AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಕೆಂಪು ಬೆಂಡೆ ಗೊತ್ತಾ?-ಆರೋಗ್ಯಕ್ಕೆ ತುಂಬ ಒಳ್ಳೆಯದಾದ ಈ ತರಕಾರಿ ಬೆಲೆ ಕಡಿಮೆ ಅಲ್ಲ !

Red Okra: ಹಸಿರು ಬೆಂಡೆಕಾಯಿ ಕೂಡ ಆರೋಗ್ಯಕ್ಕೆ ತುಂಬ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಈ ಕೆಂಪು ಬೆಂಡೆ ಮತ್ತೂ ಒಳ್ಳೆಯದು ಎನ್ನುತ್ತಾರೆ ಮಿಸ್ರಿಲಾಲ್ ರಜಪೂತ್.

ನಿಮಗೆ ಕೆಂಪು ಬೆಂಡೆ ಗೊತ್ತಾ?-ಆರೋಗ್ಯಕ್ಕೆ ತುಂಬ ಒಳ್ಳೆಯದಾದ ಈ ತರಕಾರಿ ಬೆಲೆ ಕಡಿಮೆ ಅಲ್ಲ !
ಕೆಂಪು ಬೆಂಡೆ
TV9 Web
| Edited By: |

Updated on: Sep 06, 2021 | 4:47 PM

Share

ಬೆಂಡೆಕಾಯಿ (LadyFinger) ಎಂದಾಕ್ಷಣ ಹಸಿರು ಬಣ್ಣದಲ್ಲಿ ಇರುತ್ತದೆ ಎಂದು ನಮ್ಮ ಅನಿಸಿಕೆ. ಆದರೆ ಮಧ್ಯಪ್ರದೇಶ (Madhya Pradesh) ದ ರೈತರೊಬ್ಬರು ಕೆಂಪು ಬೆಂಡೆಕಾಯಿ (Red Ladyfinger, Kashi Lalima) ಬೆಳೆಯುತ್ತಿದ್ದಾರೆ. ಭೋಪಾಲ್​ನ ಖಜೂರಿ ಕಲಾನ್ ಪ್ರದೇಶದ ಮಿಸ್ರಿಲಾಲ್​ ರಜಪೂತ್​ ತೋಟವೀಗ ಕೆಂಪು ಬೆಂಡೆಯ ಮೂಲಕ ಜನರ ಆಕರ್ಷಣೆಯ ಕೇಂದ್ರವಾಗಿದೆ. ತೋಟದಲ್ಲಿ ಕೆಂಪು ಬೆಂಡೆ ಬೀಜಗಳನ್ನು ಹಾಕಿದ್ದ ಮಿಸ್ರಿಲಾಲ್​ ಕೇವಲ 40ದಿನಗಳಲ್ಲಿ ಗಿಡ ಬೆಳೆದು, ಕಾಯಿಯೂ ಬಿಟ್ಟಿದೆ ಎಂದು ತಿಳಿಸಿದ್ದಾರೆ.

ಆರೋಗ್ಯಕ್ಕೆ ತುಂಬ ಒಳ್ಳೆಯದು ಹಸಿರು ಬೆಂಡೆಕಾಯಿ ಕೂಡ ಆರೋಗ್ಯಕ್ಕೆ ತುಂಬ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಈ ಕೆಂಪು ಬೆಂಡೆ ಮತ್ತೂ ಒಳ್ಳೆಯದು ಎನ್ನುತ್ತಾರೆ ಮಿಸ್ರಿಲಾಲ್ ರಜಪೂತ್. ಹಸಿರು ಬೆಂಡೆಕಾಯಿಯಲ್ಲಿ ಇರುವುದಕ್ಕಿಂತಲೂ ಜಾಸ್ತಿ ಪೌಷ್ಟಿಕಾಂಶ ಕೆಂಪು ಬೆಂಡೆಯಲ್ಲಿ ಇದೆ. ಅದರಲ್ಲೂ ರಕ್ತದೊತ್ತಡ ಮತ್ತು ಹೃದಯಸಂಬಂಧಿ ಕಾಯಿಲೆ, ಡಯಾಬಿಟಿಸ್​, ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೆಂಪು ಬೆಂಡೆಕಾಯಿ ಹೇಳಿಮಾಡಿಸಿದ ತರಕಾರಿ ಎಂದು ಹೇಳಿದ್ದಾರೆ.

ಭರ್ಜರಿ ಬೆಲೆ ಕೆಂಪು ಬೆಂಡೆಕಾಯಿ ಬೆಲೆ ಸ್ವಲ್ಪ ಜಾಸ್ತಿಯೇ ಇದೆ. ಮಿಸ್ರಿಲಾಲ್​ ರಜಪೂತ್ ಹೇಳುವ ಪ್ರಕಾರ ಅವರು 250 ಗ್ರಾಂ. ಕೆಂಪು ಬೆಂಡೆಯನ್ನು 75-80 ರೂಪಾಯಿಗೆ ಮಾರಾಟ ಮಾಡುತ್ತಾರೆ. ಹಾಗೇ, 500 ಗ್ರಾಂ.ಗೆ 300-400 ರೂ.ನಿಗದಿ ಮಾಡಿದ್ದಾರೆ. ಅಲ್ಲಿಗೆ 1 ಕೆಜಿ ಕೆಂಪುಬೆಂಡೆಯನ್ನು ಅವರ ಬಳಿ ಕೊಂಡರೆ 800 ರೂ. ನೀಡಬೇಕಾಗುತ್ತದೆ. ಮಾರುಕಟ್ಟೆ ಬೆಲೆ ಇರುವುದೇ ಹೀಗೆ ಎನ್ನುತ್ತಾರೆ ಮಿಸ್ರಿಲಾಲ್​. ತಾವು ಈ ಕೆಂಪು ಬೆಂಡೆ ಬೆಳೆಸಲು ಸ್ವಲ್ಪವೂ ವಿಷಕಾರಿ ಕ್ರಿಮಿ ನಾಶಕ ಬಳಸಲಿಲ್ಲ ಎಂದಿರುವ ಅವರು, ಒಂದು ಎಕರೆ ಜಾಗದಲ್ಲಿ ಕನಿಷ್ಠ 40-50 ಕ್ವಿಂಟಲ್​ ಮತ್ತು ಗರಿಷ್ಠ 70-80 ಕ್ವಿಂಟಲ್​ ಕೆಂಪು ಬೆಂಡೆ ಬೆಳೆಯಬಹುದು ಎಂದು ತಿಳಿಸಿದ್ದಾರೆ.

ಬೀಜ ಕೊಂಡಿದ್ದು ಎಲ್ಲಿಂದ? ತಾನು ಈ ಕೆಂಪು ಬೆಂಡೆಯ ಬೀಜವನ್ನು ವಾರಾಣಸಿಯ ಕೃಷಿ ಸಂಶೋಧನಾ ಸಂಸ್ಥೆ (ಇಂಡಿಯನ್​ ಇನ್​ಸ್ಟಿಟ್ಯೂಟ್ ಆಫ್​ ವೆಜಿಟೆಬಲ್​ ರಿಸರ್ಚ್​ ಸಂಸ್ಥೆ)ಯಿಂದ ಒಂದು ಕೆಜಿಯಷ್ಟು ತಂದಿದ್ದೆ ಎಂದು ರಜಪೂತ್ ತಿಳಿಸಿದ್ದಾರೆ. ಅಂದಹಾಗೆ ಈ ರಿಸರ್ಚ್ ಸಂಸ್ಥೆ ಭಾರತೀಯ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತದೆ. 23 ವರ್ಷಗಳ ಸಂಶೋಧನೆ ನಂತರ 2019ರಲ್ಲಿ ಈ ಕೆಂಪು ಬೆಂಡೆಯನ್ನು ಅಭಿವೃದ್ಧಿಪಡಿಸಿದೆ. ಇದಕ್ಕೆ ಕಾಶಿ ಲಲಿಮಾ ಎಂದು ಅಧಿಕೃತವಾಗಿ ನಾಮಕರಣ ಮಾಡಿದೆ.

ಇದನ್ನೂ ಓದಿ: ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ

ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ; TOCIRA ಔಷಧ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!