AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್​​ ಕರೆಸಿಕೊಳ್ಳಿ, ಕೆನಡಾಕ್ಕೆ ಭಾರತ ಕಟ್ಟಾಜ್ಞೆ

ಭಾರತ ಮತ್ತು ಕೆನಡಾದ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ಮಧ್ಯೆ ಭಾರತ ಸರ್ಕಾರವು 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಕ್ಕೆ ಹೇಳಿದೆ. ಅಕ್ಟೋಬರ್​​ 10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳು ಕೆನಡಾಕ್ಕೆ ವಾಪಸ್ಸು ಕರೆಸಿಕೊಳ್ಳುವಂತೆ ಭಾರತ ಸರ್ಕಾರ ಹೇಳಿದೆ. ಇನ್ನು ಇದು ಭಾರತ ಕೆನಡಾದ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಕೆನಡಾ ಹೇಳಿದೆ.

ಅ.10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್​​ ಕರೆಸಿಕೊಳ್ಳಿ, ಕೆನಡಾಕ್ಕೆ ಭಾರತ ಕಟ್ಟಾಜ್ಞೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 03, 2023 | 11:04 AM

Share

ದೆಹಲಿ, ಅ.3: ಭಾರತ ಮತ್ತು ಕೆನಡಾ(India and Canada)  ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ಮಧ್ಯೆ ಭಾರತ ಸರ್ಕಾರವು 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಕ್ಕೆ ಹೇಳಿದೆ. ಅಕ್ಟೋಬರ್​​ 10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳು ಕೆನಡಾಕ್ಕೆ ವಾಪಸ್ಸು ಕರೆಸಿಕೊಳ್ಳುವಂತೆ ಭಾರತ ಸರ್ಕಾರ ಹೇಳಿದೆ. ಇನ್ನು ಇದು ಭಾರತ ಕೆನಡಾದ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಕೆನಡಾ ಹೇಳಿದೆ. ಸಿಖ್ಖ್​​​ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತ ಸರ್ಕಾರದ ಏಜೆಂಟ್​​ಗಳ ಕೈವಾಡ ಇದೆ ಎಂದು ಕೆನಡಾ ಆರೋಪಿಸಿತ್ತು. ಇದರ ಜತೆಗೆ ಈ ಘಟನೆಗೆ ಭಾರತವೇ ನೇರ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟಿನ್​​​ ಟ್ರೂಡ್​​​ ಆರೋಪಿಸಿರುವ ಕಾರಣ ಎರಡು ದೇಶಗಳ ನಡುವೆ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ.

ಈ ಘರ್ಷಣೆ ಪ್ರಾರಂಭವಾದ ದಿನದಿಂದ ಕೆನಡಾ ಭಾರತದ ಹಿರಿಯ ರಾಜತಾಂತ್ರಿ ಅಧಿಕಾರಿಯನ್ನು ಹೊರಗೆ ಹಾಕಿತ್ತು, ಇದಕ್ಕೆ ಪ್ರತಿಯಾಗಿ ಭಾರತವು ಕೂಡ ಕೆನಡಾ ರಾಜತಾಂತ್ರಿಕ ಅಧಿಕಾರಿಯನ್ನು ಭಾರತದಿಂದ ಹೋಗುವಂತೆ ತಿಳಿಸಿತ್ತು. ಇದರ ಜತೆಗೆ ಭಾರತ ಕೆನಾಡಿಯನ್ನರಿಗೆ ವೀಸಾವನ್ನು ರದ್ದು ಮಾಡಿತ್ತು. ಇದೀಗ ಭಾರತದಲ್ಲಿರುವ ಕೆನಡಾದ 40 ರಾಜತಾಂತ್ರಿರನ್ನು ವಾಪಸು ಕರೆಸಿಕೊಳ್ಳುವಂತೆ ಹೇಳಿದೆ.

ಇದನ್ನೂ ಓದಿ: 1980ರಿಂದಲೇ ಕೆನಡಾದೊಂದಿಗೆ ಸಂಘರ್ಷವಿದೆ; ಬ್ಲಿಂಕೆನ್, ಸುಲ್ಲಿವಾನ್‌ ಜತೆ ಮಾತನಾಡಿರುವೆ: ಜೈಶಂಕರ್

ಇನ್ನು ಭಾರತಕ್ಕೆ ಹೋಲಿಸಿದರೆ ಭಾರತದಲ್ಲಿ ಕೆನಡಾದ ರಾಜತಾಂತ್ರಿಕ ಅಧಿಕಾರಿಗಳು ಹೆಚ್ಚು ಇದ್ದರೆ. ಹಾಗಾಗಿ ಎರಡು ರಾಷ್ಟ್ರಗಳಲ್ಲಿ ಸಮಾನತೆ ಕಾಣುವ ದೃಷ್ಟಿಯಿಂದ ಈ ಕ್ರಮವನ್ನು ಅನುಸರಿಸಲಾಗಿದೆ ಎಂದು ಭಾರತ ಹೇಳಿದೆ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪಾಕಿಸ್ತಾನದ ಕೈವಾಡ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆನಡಾ ಉತ್ತರಿಸಿದ್ದು, ಇದು ಭಾರತದ ಕೆಲಸ ಎಂದು ಹೇಳಿದೆ. ಭಾರತದ ಮೇಲೆ ಆರೋಪ ಮಾಡಿದ ಕೆನಡಾಕ್ಕೆ ಬಿಜೆಪಿ ನಾಯಕ ತೇಜಿಂದರ್ ಪಾಲ್ ಸಿಂಗ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ನಿಜ್ಜರ್ ಸಲಿಂಗಕಾಮಿ ಮತ್ತು ಟ್ರೂಡೊ ಅವರನ್ನು ಇಷ್ಟಪಡುತ್ತಿದ್ದರು ಎಂದು ಹೇಳಿದ್ದಾರೆ.

2020ರಲ್ಲಿ ಭಾರತ ನಿಜ್ಜರ್​​ನ್ನು ಭಯೋತ್ಪಾದಕ ಎಂದು ಘೋಷಣೆ ಮಾಡಿತ್ತು. ಇದರ ನಂತರ ಜೂನ್​​ 18ರಂದು ಸರ್ರೆ ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ