AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ!

ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಾನ್ಪುರ ಶಾಖೆಯಲ್ಲಿ ಬ್ಯಾಂಕ್ ವೈದ್ಯಕೀಯ ಸಲಹೆಗಾರ (BMC) ಹುದ್ದೆಗಳಿಗೆ ಅರ್ಹ ವೈದ್ಯಕೀಯ ವೃತ್ತಿಪರರಿಂದ ಅರ್ಜಿ ಆಹ್ವಾನಿಸಿದೆ. ಇದು ಒಪ್ಪಂದ ಆಧಾರಿತ ನೇಮಕಾತಿಯಾಗಿದ್ದು, ಗಂಟೆಗೆ 1,000ರೂ. ಸಂಭಾವನೆ ನೀಡಲಾಗುತ್ತದೆ. ಎಂಬಿಬಿಎಸ್ ಪದವಿ ಕಡ್ಡಾಯ. ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ಆಯ್ಕೆ. ಜುಲೈ 31 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ!
ಉದ್ಯೋಗ ಅವಕಾಶImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jul 19, 2026 | 12:55 PM

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಉದ್ಯೋಗ ಹುಡುಕುತ್ತಿರುವ ವೈದ್ಯಕೀಯ ವೃತ್ತಿಪರರಿಗೆ ಒಂದು ಸುವರ್ಣ ಅವಕಾಶ ಇಲ್ಲಿದೆ. ಕಾನ್ಪುರದಲ್ಲಿರುವ ಆರ್‌ಬಿಐ ಶಾಖೆಯಲ್ಲಿ ಖಾಲಿ ಇರುವ ಬ್ಯಾಂಕ್ ವೈದ್ಯಕೀಯ ಸಲಹೆಗಾರ (Bank Medical Consultant – BMC) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಆರ್‌ಬಿಐ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯು ಸಂಪೂರ್ಣವಾಗಿ ಒಪ್ಪಂದದ (Contract) ಆಧಾರದ ಮೇಲೆ ನಡೆಯಲಿದ್ದು, ಗಂಟೆಯ ಲೆಕ್ಕದಲ್ಲಿ ಆಕರ್ಷಕ ಸಂಭಾವನೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ (ಅಂಚೆ) ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಉದ್ಯೋಗದ ಪ್ರಮುಖ ವಿವರಗಳು:

  • ಹುದ್ದೆಯ ಹೆಸರು: ಬ್ಯಾಂಕ್ ವೈದ್ಯಕೀಯ ಸಲಹೆಗಾರ (BMC)
  • ಒಟ್ಟು ಹುದ್ದೆಗಳು: 02
  • ಉದ್ಯೋಗದ ಸ್ಥಳ: ಕಾನ್ಪುರ ಶಾಖೆ, ಉತ್ತರ ಪ್ರದೇಶ
  • ನೇಮಕಾತಿ ವಿಧಾನ: ಒಪ್ಪಂದದ ಆಧಾರ (Contract Basis)
  • ವೇತನ/ಸಂಭಾವನೆ: ಗಂಟೆಗೆ 1,000 ರೂ.
  • ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ನೇಮಕಾತಿ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2026

ಶೈಕ್ಷಣಿಕ ಅರ್ಹತೆ ಮತ್ತು ಅನುಭವ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಎಂಬಿಬಿಎಸ್ (MBBS) ಪದವಿ ಪೂರ್ಣಗೊಳಿಸಿರಬೇಕು. ಜನರಲ್ ಮೆಡಿಸಿನ್‌ನಲ್ಲಿ ಎಂಎಸ್ (MS) ಅಥವಾ ಎಂಡಿ (MD) ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಇದರೊಂದಿಗೆ ಸಂಬಂಧಿತ ವೈದ್ಯಕೀಯ ಸೇವೆಗಳಲ್ಲಿ ಸೂಕ್ತ ಅನುಭವ ಹೊಂದಿರುವುದು ಅತ್ಯಗತ್ಯ.

ಇದನ್ನೂ ಓದಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; 253 ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ!

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ಮೊದಲು ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅಧಿಸೂಚನೆಯೊಂದಿಗೆ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡು, ನಿಖರವಾಗಿ ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ವಿದ್ಯಾರ್ಹತೆ, ಅನುಭವ ಹಾಗೂ ಇತರ ಅಗತ್ಯ ದಾಖಲೆಗಳ ನಕಲು ಪ್ರತಿಯನ್ನು ಲಗತ್ತಿಸಬೇಕು. ಸಿದ್ಧಪಡಿಸಿದ ಅರ್ಜಿ ಲಕೋಟೆಯನ್ನು ಜುಲೈ 31 ರೊಳಗೆ ತಲುಪುವಂತೆ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

ಪ್ರಾದೇಶಿಕ ನಿರ್ದೇಶಕರು,ಭಾರತೀಯ ರಿಸರ್ವ್ ಬ್ಯಾಂಕ್, ಮಾನವ ಸಂಪನ್ಮೂಲ ನಿರ್ವಹಣಾ ಇಲಾಖೆ (ನೇಮಕಾತಿ ವಿಭಾಗ), ಮಹಾತ್ಮ ಗಾಂಧಿ ಮಾರ್ಗ, ಕಾನ್ಪುರ.

ಅಭ್ಯರ್ಥಿಗಳು ಕರ್ತವ್ಯಗಳ ಸ್ವರೂಪ, ಆಯ್ಕೆ ಪ್ರಕ್ರಿಯೆಯ ನಿಯಮಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಸುವ ಮುನ್ನ ಆರ್‌ಬಿಐ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಕೂಲಂಕಷವಾಗಿ ಪರಿಶೀಲಿಸಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?