AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ: ಜೆಡಿಯು ನಾಯಕ ಕೆ.ಸಿ.ತ್ಯಾಗಿ

ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಇದರಿಂದ ಬಿಹಾರದಲ್ಲಿ ಭಾರೀ ತೊಂದರೆಯಾಗಿದೆ. ಈ ಬಗ್ಗೆ ಲೋಕಸಭೆ ಚುನಾವಣೆ ಸಮಯದಲ್ಲಿ ಕಂಡು ಬಂದಿದೆ. ಮೊದಲು ಈ ಬಗ್ಗೆ ಯೋಚನೆ ಮಾಡಿ ಎಂದು ಹೇಳಿದ್ದಾರೆ. ಎನ್​​ಡಿಎಗೆ ಬೆಂಬಲ ನೀಡಿರುವ ನಿತೀಶ್ ಕುಮಾರ್​​ ಜೆಡಿಯು ಪಕ್ಷ, ಇದೀಗ ಈ ಸಲಹೆಯನ್ನು ಮೋದಿ ಸರ್ಕಾರಕ್ಕೆ ನೀಡಿದೆ.

ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ: ಜೆಡಿಯು ನಾಯಕ ಕೆ.ಸಿ.ತ್ಯಾಗಿ
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2024 | 2:50 PM

Share

ಬಿಹಾರ, ಜೂ.6: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂ.7 ಅಥವಾ 8ರಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ, ಎನ್​ಡಿಎ ಒಕ್ಕೂಟದ ಮೂಲಕ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಈಗಾಗಲೇ ರಾಷ್ಟ್ರಪತಿಗಳಿಗೆ ಮೋದಿ ನೇತೃತ್ವದ ಸರ್ಕಾರ ರಚನೆ ಮಾಡುವ ಬಗ್ಗೆ ಹಕ್ಕು ಮಂಡನೆ ಮಾಡಿದೆ. ಎನ್​ಡಿಎ ಸರ್ಕಾರ ರಚನೆಗೆ ನೀತಿಶ್ ಕುಮಾರ್​ ಮತ್ತು ಚಂದ್ರ ಬಾಬು ನಾಯ್ಡು ಅವರು ಕೂಡ ಬೆಂಬಲ ನೀಡಿದ್ದಾರೆ. ಮೋದಿ ಸರ್ಕಾರ ರಚನೆ ಮಾಡಲು ಇವರ ಬೆಂಬಲ ಅಗತ್ಯವು ಕೂಡ ಆಗಿತ್ತು. ಇದೀಗ ಇದರ ನಡುವೆ ಜೆಡಿಯು ನಾಯಕರೊಬ್ಬರು ಒಂದು ಅಪಸ್ವರವನ್ನು ಎತ್ತಿದೆ. ಹೌದು 2022ರಲ್ಲಿ ಮೋದಿ ಸರ್ಕಾರ ಪರಿಚಯ ಮಾಡಿದ ಅಗ್ನಿವೀರ್​​​​ ಯೋಜನೆಯನ್ನು ಮರುಪರಿಶೀಲನೆ ಮಾಡಬೇಕು ಎಂದು ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.

ಅಗ್ನಿಪಥ ಯೋಜನೆ ವಿರುದ್ಧ ಅಸಮಾಧಾನವಿದ್ದು, ಚುನಾವಣೆ ಸಂದರ್ಭದಲ್ಲಿ ಅದು ಗೊತ್ತಾಗಿದೆ. ಹಾಗಾಗಿ ಅಗ್ನಿಪಥ ಯೋಜನೆ ಬಗ್ಗೆ ಪರಾಮರ್ಶೆ ನಡೆಸುವ ಅಗತ್ಯವಿದೆ. ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಅದರ ಪರಿಣಾಮ ಚುನಾವಣೆಯಲ್ಲೂ ಕಂಡುಬಂದಿದೆ ಎಂದು ಹೇಳಿದ್ದಾರೆ. ಅಗ್ನಿಪಥ್ ಯೋಜನೆ ಪರಿಚಯಿಸಿದಾಗ, ಸಶಸ್ತ್ರ ಪಡೆಗಳ ವರ್ಗದಲ್ಲಿ ಈ ಬಗ್ಗೆ ಅಸಮಾಧಾನವಿತ್ತು.

ಇನ್ನು ಅಗ್ನಿವೀರ್​​​ಗೆ ನೇಮಕವಾದ ಸೈನಿಕರ ಕುಟುಂಬದವರು ಚುನಾವಣೆ ಸಮಯದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಆದ್ದರಿಂದ, ಈ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದರು. ಯುವಕರನ್ನು ಸಶಸ್ತ್ರ ಪಡೆಗಳತ್ತ ಒಲವು ಮೂಡಿಸಲು ಹಾಗೂ ರಕ್ಷಣಾ ಪಿಂಚಣಿ ಬಿಲ್​​ನ್ನು ಕಡಿಮೆ ಮಾಡಲು ಕೇಂದ್ರವು 2022 ರಲ್ಲಿ ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿತು.

ಇದನ್ನೂ ಓದಿ: ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ, ಈ ಇಬ್ಬರು ಬರುವುದು ಪಕ್ಕಾ

ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತದೆ. ಒಟ್ಟು ವಾರ್ಷಿಕ ನೇಮಕಾತಿಗಳಲ್ಲಿ, 25% ಮಾತ್ರ ಶಾಶ್ವತ ಆಯೋಗದ ಅಡಿಯಲ್ಲಿ ಇನ್ನೂ 15 ವರ್ಷಗಳವರೆಗೆ ಮುಂದುವರೆಯಲು ಅನುಮತಿಸಲಾಗಿದೆ. ಈ ಯೋಜನೆಯ ವಿರುದ್ಧ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!