AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಕೆಂಪು ಬೆಂಡೆ ಗೊತ್ತಾ?-ಆರೋಗ್ಯಕ್ಕೆ ತುಂಬ ಒಳ್ಳೆಯದಾದ ಈ ತರಕಾರಿ ಬೆಲೆ ಕಡಿಮೆ ಅಲ್ಲ !

Red Okra: ಹಸಿರು ಬೆಂಡೆಕಾಯಿ ಕೂಡ ಆರೋಗ್ಯಕ್ಕೆ ತುಂಬ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಈ ಕೆಂಪು ಬೆಂಡೆ ಮತ್ತೂ ಒಳ್ಳೆಯದು ಎನ್ನುತ್ತಾರೆ ಮಿಸ್ರಿಲಾಲ್ ರಜಪೂತ್.

ನಿಮಗೆ ಕೆಂಪು ಬೆಂಡೆ ಗೊತ್ತಾ?-ಆರೋಗ್ಯಕ್ಕೆ ತುಂಬ ಒಳ್ಳೆಯದಾದ ಈ ತರಕಾರಿ ಬೆಲೆ ಕಡಿಮೆ ಅಲ್ಲ !
ಕೆಂಪು ಬೆಂಡೆ
TV9 Web
| Edited By: |

Updated on: Sep 06, 2021 | 4:47 PM

Share

ಬೆಂಡೆಕಾಯಿ (LadyFinger) ಎಂದಾಕ್ಷಣ ಹಸಿರು ಬಣ್ಣದಲ್ಲಿ ಇರುತ್ತದೆ ಎಂದು ನಮ್ಮ ಅನಿಸಿಕೆ. ಆದರೆ ಮಧ್ಯಪ್ರದೇಶ (Madhya Pradesh) ದ ರೈತರೊಬ್ಬರು ಕೆಂಪು ಬೆಂಡೆಕಾಯಿ (Red Ladyfinger, Kashi Lalima) ಬೆಳೆಯುತ್ತಿದ್ದಾರೆ. ಭೋಪಾಲ್​ನ ಖಜೂರಿ ಕಲಾನ್ ಪ್ರದೇಶದ ಮಿಸ್ರಿಲಾಲ್​ ರಜಪೂತ್​ ತೋಟವೀಗ ಕೆಂಪು ಬೆಂಡೆಯ ಮೂಲಕ ಜನರ ಆಕರ್ಷಣೆಯ ಕೇಂದ್ರವಾಗಿದೆ. ತೋಟದಲ್ಲಿ ಕೆಂಪು ಬೆಂಡೆ ಬೀಜಗಳನ್ನು ಹಾಕಿದ್ದ ಮಿಸ್ರಿಲಾಲ್​ ಕೇವಲ 40ದಿನಗಳಲ್ಲಿ ಗಿಡ ಬೆಳೆದು, ಕಾಯಿಯೂ ಬಿಟ್ಟಿದೆ ಎಂದು ತಿಳಿಸಿದ್ದಾರೆ.

ಆರೋಗ್ಯಕ್ಕೆ ತುಂಬ ಒಳ್ಳೆಯದು ಹಸಿರು ಬೆಂಡೆಕಾಯಿ ಕೂಡ ಆರೋಗ್ಯಕ್ಕೆ ತುಂಬ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಈ ಕೆಂಪು ಬೆಂಡೆ ಮತ್ತೂ ಒಳ್ಳೆಯದು ಎನ್ನುತ್ತಾರೆ ಮಿಸ್ರಿಲಾಲ್ ರಜಪೂತ್. ಹಸಿರು ಬೆಂಡೆಕಾಯಿಯಲ್ಲಿ ಇರುವುದಕ್ಕಿಂತಲೂ ಜಾಸ್ತಿ ಪೌಷ್ಟಿಕಾಂಶ ಕೆಂಪು ಬೆಂಡೆಯಲ್ಲಿ ಇದೆ. ಅದರಲ್ಲೂ ರಕ್ತದೊತ್ತಡ ಮತ್ತು ಹೃದಯಸಂಬಂಧಿ ಕಾಯಿಲೆ, ಡಯಾಬಿಟಿಸ್​, ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೆಂಪು ಬೆಂಡೆಕಾಯಿ ಹೇಳಿಮಾಡಿಸಿದ ತರಕಾರಿ ಎಂದು ಹೇಳಿದ್ದಾರೆ.

ಭರ್ಜರಿ ಬೆಲೆ ಕೆಂಪು ಬೆಂಡೆಕಾಯಿ ಬೆಲೆ ಸ್ವಲ್ಪ ಜಾಸ್ತಿಯೇ ಇದೆ. ಮಿಸ್ರಿಲಾಲ್​ ರಜಪೂತ್ ಹೇಳುವ ಪ್ರಕಾರ ಅವರು 250 ಗ್ರಾಂ. ಕೆಂಪು ಬೆಂಡೆಯನ್ನು 75-80 ರೂಪಾಯಿಗೆ ಮಾರಾಟ ಮಾಡುತ್ತಾರೆ. ಹಾಗೇ, 500 ಗ್ರಾಂ.ಗೆ 300-400 ರೂ.ನಿಗದಿ ಮಾಡಿದ್ದಾರೆ. ಅಲ್ಲಿಗೆ 1 ಕೆಜಿ ಕೆಂಪುಬೆಂಡೆಯನ್ನು ಅವರ ಬಳಿ ಕೊಂಡರೆ 800 ರೂ. ನೀಡಬೇಕಾಗುತ್ತದೆ. ಮಾರುಕಟ್ಟೆ ಬೆಲೆ ಇರುವುದೇ ಹೀಗೆ ಎನ್ನುತ್ತಾರೆ ಮಿಸ್ರಿಲಾಲ್​. ತಾವು ಈ ಕೆಂಪು ಬೆಂಡೆ ಬೆಳೆಸಲು ಸ್ವಲ್ಪವೂ ವಿಷಕಾರಿ ಕ್ರಿಮಿ ನಾಶಕ ಬಳಸಲಿಲ್ಲ ಎಂದಿರುವ ಅವರು, ಒಂದು ಎಕರೆ ಜಾಗದಲ್ಲಿ ಕನಿಷ್ಠ 40-50 ಕ್ವಿಂಟಲ್​ ಮತ್ತು ಗರಿಷ್ಠ 70-80 ಕ್ವಿಂಟಲ್​ ಕೆಂಪು ಬೆಂಡೆ ಬೆಳೆಯಬಹುದು ಎಂದು ತಿಳಿಸಿದ್ದಾರೆ.

ಬೀಜ ಕೊಂಡಿದ್ದು ಎಲ್ಲಿಂದ? ತಾನು ಈ ಕೆಂಪು ಬೆಂಡೆಯ ಬೀಜವನ್ನು ವಾರಾಣಸಿಯ ಕೃಷಿ ಸಂಶೋಧನಾ ಸಂಸ್ಥೆ (ಇಂಡಿಯನ್​ ಇನ್​ಸ್ಟಿಟ್ಯೂಟ್ ಆಫ್​ ವೆಜಿಟೆಬಲ್​ ರಿಸರ್ಚ್​ ಸಂಸ್ಥೆ)ಯಿಂದ ಒಂದು ಕೆಜಿಯಷ್ಟು ತಂದಿದ್ದೆ ಎಂದು ರಜಪೂತ್ ತಿಳಿಸಿದ್ದಾರೆ. ಅಂದಹಾಗೆ ಈ ರಿಸರ್ಚ್ ಸಂಸ್ಥೆ ಭಾರತೀಯ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತದೆ. 23 ವರ್ಷಗಳ ಸಂಶೋಧನೆ ನಂತರ 2019ರಲ್ಲಿ ಈ ಕೆಂಪು ಬೆಂಡೆಯನ್ನು ಅಭಿವೃದ್ಧಿಪಡಿಸಿದೆ. ಇದಕ್ಕೆ ಕಾಶಿ ಲಲಿಮಾ ಎಂದು ಅಧಿಕೃತವಾಗಿ ನಾಮಕರಣ ಮಾಡಿದೆ.

ಇದನ್ನೂ ಓದಿ: ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ

ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ; TOCIRA ಔಷಧ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ