AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Politics: ಚಿಕ್ಕಮ್ಮನ್ನು ನೋಡಲು ಶರದ್​ ಪವಾರ್​ ಮನೆಗೆ ಬಂದ ಬಂಡಾಯ ನಾಯಕ ಅಜಿತ್​ ಪವಾರ್

ಮಹಾರಾಷ್ಟ್ರದಲ್ಲಿ ಭಾರೀ ಭಾರೀ ರಾಜಕೀಯ ಬೆಳವಣಿಗಳ ನಡುವೆ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ತನ್ನ ಚಿಕ್ಕಮ್ಮನ್ನು ನೋಡಲು ಬಂದಿದ್ದಾರೆ, ಅಂದರೆ ಶರದ್​​ ಪವಾರ್​ ಅವರ ಪತ್ನಿಯನ್ನು ನೋಡಲು ಶರದ್​ ಪವಾರ್​ ಅವರ ಮನೆಗೆ ಬಂದಿದ್ದಾರೆ

Maharashtra Politics: ಚಿಕ್ಕಮ್ಮನ್ನು ನೋಡಲು ಶರದ್​ ಪವಾರ್​ ಮನೆಗೆ ಬಂದ ಬಂಡಾಯ ನಾಯಕ ಅಜಿತ್​ ಪವಾರ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 15, 2023 | 11:24 AM

ಮುಂಬೈ, ಜುಲೈ 15:  ರಾಜಕೀಯವೇ ಬೇರೆ, ಸಂಬಂಧಗಳೇ ಬೇರೆ, ಒಂದೇ ಕುಟುಂಬದವರು ಬೇರೆ ಬೇರೆ ಪಕ್ಷದಲ್ಲಿರುಬಹುದು, ಆದರೆ ಕುಟುಂಬದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತಾರೆ, ರಾಜಕೀಯ ಸಿದ್ದಾಂತಗಳೇ ಬೇರೆ, ಸಂಬಂಧಗಳ ಒಗ್ಗಟು ಬೇರೆ ಎಂಬುದಕ್ಕೆ ಮಹಾರಾಷ್ಟ್ರ ರಾಜಕಾರಣ ಉದಾಹರಣೆ, ಮಹಾರಾಷ್ಟ್ರದಲ್ಲಿ ಭಾರೀ ಭಾರೀ ರಾಜಕೀಯ ಬೆಳವಣಿಗಳ ನಡುವೆ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ತನ್ನ ಚಿಕ್ಕಮ್ಮನ್ನು ನೋಡಲು ಬಂದಿದ್ದಾರೆ, ಅಂದರೆ ಶರದ್​​ ಪವಾರ್​ ಅವರ ಪತ್ನಿಯನ್ನು ನೋಡಲು ಶರದ್​ ಪವಾರ್​ ಅವರ ಮನೆಗೆ ಬಂದಿದ್ದಾರೆ ಎಂದು ಎನ್​​ಸಿಪಿ ಮೂಲಗಳು ತಿಳಿಸಿದೆ. ಮಹಾರಾಷ್ಟ್ರದ ರಾಜಕೀಯದಲ್ಲಿ ಮಹತ್ವ ಬೆಳವಣಿಗಳು ನಡೆದಿದೆ. ಶಿವಸೇನೆಯಲ್ಲಿಯೇ ಇದ್ದು ಏಕನಾಥ್ ಶಿಂಧೆ ಬಿಜೆಪಿ ಜತೆಗೆ ಸೇರಿ ಸರ್ಕಾರ ರಚನೆ ಮಾಡಿದರು, ನಂತರ ಇತ್ತಿಚೇಗೆ ಎನ್​​ಸಿಪಿ ಪಕ್ಷದ ನಾಯಕ ಅಜಿತ್​ ಪವಾರ್​ ತನ್ನ ಶಾಸಕರೊಂದಿಗೆ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿ, ಉಪಮುಖ್ಯಮಂತ್ರಿಯಾದರು, ಇವರು ರಾಜಕೀಯವಾಗಿ ಬಂಡಾಯವೆದ್ದರು, ಕುಟುಂಬದಲ್ಲಿ ಯಾವುದೇ ಕೋಪಗಳು ಇಲ್ಲ ಎಂಬುದನ್ನು ಅಜಿತ್​ ಪವಾರ್​ ತೋರಿದಂತಿದೆ.

ಹೌದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರ ಪತ್ನಿ ಪ್ರತಿಭಾ ಪವಾರ್ ಅವರು ಶುಕ್ರವಾರ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಕೈಗೆ ಸಂಬಂಧಿಸಿದಂತೆ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ ಎಂದು ಶರದ್ ಪವಾರ್ ಬಣದ ಸದಸ್ಯರೊಬ್ಬರು ತಿಳಿಸಿದ್ದಾರೆ. ಶರದ್​ ಪವಾರ್​ ಅವರ ಪತ್ನಿ ಪ್ರತಿಭಾ ಪವಾರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತನ್ನ ಚಿಕ್ಕಮ್ಮನ್ನು ನೋಡಲು ಎನ್‌ಸಿಪಿ ವರಿಷ್ಠರ ಅಧಿಕೃತ ನಿವಾಸ ಸಿಲ್ವರ್ ಓಕ್‌ಗೆ ಭೇಟಿ ನೀಡಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳ ನಡುವೆ ಶಿಂದೆ, ಫಡ್ನವಿಸ್ ಮಹತ್ವದ ಚರ್ಚೆ

ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪನ ವಿರುದ್ಧ ಬಂಡಾಯವೆದ್ದು, ಎನ್‌ಸಿಪಿಯನ್ನು ಒಡೆದು ಜುಲೈ 2 ರಂದು ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರಿದ ನಂತರ ಸಿಲ್ವರ್ ಓಕ್‌ಗೆ ಇದು ಮೊದಲ ಭೇಟಿಯಾಗಿದೆ. ಅಜಿತ್ ಪವಾರ್ ಅವರು ಚಿಕ್ಕಮ್ಮ ಪ್ರತಿಭಾ ಅವರಿಗೆ ತುಂಬಾ ಪ್ರೀತಿ ಮಗ ಎಂದು ಹೇಳಲಾಗಿದೆ. 2019ರಲ್ಲಿ ಅಜಿತ್​ ಅವಾರ್ ​ ಮತ್ತು ದೇವೇಂದ್ರ ಫಡ್ನವಿಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿದರು, ಆದರೆ ಅದು ಬಹುದಿನಗಳ ಇರಲಿಲ್ಲ, ಅಜಿತ್​ ಪವಾರ್​ ಅವರನ್ನು ಮತ್ತೆ ಎನ್​​ಸಿಪಿಗೆ ಮರಳಿ ತರುವಲ್ಲಿ ಪ್ರತಿಭಾ ಪವಾರ್​ ಅವರು ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗಿದೆ. ಎನ್‌ಸಿಪಿ ನಾಯಕರು ಪ್ರತಿಭಾ ಪವಾರ್​ ಅವರನ್ನು ‘ಕಾಕಿ’ ಎಂದು ಪ್ರೀತಿಯಿಂದ ಕರೆಯುತ್ತಾರೆ. ಪ್ರತಿಭಾ ಪವಾರ್ ಅವರನ್ನು ಪಕ್ಷದ ಮಾತೃಪ್ರಧಾನ ಎಂದು ನೋಡಲಾಗುತ್ತದೆ ಆದರೆ ಅವರು ಯಾವತ್ತೂ ರಾಜಕೀಯದಲ್ಲಿ ಸಕ್ರಿಯವಾಗಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ