AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕದವರು ಸೆರೆಹಿಡಿದ ರೀತಿ ಮುಂಬೈ ದಾಳಿ ಮಾಸ್ಟರ್​ಮೈಂಡನ್ನೂ ಹಿಡಿಯಿರಿ: ಒವೈಸಿ ಆಗ್ರಹ

Asaduddin Owaisi asks PM Modi to capture Mumbai Attack Mastermind in Pakistan: ಅಮೆರಿಕದ ಮಿಲಿಟರಿ ಪಡೆಗಳು ವೆನಿಜುವೆಲಾ ಅಧ್ಯಕ್ಷರನ್ನು ಹಿಡಿದ ರೀತಿಯಲ್ಲಿ ಮುಂಬೈ ದಾಳಿಯ ಸಂಚುಕೋರರನ್ನು ಹಿಡಿಯಬೇಕು ಎಂದು ಒವೈಸಿ ಒತ್ತಾಯಿಸಿದ್ದಾರೆ. ಭಾರತವು ತನ್ನ ಸೇನೆಯನ್ನು ಪಾಕಿಸ್ತಾನಕ್ಕೆ ನುಗ್ಗಿಸಿ, ಉಗ್ರ ಹಫೀಜ್​ನನ್ನಾಗಲೀ, ಲಷ್ಕರೆಯ ರಕ್ಕಸರನ್ನೇ ಆಗಲೀ ಸೆರೆಹಿಡಿಯಬೇಕು ಎಂದಿದ್ದಾರೆ. ಟ್ರಂಪ್​ಗೆ ಸಾಧ್ಯವಾಗುತ್ತೆಂದಾದರೆ ಮೋದಿಜಿಗೂ ಸಾಧ್ಯ ಎಂದು ಅಸಾದುದ್ದೀನ್ ವ್ಯಂಗ್ಯ ಕೂಡ ಮಾಡಿದ್ದಾರೆ.

ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕದವರು ಸೆರೆಹಿಡಿದ ರೀತಿ ಮುಂಬೈ ದಾಳಿ ಮಾಸ್ಟರ್​ಮೈಂಡನ್ನೂ ಹಿಡಿಯಿರಿ: ಒವೈಸಿ ಆಗ್ರಹ
ಅಸಾದುದ್ದೀನ್ ಒವೈಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 04, 2026 | 7:56 PM

Share

ನವದೆಹಲಿ, ಜನವರಿ 4: ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ (Nocolas Maduro) ಅವರನ್ನು ಅಮೆರಿಕದ ಭದ್ರತಾ ಪಡೆಗಳು ಶನಿವಾರ ಬೆಳಗ್ಗೆ ಸೆರೆಹಿಡಿದಿರುವ ಘಟನೆಗೆ ಜಾಗತಿಕವಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕದಲ್ಲಿರುವ ಪರಿಸ್ಥಿತಿ ಮತ್ತು ಬೆಳವಣಿಗೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ (Asaduddin Owaisi) ಅವರು ನಿಲೋಲಾಸ್ ಮಡುರೊ ಬಂಧಿಸಿದ ರೀತಿಯಲ್ಲೇ 2009ರ ಮುಂಬೈ ದಾಳಿ ಘಟನೆಯ ಸಂಚುಕೋರರನ್ನೂ ಸೆರೆ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ.

ಚುನಾವಣಾ ಸಮಾವೇಶವೊಂದರಲ್ಲಿ ಭಾಷಣ ಮಾಡುತ್ತಿದ್ದ ಒವೈಸಿ, ಅಮೆರಿಕದವರು ವೆನಿಜುವೆಲಾ ಮೇಲೆ ಏರ್ ಸ್ಟ್ರೈಕ್ ಮಾಡಿ ಅದರ ಅಧ್ಯಕ್ಷ ನಿಕೋಲಾಸ್ ಮಡುರೊ ಅವರನ್ನು ಸೆರೆಹಿಡಿದಿದೆ. ಆದರೆ, ಮುಂಬೈ ದಾಳಿ ಮಾಸ್ಟರ್​ಮೈಡ್​ಗಳನ್ನು ಅದೇ ರೀತಿ ಭಾರತಕ್ಕೆ ಸೆರೆಹಿಡಿಯಲು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತೈಲಸಮೃದ್ಧ ವೆನಿಜುವೆಲಾ ಮೇಲೆ ಅಮೆರಿಕ ದಾಳಿ; ಭಾರತಕ್ಕೆ ಎಷ್ಟು ನಷ್ಟ?

‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪಡೆಗಳು ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊರನ್ನು ಅವರ ದೇಶದಲ್ಲೇ ಸೆರೆ ಹಿಡಿದು ಅಮೆರಿಕಕ್ಕೆ ಕರೆದೊಯ್ದಿದ್ದಾರೆ. ವೆನಿಜುವೆಲಾ ಅಧ್ಯಕ್ಷರನ್ನು ಅವರ ದೇಶದಿಂದಲೇ ಟ್ರಂಪ್ ಅಪಹರಿಸಬಲ್ಲರೆಂದರೆ ನೀವು ಕೂಡ ಪಾಕಿಸ್ತಾನಕ್ಕೆ ಹೋಗಿ ಮುಂಬೈ ಉಗ್ರ ದಾಳಿ ಘಟನೆಯ ಮಾಸ್ಟರ್​ಮೈಂಡ್​ನನ್ನೂ ಹಿಡಿದು ಭಾರತಕ್ಕೆ ತರಬಹುದಲ್ಲ’ ಎಂದು ಹೈದರಾಬಾದ್​ನ ಸಂಸದರಾದ ಅವರು ಒತ್ತಾಯಿಸಿದ್ದಾರೆ.

‘ಮೋದಿಜಿ, ಪಾಕಿಸ್ತಾನಕ್ಕೆ ಸೇನೆಗಳನ್ನು ನುಗ್ಗಿಸಿ ಮುಂಬೈ ದಾಳಿಯ ಸಂಚುಕೋರ ಮಸೂದ್ ಅಝರ್ ಆಗಲೀ ಅಥವಾ ಲಷ್ಕರೆ ತೈಯಬಾದ ರಕ್ಕರೇ ಆಗಲೀ ಸೆರೆಹಿಡಿದು ಭಾರತಕ್ಕೆ ಕರೆತನ್ನಿ ಎಂದು ನಾವು ಹೇಳುತ್ತಿದ್ದೇವೆ. ಟ್ರಂಪ್​ಗೆ ಸಾಧ್ಯವಾಗುತ್ತೆ ಎಂದಾದರೆ ಮೋದಿಜಿ ನೀವೇನೂ ಕಡಿಮೆ ಅಲ್ಲ. ನೀವೂ ಕೂಡ ಈ ಕೆಲಸ ಮಾಡಬಹುದು’ ಎಂದು ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯ ಮಿಶ್ರಿತ ವಾಗ್ದಾಳಿ ಮಾಡಿದ್ದಾರೆ ಒವೈಸಿ.

ಇದನ್ನೂ ಓದಿ: ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ

ಶನಿವಾರ ತಡರಾತ್ರಿ ಅಮೆರಿಕ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ವೆನಿಜುವೆಲಾ ಅಧ್ಯಕ್ಷರ ಮಿಲಿಟರಿ ಬೇಸ್​ನಲ್ಲಿರುವ ಅವರ ಮನೆಗೆ ನುಗ್ಗಿ ನಿಕೋಲಾಸ್ ಮಡುರೊ ಮತ್ತವರ ಪತ್ನಿಯನ್ನು ಸೆರೆ ಹಿಡಿದಿದೆ. ನ್ಯೂಯಾರ್ಕ್​ಗೆ ಕರೆದೊಯ್ಯಲಾಗಿದ್ದು, ಕೋರ್ಟ್​ನಲ್ಲಿ ಹಾಜರುಪಡಿಸಿ ನಂತರ ಇದೀಗ ಬ್ರೂಕ್​ಲಿನ್​ನ ಮೆಟ್ರೊಪೊಲಿಟನ್ ಜೈಲಿನಲ್ಲಿ ಇಡಲಾಗಿದೆ.

ಇದೇ ವೇಳೆ, ನಿಕೋಲಾಸ್ ಮಡುರೊ ಜಾಗಕ್ಕೆ ವೆನಿಜುವೆಲಾಗೆ ಹಂಗಾಮಿ ಅಧ್ಯಕ್ಷರಾಗಿ ಉಪಾಧ್ಯಕ್ಷ ಡೆಲ್ಸಿ ರಾಡ್ರಿಗೆಸ್ ಅವರಿಗೆ ಅಲ್ಲಿಯ ಕೋರ್ಟ್ ಜವಾಬ್ದಾರಿ ಕೊಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:55 pm, Sun, 4 January 26

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ