಬಿಐನಿಂದ ರಿಲೀಫ್ ಸಿಕ್ಕಿದೆ. ಜೂನ್ 1ರಿಂದ ಆಗಸ್ಟ್ 31ರವರೆಗೆ ಇಎಂಐ ಪಾವತಿ ಮುಂದೂಡಿಕೆ ಮಾಡಲಾಗಿದೆ.

Published On - 9:07 am, Fri, 22 May 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!