ನೀವು ಕೊವಿಡ್​ನಿಂದ ಈಗಷ್ಟೇ ಚೇತರಿಸಿಕೊಂಡಿದ್ದೀರಾ? ದೀರ್ಘಕಾಲ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಭಾರತದ ಟಾಪ್ ವೈದ್ಯರು

ಕೊವಿಡ್-19 ಕಾಯಿಲೆಯಿಂದ ಬಳಲಿ, ಗುಣಕಂಡವರು ನಂತರದ ದಿನಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಕೊವಿಡ್​ನಿಂದ ಚೇತರಿಸಿಕೊಂಡವರು ದೀರ್ಘ ಕಾಲದವರೆಗೆ ವೈದ್ಯಕೀಯ ನಿಗಾವಣೆಯಲ್ಲಿರಬೇಕು ಎಂದು ಏಮ್ಸ್​ ವೈದ್ಯರು ಸಲಹೆ ಮಾಡಿದ್ದಾರೆ.

ನೀವು ಕೊವಿಡ್​ನಿಂದ ಈಗಷ್ಟೇ ಚೇತರಿಸಿಕೊಂಡಿದ್ದೀರಾ? ದೀರ್ಘಕಾಲ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಭಾರತದ ಟಾಪ್ ವೈದ್ಯರು
ಏಮ್ಸ್​ ನಿರ್ದೇಶಕ ರಣದೀಪ್ ಗುಲೇರಿಯಾ
Follow us
|

Updated on:May 24, 2021 | 9:10 PM

ದೆಹಲಿ: ಕೋವಿಡ್​ನಿಂದ ಚೇತರಿಸಿಕೊಂಡ ಸಾಕಷ್ಟು ರೋಗಿಗಳಲ್ಲಿ ಮತ್ತೆಮತ್ತೆ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಸೋಂಕಿತರ ಚೇತರಿಕೆ ಪ್ರಮಾಣ ಹೆಚ್ಚಾದಂತೆ ಕೊವಿಡ್ ನಂತರದ ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಇದನ್ನು ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ರೂಪುಗೊಳ್ಳಬೇಕಿದೆ ಎಂದು ಅಖಿಲ ಭಾರತ ವೈದ್ಯಕೀಯ ಶಿಕ್ಷಣ ಸಂಸ್ಥೆಯ (All India of Medical Sciences – AIIMS) ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ.

ಕೊವಿಡ್-19 ಕಾಯಿಲೆಯಿಂದ ಬಳಲಿ, ಗುಣಕಂಡವರು ನಂತರದ ದಿನಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಕೊವಿಡ್​ನಿಂದ ಚೇತರಿಸಿಕೊಂಡವರು ದೀರ್ಘ ಕಾಲದವರೆಗೆ ವೈದ್ಯಕೀಯ ನಿಗಾವಣೆಯಲ್ಲಿರಬೇಕು. ಕೊರೊನಾ ಸೋಂಕಿನಿಂದ ಗುಣಹೊಂದಿದ ಹಲವು ರೋಗಿಗಳಲ್ಲಿ ಕೊರೊನಾ ವೈರಸ್ ಸಂಬಂಧಿತ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಅವುಗಳನ್ನು ನಿರ್ಲಕ್ಷಿಸದೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಕೊವಿಡ್​ನಿಂದ ಚೇತರಿಸಿಕೊಂಡ 4ರಿಂದ 12 ವಾರಗಳಲ್ಲಿ ಸೋಂಕಿನ ಲಕ್ಷಣಗಳು ಮತ್ತೆ ಕಾಣಿಸಿಕೊಂಡರೆ, ಅಂಥವರನ್ನು ಸೋಂಕಿನಿಂದ ಇನ್ನೂ ಪೂರ್ಣ ಗುಣಹೊಂದಿಲ್ಲದವರು (ಪೋಸ್ಟ್​ ಅಕ್ಯೂಟ್ ಕೊವಿಡ್ ಸಿಂಡ್ರೋಮ್) ಎಂದು ಪರಿಗಣಿಸಲಾಗುತ್ತದೆ. ಅವರಿಗೆ ಚಿಕಿತ್ಸೆ ನೀಡುವ ರೀತಿಯನ್ನೂ ಇದಕ್ಕೆ ಅನುಗುಣವಾಗಿಯೇ ಯೋಜಿಸಬೇಕಾಗುತ್ತದೆ. ಕೊವಿಡ್​ನಿಂದ ಗುಣಹೊಂದಿದ 12 ವಾರಗಳಿಗೂ ಹೆಚ್ಚು ಕಾಲದ ನಂತರ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೆ ಪೋಸ್ಟ್ ಕೊವಿಡ್ ಸಿಂಡ್ರೋಮ್ ಅಥವಾ ನಾನ್ ಕೊವಿಡ್ ಎಂದು ಕರೆಯಲಾಗುತ್ತದೆ ಎಂದು ಡಾ.ಗುಲೇರಿಯಾ ಹೇಳಿದ್ದಾರೆ.

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಉಸಿರಾಟದ ಸಮಸ್ಯೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದೆ. ಶ್ವಾಸಕೋಶಗಳ ಸಾಮಾನ್ಯ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆಗಳು ಮತ್ತು ಅವುಗಳ ಸಾಮರ್ಥ್ಯ ಕಡಿಮೆಯಾಗಿರುವುದು ಕಂಡುಬರುತ್ತದೆ. ಕೆಲವು ವಾರಗಳವರೆಗೆ ಕೆಮ್ಮು, ಎದೆನೋವು, ಉದ್ವಿಗ್ನತೆ ಮತ್ತು ನಾಡಿಮಿಡಿತದ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ಹಿರಿಯ ವೈದ್ಯರು ಹೇಳಿದರು. ಕೊವಿಡ್​ನಿಂದ ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ದೇಹದ ರೋಗ ನಿರೋಧಕ ಶಕ್ತಿಯಲ್ಲಿ ಬದಲಾವಣೆ ಆಗಿರುವುದು ಮತ್ತು ಕೆಲ ಜೀವಕೋಶಗಳಿಗೆ ಧಕ್ಕೆಯಾಗಿರುವುದರಿಂದ ದೇಹ ಹೀಗೆ ಪ್ರತಿಕ್ರಿಯಿಸಬಹುದು ಎಂದು ಅವರು ವಿಶ್ಲೇಷಿಸಿದ್ದಾರೆ.

ಕೆಲ ರೋಗಿಗಳಲ್ಲಿ ಕೀಲು ನೋವು, ಸುಸ್ತು, ತಲೆನೋವು ಕಾಣಿಸಿಕೊಳ್ಳಬಹುದು. ಇವಕ್ಕೆಲ್ಲ ಕೊವಿಡ್ ಕಾರಣವಾಗಿದ್ದರೂ, ಲಕ್ಷಣಗಳಿಗೆ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ಕೆಲ ರೋಗಿಗಳಲ್ಲಿ ಏಕಾಗ್ರತೆಯ ಕೊರತೆ ಮತ್ತು ಖಿನ್ನತೆ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಚಿಕಿತ್ಸೆಗಾಗಿ ಪೋಸ್ಟ್​ ಕೊವಿಡ್ ಕ್ಲಿನಿಕ್​ಗಳನ್ನು ಆರಂಭಿಸಬೇಕು. ಕೊವಿಡ್​ನಿಂದ ಚೇತರಿಸಿಕೊಳ್ಳುವವರ ಸಂಖ್ಯೆ ಹೆಚ್ಚಾದಂತೆ ಪೋಸ್ಟ್​ ಕೊವಿಡ್ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತದೆ. ಅಂಥವನ್ನು ನಿರ್ವಹಿಸಲು ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ಭಾರತದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆಯು ಹೊಸದಾಗಿ ವರದಿಯಾಗುವ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದೆ. ಸತತ 11ನೇ ದಿನ ಈ ಆಶಾದಾಯಕ ಬೆಳವಣಿಗೆ ವರದಿಯಾಗಿದೆ. ಟೆಸ್ಟಿಂಗ್ ವೇಳೆ ಪಾಸಿಟಿವ್ ವರದಿಯಾಗುವ ಪ್ರಮಾಣ ಶೇ 8.09ಕ್ಕೆ ಬಂದಿದೆ. ಕಳೆದ 24 ಗಂಟೆಗಳಲ್ಲಿ 3,02,544 ಮಂದಿ ಕೊವಿಡ್-19ರಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ 2,37,28,011 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಚೇತರಿಕೆ ಪ್ರಮಾಣವು ಶೇ 88.69ಕ್ಕೆ ಮುಟ್ಟಿದೆ.

ಭಾರತದಲ್ಲಿ ವರದಿಯಾಗುತ್ತಿರುವ ಹೊಸ ಸೋಂಕು ಪ್ರಕರಣಗಳ ಸಂಖ್ಯೆ 2,22,315ಕ್ಕೆ ಮುಟ್ಟಿದೆ. ಇದು ಕಳೆದ 38 ದಿನಗಳಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದ್ದಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,67,52,447. ಸೋಂಕಿನಿಂದ ಈವರೆಗೆ ಒಟ್ಟು 303,720 ಮಂದಿ ಮೃತಪಟ್ಟಿದ್ದಾರೆ. ಅಮೆರಿಕ ಮತ್ತು ಬ್ರೆಝಿಲ್ ನಂತರ ಅತಿಹೆಚ್ಚು ಜನರು ಭಾರತದಲ್ಲಿ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ಒಟ್ಟು 4454 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

(Recovered Covid patients need longer care opines AIIMS director dr Randeep Guleria)

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಇದನ್ನೂ ಓದಿ: Explainer: ಭಾರತದ ರಾಜ್ಯಗಳಿಗೆ ನೇರ ಲಸಿಕೆ ಪೂರೈಕೆಗೆ ಫೈಜರ್, ಮಾಡೆರ್ನಾ ನಕಾರ; ಕೊವಿಡ್ ವಿರುದ್ಧದ ಹೋರಾಟಕ್ಕೆ ಮತ್ತೊಂದು ವಿಘ್ನ

Published On - 9:06 pm, Mon, 24 May 21

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ