AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್​​ ಕರೆಸಿಕೊಳ್ಳಿ, ಕೆನಡಾಕ್ಕೆ ಭಾರತ ಕಟ್ಟಾಜ್ಞೆ

ಭಾರತ ಮತ್ತು ಕೆನಡಾದ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ಮಧ್ಯೆ ಭಾರತ ಸರ್ಕಾರವು 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಕ್ಕೆ ಹೇಳಿದೆ. ಅಕ್ಟೋಬರ್​​ 10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳು ಕೆನಡಾಕ್ಕೆ ವಾಪಸ್ಸು ಕರೆಸಿಕೊಳ್ಳುವಂತೆ ಭಾರತ ಸರ್ಕಾರ ಹೇಳಿದೆ. ಇನ್ನು ಇದು ಭಾರತ ಕೆನಡಾದ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಕೆನಡಾ ಹೇಳಿದೆ.

ಅ.10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್​​ ಕರೆಸಿಕೊಳ್ಳಿ, ಕೆನಡಾಕ್ಕೆ ಭಾರತ ಕಟ್ಟಾಜ್ಞೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 03, 2023 | 11:04 AM

Share

ದೆಹಲಿ, ಅ.3: ಭಾರತ ಮತ್ತು ಕೆನಡಾ(India and Canada)  ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ಮಧ್ಯೆ ಭಾರತ ಸರ್ಕಾರವು 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಕ್ಕೆ ಹೇಳಿದೆ. ಅಕ್ಟೋಬರ್​​ 10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳು ಕೆನಡಾಕ್ಕೆ ವಾಪಸ್ಸು ಕರೆಸಿಕೊಳ್ಳುವಂತೆ ಭಾರತ ಸರ್ಕಾರ ಹೇಳಿದೆ. ಇನ್ನು ಇದು ಭಾರತ ಕೆನಡಾದ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಕೆನಡಾ ಹೇಳಿದೆ. ಸಿಖ್ಖ್​​​ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತ ಸರ್ಕಾರದ ಏಜೆಂಟ್​​ಗಳ ಕೈವಾಡ ಇದೆ ಎಂದು ಕೆನಡಾ ಆರೋಪಿಸಿತ್ತು. ಇದರ ಜತೆಗೆ ಈ ಘಟನೆಗೆ ಭಾರತವೇ ನೇರ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟಿನ್​​​ ಟ್ರೂಡ್​​​ ಆರೋಪಿಸಿರುವ ಕಾರಣ ಎರಡು ದೇಶಗಳ ನಡುವೆ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ.

ಈ ಘರ್ಷಣೆ ಪ್ರಾರಂಭವಾದ ದಿನದಿಂದ ಕೆನಡಾ ಭಾರತದ ಹಿರಿಯ ರಾಜತಾಂತ್ರಿ ಅಧಿಕಾರಿಯನ್ನು ಹೊರಗೆ ಹಾಕಿತ್ತು, ಇದಕ್ಕೆ ಪ್ರತಿಯಾಗಿ ಭಾರತವು ಕೂಡ ಕೆನಡಾ ರಾಜತಾಂತ್ರಿಕ ಅಧಿಕಾರಿಯನ್ನು ಭಾರತದಿಂದ ಹೋಗುವಂತೆ ತಿಳಿಸಿತ್ತು. ಇದರ ಜತೆಗೆ ಭಾರತ ಕೆನಾಡಿಯನ್ನರಿಗೆ ವೀಸಾವನ್ನು ರದ್ದು ಮಾಡಿತ್ತು. ಇದೀಗ ಭಾರತದಲ್ಲಿರುವ ಕೆನಡಾದ 40 ರಾಜತಾಂತ್ರಿರನ್ನು ವಾಪಸು ಕರೆಸಿಕೊಳ್ಳುವಂತೆ ಹೇಳಿದೆ.

ಇದನ್ನೂ ಓದಿ: 1980ರಿಂದಲೇ ಕೆನಡಾದೊಂದಿಗೆ ಸಂಘರ್ಷವಿದೆ; ಬ್ಲಿಂಕೆನ್, ಸುಲ್ಲಿವಾನ್‌ ಜತೆ ಮಾತನಾಡಿರುವೆ: ಜೈಶಂಕರ್

ಇನ್ನು ಭಾರತಕ್ಕೆ ಹೋಲಿಸಿದರೆ ಭಾರತದಲ್ಲಿ ಕೆನಡಾದ ರಾಜತಾಂತ್ರಿಕ ಅಧಿಕಾರಿಗಳು ಹೆಚ್ಚು ಇದ್ದರೆ. ಹಾಗಾಗಿ ಎರಡು ರಾಷ್ಟ್ರಗಳಲ್ಲಿ ಸಮಾನತೆ ಕಾಣುವ ದೃಷ್ಟಿಯಿಂದ ಈ ಕ್ರಮವನ್ನು ಅನುಸರಿಸಲಾಗಿದೆ ಎಂದು ಭಾರತ ಹೇಳಿದೆ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪಾಕಿಸ್ತಾನದ ಕೈವಾಡ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆನಡಾ ಉತ್ತರಿಸಿದ್ದು, ಇದು ಭಾರತದ ಕೆಲಸ ಎಂದು ಹೇಳಿದೆ. ಭಾರತದ ಮೇಲೆ ಆರೋಪ ಮಾಡಿದ ಕೆನಡಾಕ್ಕೆ ಬಿಜೆಪಿ ನಾಯಕ ತೇಜಿಂದರ್ ಪಾಲ್ ಸಿಂಗ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ನಿಜ್ಜರ್ ಸಲಿಂಗಕಾಮಿ ಮತ್ತು ಟ್ರೂಡೊ ಅವರನ್ನು ಇಷ್ಟಪಡುತ್ತಿದ್ದರು ಎಂದು ಹೇಳಿದ್ದಾರೆ.

2020ರಲ್ಲಿ ಭಾರತ ನಿಜ್ಜರ್​​ನ್ನು ಭಯೋತ್ಪಾದಕ ಎಂದು ಘೋಷಣೆ ಮಾಡಿತ್ತು. ಇದರ ನಂತರ ಜೂನ್​​ 18ರಂದು ಸರ್ರೆ ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ