AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಧವ್ ಠಾಕ್ರೆ ರಾಜೀನಾಮೆಯಿಂದ ಸಂತೋಷವಾಗಿಲ್ಲ: ಬಂಡಾಯ ಶಾಸಕ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ವಿಶ್ವಾಸಮತ ಯಾಚನೆಗೂ ಮುನ್ನವೇ ರಾಜೀನಾಮೆ ಘೋಷಿಸಿದಾಗ ಎಲ್ಲರ ಚಿತ್ತ ಬಿಜೆಪಿ ಹಾಗೂ ಬಂಡಾಯ ನಾಯಕರ ಮೇಲಿತ್ತು

ಉದ್ಧವ್ ಠಾಕ್ರೆ ರಾಜೀನಾಮೆಯಿಂದ ಸಂತೋಷವಾಗಿಲ್ಲ: ಬಂಡಾಯ ಶಾಸಕ
Deepak KesarkarImage Credit source: NDTV
Follow us
TV9 Web
| Updated By: ನಯನಾ ರಾಜೀವ್

Updated on: Jun 30, 2022 | 10:27 AM

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ವಿಶ್ವಾಸಮತ ಯಾಚನೆಗೂ ಮುನ್ನವೇ ರಾಜೀನಾಮೆ ಘೋಷಿಸಿದಾಗ ಎಲ್ಲರ ಚಿತ್ತ ಬಿಜೆಪಿ ಹಾಗೂ ಬಂಡಾಯ ನಾಯಕರ ಮೇಲಿತ್ತು. ಶಿಂಧೆ ಬಣದ ವಕ್ತಾರ ದೀಪಕ್ ಕೇಸರ್ಕರ್ ಮೊದಲ ಬಾರಿಗೆ ತಮ್ಮ ಪ್ರತಿಕ್ರಿಯೆ ನೀಡಿದ್ದು, ಎನ್‌ಡಿಟಿವಿಯೊಂದಿಗೆ ‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ರಾಜೀನಾಮೆ ನಮಗೆ ಸಂತೋಷದ ವಿಷಯವಲ್ಲ.

ನಾವು ಯಾವುದೇ ವಿಷಯವನ್ನು ಪ್ರಸ್ತಾಪಿಸಿದರೂ ಠಾಕ್ರೆಯವರು ಅದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಕಾಂಗ್ರೆಸ್ ಹಾಗೂ ಎನ್​ಸಿಪಿ ವಿರುದ್ಧ ಹೋರಾಡುವ ಸಂದರ್ಭದಲ್ಲಿ ನಮ್ಮ ನಾಯಕರ ಮೇಲೆಯೇ ಕೋಪಗೊಂಡಿದ್ದೆವು ಅದರಿಂದ ನಮಗೆ ಬೇಸರವಿದೆ ಎಂದರು.

ಎಂದಿಗೂ ಎನ್​ಸಿಪಿ ಹಾಗೂ ಸಂಜಯ್ ರಾವತ್ ಕೇಂದ್ರದ ವಿರುದ್ಧ ಕಿಡಿ ಕಾರುತ್ತಾ, ಕೇಂದ್ರ ಹಾಗೂ ರಾಜ್ಯದ ನಡುವೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದರು.

ಏಕನಾಥ್ ಶಿಂದೆಯವರಿಗೆ 50 ಮಂದಿ ಶಾಸಕರು ಬೆಂಬಲ ನೀಡಿದ್ದು, ಅದರಲ್ಲಿ 40 ಶಾಸಕರು ಶಿವಸೇನೆಯವರಾಗಿದ್ದಾರೆ. 8 ದಿನಗಳ ಹೋರಾಟದ ಬಳಿಕ ಇದೀಗ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೊದಲು ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಮುಖ್ಯಮಂತ್ರಿ ಯಾರೆಂದು ಶೀಘ್ರದಲ್ಲೇ ಏಕನಾಥ್ ಶಿಂಧೆ ಘೋಷಿಸಲಿದ್ದಾರೆ. ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಬೇಕೆ ಅಥವಾ ಬೇಡವೇ ಎಂಬುದು ಶಿಂಧೆ ಅವರಿಗೆ ಬಿಟ್ಟಿದ್ದು ಎಂದರು.

ಉದ್ಧವ್ ಠಾಕ್ರೆ ರಾಜೀನಾಮೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜತೆಗೆ ವಿಧಾನ ಪರಿಷತ್ತಿಗೂ ರಾಜೀನಾಮೆ ನೀಡಿದ್ದಾರೆ. ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರು ಬಹುಮತ ಸಾಬೀತು ಪಡಿಸುವ ಆದೇಶ ನೀಡುವಲ್ಲಿ ಆತುರ ತೋರಿಸಿದ್ದಾರೆ ಎಂದು ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (MVA) ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಈ ಬಗ್ಗೆ ಬುಧವಾರ ಸಂಜೆ 5 ಗಂಟೆಗೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ರಾತ್ರಿ 9 ಗಂಟೆೆಗೆ ತೀರ್ಪು ಪ್ರಕಟಿಸಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವಂತೆ ರಾಜ್ಯಪಾಲರ ಹೊರಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ ಠಾಕ್ರೆ ಸರ್ಕಾರಕ್ಕೆ ಹೇಳಿತ್ತು. ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ