AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆಯಂತೆ ತತ್ವ, ಸಿದ್ಧಾಂತಕ್ಕಾಗಿ ಸಚಿವ ಸ್ಥಾನ ಬಿಟ್ಟುಕೊಡಲೂ ಸಿದ್ಧ; ಚಿರಾಗ್ ಪಾಸ್ವಾನ್ ಅಚ್ಚರಿಯ ಹೇಳಿಕೆ

ಸಂವಿಧಾನ ಅಥವಾ ಮೀಸಲಾತಿಯನ್ನು ತಿದ್ದಿದರೆ ಅಥವಾ ವಂಚಿತ ವರ್ಗದ ಜನರಿಗೆ ಯಾವುದಾದರೂ ಅನ್ಯಾಯವಾದರೆ ನಾನು ನನ್ನ ಸಚಿವ ಸ್ಥಾನವನ್ನು ಕೂಡ ಬಿಟ್ಟುಕೊಡಲು ಸಿದ್ಧ ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಇಂದು ಹೇಳಿಕೆ ನೀಡುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ತಮ್ಮ ದಿವಂಗತ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರಂತೆ ತತ್ವ, ಸಿದ್ಧಾಂತಗಳಿಗಾಗಿ ಸಚಿವ ಸ್ಥಾನವನ್ನೂ ಬಿಟ್ಟುಕೊಡಲು ತಯಾರಿದ್ದೇನೆ ಎಂದು ಚಿರಾಗ್ ಹೇಳಿದ್ದಾರೆ.

ನನ್ನ ತಂದೆಯಂತೆ ತತ್ವ, ಸಿದ್ಧಾಂತಕ್ಕಾಗಿ ಸಚಿವ ಸ್ಥಾನ ಬಿಟ್ಟುಕೊಡಲೂ ಸಿದ್ಧ; ಚಿರಾಗ್ ಪಾಸ್ವಾನ್ ಅಚ್ಚರಿಯ ಹೇಳಿಕೆ
ಚಿರಾಗ್ ಪಾಸ್ವಾನ್
ಸುಷ್ಮಾ ಚಕ್ರೆ
|

Updated on: Oct 01, 2024 | 6:51 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಚಿರಾಗ್ ಪಾಸ್ವಾನ್ ತಮ್ಮ ಇತ್ತೀಚಿನ ಹೇಳಿಕೆಯ ಮೂಲಕ ಚರ್ಚೆಗೆ ಕಾರಣರಾಗಿದ್ದಾರೆ. ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥರಾದ ಚಿರಾಗ್ ಪಾಸ್ವಾನ್ ತಮ್ಮ ದಿವಂಗತ ತಂದೆ ರಾಮ್ ವಿಲಾಸ್ ಪಾಸ್ವಾನ್ ಸ್ಥಾಪಿಸಿದ ಪೂರ್ವನಿದರ್ಶನವನ್ನು ಇಟ್ಟುಕೊಂಡು ತಮ್ಮ ತತ್ವಗಳ ಮೇಲೆ ರಾಜಿ ಮಾಡಿಕೊಳ್ಳುವ ಬದಲು ತಮ್ಮ ಸಚಿವ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧ ಇರುವುದಾಗಿ ಹೇಳಿದ್ದಾರೆ.

“ನರೇಂದ್ರ ಮೋದಿ ಪ್ರಧಾನಿಯಾಗಿರುವವರೆಗೂ ನಾನು ಎನ್‌ಡಿಎಯಲ್ಲಿರುತ್ತೇನೆ” ಎಂದು ಚಿರಾಗ್ ಪಾಸ್ವಾನ್ ಸಮರ್ಥಿಸಿಕೊಂಡಿದ್ದಾರೆ. ತತ್ವ, ಆದರ್ಶಗಳಿಗಾಗಿ ನನ್ನ ತಂದೆಯಂತೆ ನನ್ನ ಮಂತ್ರಿ ಸ್ಥಾನವನ್ನು ತ್ಯಜಿಸಲು ನಾನು ಹಿಂಜರಿಯುವುದಿಲ್ಲ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಮೋದಿಯನ್ನು ಹೊಗಳಿದ ಚಿರಾಗ್ ಪಾಸ್ವಾನ್, ಪ್ರಸ್ತುತ ಆಡಳಿತವು ದಲಿತರ ಬಗ್ಗೆ ಅವರ ಕಾಳಜಿಗೆ ಸಂವೇದನಾಶೀಲವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಜಾತೀಯತೆ ಮೂಲಕ ದೇಶಭಕ್ತಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಪ್ರಯತ್ನ; ಹರಿಯಾಣ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ

“ನನ್ನ ತಂದೆ ಯುಪಿಎ ಸರ್ಕಾರದಲ್ಲಿಯೂ ಸಚಿವರಾಗಿದ್ದರು. ಮತ್ತು ದಲಿತರ ಹಿತಾಸಕ್ತಿಗಳಿಗೆ ಧಕ್ಕೆ ತರುವ ಹಲವು ಸಂಗತಿಗಳು ಆಗ ನಡೆದವು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಸಹ ಹಾಕಲಿಲ್ಲ. ಆದ್ದರಿಂದ ನಾವು ಸರ್ಕಾರದಿಂದ ಬೇರೆಯಾದೆವು” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು