AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಹಿಂದುತ್ವವಾದಿ ಎಂದ ರಾಹುಲ್ ಗಾಂಧಿ; ಸಂಜಯ್​ ರಾವತ್​ ಪ್ರತಿಕ್ರಿಯೆ ಹೀಗಿದೆ

ಪಾಕಿಸ್ತಾನವನ್ನು ರಚನೆ ಮಾಡಬೇಕು. ಪ್ರತ್ಯೇಕ ರಾಷ್ಟ್ರ ಬೇಕು ಎಂಬುದು ಜಿನ್ನಾ ಆಗ್ರಹವಾಗಿತ್ತು. ಅಂದು ಯಾರಾದರೂ ಅವರನ್ನು ಹತ್ಯೆ ಮಾಡಿದ್ದರೆ, ಅಂಥವರು ನಿಜಕ್ಕೂ ಹಿಂದುತ್ವವಾದಿ ಎನ್ನಿಸಿಕೊಳ್ಳುತ್ತಿದ್ದರು ಎಂದು ಸಂಜಯ್​ ರಾವತ್​ ಹೇಳಿದ್ದಾರೆ.

ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಹಿಂದುತ್ವವಾದಿ ಎಂದ ರಾಹುಲ್ ಗಾಂಧಿ; ಸಂಜಯ್​ ರಾವತ್​ ಪ್ರತಿಕ್ರಿಯೆ ಹೀಗಿದೆ
ಸಂಜಯ್​ ರಾವತ್​ ಮತ್ತು ರಾಹುಲ್​ ಗಾಂಧಿ
TV9 Web
| Updated By: Lakshmi Hegde|

Updated on: Jan 30, 2022 | 1:25 PM

Share

ಇಂದು ಮಹಾತ್ಮ ಗಾಂಧಿಯವರ 74ನೇ ಪುಣ್ಯತಿಥಿ (Gandhi Ji Death Anniversary). ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ,  ಒಬ್ಬ ಹಿಂದುತ್ವವಾದಿ (Hindutvavadi) ಮಹಾತ್ಮ ಗಾಂಧೀಜಿಯವರಿಗೆ ಗುಂಡು ಹೊಡೆದ, ಉಳಿದ ಹಿಂದುತ್ವವಾದಿಗಳು ಗಾಂಧೀಜಿ ಇನ್ನಿಲ್ಲ, ಅವರು ಮೃತರಾದರು ಎಂದು ಭಾವಿಸಿದ್ದಾರೆ/ ಹಾಗೇ, ಭಾವಿಸುತ್ತಿದ್ದಾರೆ. ಆದರೆ ಎಲ್ಲಿ ಸತ್ಯವಿರುತ್ತದೆಯೋ ಅಲ್ಲಿ ಬಾಪು ಸದಾ ಜೀವಂತವಾಗಿರುತ್ತಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಶಿವಸೇನೆ ಸಂಸದ ಸಂಜಯ್​ ರಾವತ್, ನಿಜವಾಗಿಯೂ ಹಿಂದುತ್ವವಾದಿಯಾದವರು ಪಾಕಿಸ್ತಾನ ಸಂಸ್ಥಾಪಕ ಮೊಹಮ್ಮದ್​ ಅಲಿ ಜಿನ್ನಾರನ್ನು ಶೂಟ್ ಮಾಡುತ್ತಾರೆಯೇ ಹೊರತು ಮಹಾತ್ಮಗಾಂಧಿಯವರನ್ನಲ್ಲ ಎಂದು ಹೇಳಿದ್ದಾರೆ. 

ಮಹಾತ್ಮ ಗಾಂಧಿಯವರನ್ನು 1948ರ ಜನವರಿ 30ರಂದು ಅಂದರೆ ಭಾರತಕ್ಕೆ ಸ್ವಾತಂತ್ರ್ಯ ಬಂದ ನಾಲ್ಕು ತಿಂಗಳಲ್ಲಿ ನಾಥೂರಾಂ ಗೋಡ್ಸೆ ಎಂಬಾತ ಗುಂಡು ಹೊಡೆದು ಹತ್ಯೆ ಮಾಡಿದ್ದಾನೆ. ದೆಹಲಿಯ ಬಿರ್ಲಾ ಹೌಸ್​​ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗಲೇ ಅವರಿಗೆ ಗುಂಡೇಟು ಬಿದ್ದಿದ್ದು. ನಾಥೂರಾಂ ಗೋಡ್ಸೆ ಹಿಂದು ಮಹಾಸಭಾದ ಸದಸ್ಯನಾಗಿದ್ದ ಎಂದು ಹೇಳಲಾಗಿದ್ದರೂ, ಗಾಂಧಿ ಹತ್ಯೆ ಸಮಯದಲ್ಲಿ ಗೋಡ್ಸೆ ಯಾವ ಸಂಘಟನೆಗೂ ಸೇರಿರಲಿಲ್ಲ ಎಂದೂ ಹೇಳಲಾಗುತ್ತದೆ. ಈ ಬಗ್ಗೆ ಸ್ವಲ್ಪ ಮಟ್ಟಿಗೆ ವಿವಾದ ಇದೆ. ರಾಹುಲ್​ ಗಾಂಧಿ ಕೂಡ ಇತ್ತೀಚೆಗೆ ಪದೇಪದೆ ಹಿಂದು-ಹಿಂದುತ್ವವಾದಿ ಮಾತುಗಳನ್ನು ಆಡುತ್ತಿದ್ದಾರೆ. ಇಂದು ಕೂಡ ಅದೇ ಧಾಟಿಯಲ್ಲಿ ಟ್ವೀಟ್ ಮಾಡಿದ್ದರು.

ಅದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಸೇನೆ ಸಂಸದ ಸಂಜಯ್​ ರಾವತ್​, ಪಾಕಿಸ್ತಾನವನ್ನು ರಚನೆ ಮಾಡಬೇಕು. ಪ್ರತ್ಯೇಕ ರಾಷ್ಟ್ರ ಬೇಕು ಎಂಬುದು ಜಿನ್ನಾ ಆಗ್ರಹವಾಗಿತ್ತು. ಅಂದು ಯಾರಾದರೂ ಅವರನ್ನು ಹತ್ಯೆ ಮಾಡಿದ್ದರೆ, ಅಂಥವರು ನಿಜಕ್ಕೂ ಹಿಂದುತ್ವವಾದಿ ಎನ್ನಿಸಿಕೊಳ್ಳುತ್ತಿದ್ದರು. ಅವರದ್ದು ಸತ್ಯವಾದ ದೇಶಭಕ್ತಿ ಎನ್ನಿಸಿಕೊಳ್ಳುತ್ತಿತ್ತು. ಆದರೆ ಅಂಥ ಯಾವುದೇ ಬೇಡಿಕೆಯಿಡದೆ, ದೇಶಕ್ಕಾಗಿ ದುಡಿದ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದು ನಿಜಕ್ಕೂ ಖೇದಕರ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಾಂಶುಪಾಲರ ನಕಲು ಸಹಿ ಮಾಡಿ 68 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ಗುಳಂ ಮಾಡಿದ ಗುಮಾಸ್ತ, ತಲೆ ಮರೆಸಿಕೊಂಡಿರುವ ಆರೋಪಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ